ಆಂದೋಲನ ಪುರವಣಿ

ಯೋಗ ಕ್ಷೇಮ : ಕಿಡ್ನಿ ಸ್ಟೋನ್: ಸ್ಪಷ್ಟತೆ ಇದ್ದರೆ ಅಪಾಯವಿಲ್ಲ

ಕಿಡ್ನಿ ಸ್ಟೋನ್ ಸಮಸ್ಯೆ ಈಗ ಸಾಮಾನ್ಯ ಎಂಬಂತಾಗಿದೆ. ಅತ್ಯಾಧುನಿಕ ಚಿಕಿತ್ಸೆಗಳಿಂದ ಇದನ್ನು ನಿವಾರಣೆ ಮಾಡಬಹುದಾದರೂ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಉತ್ತಮ.
ಹೆಚ್ಚು ನೀರು ಕುಡಿಯುವುದು, ಉತ್ತಮ ಆಹಾರ ಸೇವಿಸುವುದರಿಂದಲೇ ಕಿಡ್ನಿಯಲ್ಲಿ ಕಲ್ಲಾಗುವುದನ್ನು ತಪ್ಪಿಸಿ ಆರೋಗ್ಯಯುತ ಜೀವನ ನಡೆಸಬಹುದು.
ತಿಳಿದಿರಬೇಕಾದ ಅಂಶಗಳು
* ದೇಹದಲ್ಲಿ ಉಪ್ಪು, ಕೆಲವು ಲವಣಾಂಶಗಳು ಹರಳಿನ ರೂಪಕ್ಕೆ ಮಾರ್ಪಟ್ಟು ಕಿಡ್ನಿಯಲ್ಲಿ ಸೇರುತ್ತವೆ. ಇವುಗಳನ್ನೇ ಸರಳವಾಗಿ ಕಿಡ್ನಿ ಸ್ಟೋನ್ ಎನ್ನುವುದು.
* ಹೆಚ್ಚು ನೀರು ಅಥವ ನೀರಿ ಅಂಶ ಹೆಚ್ಚಿರುವ ಆಹಾರ ಸೇವನೆಯಿಂದ ಘನ ರೂಪಕ್ಕೆ ತಿರುಗಿನ ಅರಳುಗಳು ಕರಗಿ ಮೂತ್ರದೊಂದಿಗೆ ಹೊರಗೆ ಬರುತ್ತವೆ.
* ನೀರಿನ ಸೇವನೆ ಕಡಿಮೆಯಾದಷ್ಟೂ ದೇಹದಲ್ಲಿನ ಲವಣಾಂಶಗಳು ಘನ ರೂಪಕ್ಕೆ ತಿರುಗಿ ಸಮಸ್ಯೆ ಮತ್ತಷ್ಟು ಜಟಿಲವಾಗುತ್ತಾ ಹೋಗುತ್ತದೆ.
* ಹೊಟ್ಟೆಯ ಕೆಳಗೆ, ಪೆಕ್ಕೆಲುಬುಗಳ ಬಳಿ ನೋವು ಕಾಣಿಸಿಕೊಳ್ಳುವುದು, ಮೂತ್ರ ಮಾಡುವಾಗ ನೋವುಂಟಾಗುವುದು ಕಿಡ್ನಿ ಸ್ಟೋನ್‌ನ ಲಕ್ಷಣ.
* ಕಿಡ್ನಿ ಸ್ಟೋನ್ ಅನುವಂಶೀಯವೂ ಹೌದು. ವೈದ್ಯರ ಸಲಹೆ ಪಡೆದು ಉತ್ತಮ ಆಹಾರ ಕ್ರಮ ರೂಢಿಸಿಕೊಂಡರೆ ಇದನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು.
* ಬೇರೆ ಬೇರೆ ಆರೋಗ್ಯ ಸಮಸ್ಯೆಗಳಿಗೆ ಮಾತ್ರೆಗಳನ್ನು ಹೆಚ್ಚಾಗಿ ತೆಗೆದುಕೊಳ್ಳುವುದರಿಂದಲೂ ಕಿಡ್ನಿ ಸ್ಟೋನ್ ಉಂಟಾಗುತ್ತದೆ.
* ನಾವು ಸೇವಿಸುವ ನೀರಿನಲ್ಲಿ ಹೆಚ್ಚಿನ ಕ್ಯಾಲ್ಸಿಯಂ, ಲವಣಾಂಶಗಳು ಇದ್ದರೆ ಅದರಿಂದಲೂ ಕಿಡ್ನಿ ಸ್ಟೋನ್ ಉಂಟಾಗಬಹುದು.
* ದಿನಕ್ಕೆ ಕನಿಷ್ಟ ೪-೬ ಲೀ. ನೀರು ಅಥವಾ ಪೇಯಗಳ ಸೇವನೆಯಿಂದ ಕಿಡ್ನಿ ಸ್ಟೋನ್ ಉಂಟಾಗುವುದನ್ನು ತಡೆಯಬಹುದು.
* ಅಕ್ಸಲೇಟ್ ಅಂಶ ಅಧಿಕವಾಗಿರುವ ಮಾಂಸ, ನಟ್ಸ್, ಬ್ರೋಕಲಿ ಮುಂತಾದ ಆಹಾರಗಳ ಸೇವನೆಗೆ ಮಿತಿ ಹೇರಬೇಕು.
* ತಂಬಾಕು, ಗುಟ್ಕಾ ಸೇವೆನೆ ಅತಿಯಾದರೂ ಕಿಡ್ನಿ ಸ್ಟೋನ್ ಉಂಟಾಗುತ್ತದೆ. ಹಾಗಾಗಿ ಇವುಗಳಿಗೆ ಕಡಿವಾಣ ಹಾಕಬೇಕು.
* ದೇಹದಲ್ಲಿ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿ ಇಟ್ಟುಕೊಂಡು, ಅಧಿಕ ಬೊಜ್ಜು ಉಂಟು ಮಾಡುವ ಆಹಾರಗಳನ್ನು ವರ್ಜಿಸಬೇಕು.
* ಎಳನೀರು, ನಿಂಬೆರಸ, ಬಾರ್ಲಿ ನೀರು, ಬಾಳೆ ದಿಂಡಿನ ರಸ, ದಾಳಿಂಬೆ ಜ್ಯೂಸ್, ಹಣ್ಣುಗಳ ಸೇವನೆ ಒಳ್ಳೆಯದು.
andolanait

Recent Posts

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

2 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

2 hours ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

5 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

5 hours ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

5 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

6 hours ago