ಆಂದೋಲನ ಪುರವಣಿ

ಯೋಗ ಕ್ಷೇಮ : ಕಿಡ್ನಿ ಸ್ಟೋನ್: ಸ್ಪಷ್ಟತೆ ಇದ್ದರೆ ಅಪಾಯವಿಲ್ಲ

ಕಿಡ್ನಿ ಸ್ಟೋನ್ ಸಮಸ್ಯೆ ಈಗ ಸಾಮಾನ್ಯ ಎಂಬಂತಾಗಿದೆ. ಅತ್ಯಾಧುನಿಕ ಚಿಕಿತ್ಸೆಗಳಿಂದ ಇದನ್ನು ನಿವಾರಣೆ ಮಾಡಬಹುದಾದರೂ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಉತ್ತಮ.
ಹೆಚ್ಚು ನೀರು ಕುಡಿಯುವುದು, ಉತ್ತಮ ಆಹಾರ ಸೇವಿಸುವುದರಿಂದಲೇ ಕಿಡ್ನಿಯಲ್ಲಿ ಕಲ್ಲಾಗುವುದನ್ನು ತಪ್ಪಿಸಿ ಆರೋಗ್ಯಯುತ ಜೀವನ ನಡೆಸಬಹುದು.
ತಿಳಿದಿರಬೇಕಾದ ಅಂಶಗಳು
* ದೇಹದಲ್ಲಿ ಉಪ್ಪು, ಕೆಲವು ಲವಣಾಂಶಗಳು ಹರಳಿನ ರೂಪಕ್ಕೆ ಮಾರ್ಪಟ್ಟು ಕಿಡ್ನಿಯಲ್ಲಿ ಸೇರುತ್ತವೆ. ಇವುಗಳನ್ನೇ ಸರಳವಾಗಿ ಕಿಡ್ನಿ ಸ್ಟೋನ್ ಎನ್ನುವುದು.
* ಹೆಚ್ಚು ನೀರು ಅಥವ ನೀರಿ ಅಂಶ ಹೆಚ್ಚಿರುವ ಆಹಾರ ಸೇವನೆಯಿಂದ ಘನ ರೂಪಕ್ಕೆ ತಿರುಗಿನ ಅರಳುಗಳು ಕರಗಿ ಮೂತ್ರದೊಂದಿಗೆ ಹೊರಗೆ ಬರುತ್ತವೆ.
* ನೀರಿನ ಸೇವನೆ ಕಡಿಮೆಯಾದಷ್ಟೂ ದೇಹದಲ್ಲಿನ ಲವಣಾಂಶಗಳು ಘನ ರೂಪಕ್ಕೆ ತಿರುಗಿ ಸಮಸ್ಯೆ ಮತ್ತಷ್ಟು ಜಟಿಲವಾಗುತ್ತಾ ಹೋಗುತ್ತದೆ.
* ಹೊಟ್ಟೆಯ ಕೆಳಗೆ, ಪೆಕ್ಕೆಲುಬುಗಳ ಬಳಿ ನೋವು ಕಾಣಿಸಿಕೊಳ್ಳುವುದು, ಮೂತ್ರ ಮಾಡುವಾಗ ನೋವುಂಟಾಗುವುದು ಕಿಡ್ನಿ ಸ್ಟೋನ್‌ನ ಲಕ್ಷಣ.
* ಕಿಡ್ನಿ ಸ್ಟೋನ್ ಅನುವಂಶೀಯವೂ ಹೌದು. ವೈದ್ಯರ ಸಲಹೆ ಪಡೆದು ಉತ್ತಮ ಆಹಾರ ಕ್ರಮ ರೂಢಿಸಿಕೊಂಡರೆ ಇದನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು.
* ಬೇರೆ ಬೇರೆ ಆರೋಗ್ಯ ಸಮಸ್ಯೆಗಳಿಗೆ ಮಾತ್ರೆಗಳನ್ನು ಹೆಚ್ಚಾಗಿ ತೆಗೆದುಕೊಳ್ಳುವುದರಿಂದಲೂ ಕಿಡ್ನಿ ಸ್ಟೋನ್ ಉಂಟಾಗುತ್ತದೆ.
* ನಾವು ಸೇವಿಸುವ ನೀರಿನಲ್ಲಿ ಹೆಚ್ಚಿನ ಕ್ಯಾಲ್ಸಿಯಂ, ಲವಣಾಂಶಗಳು ಇದ್ದರೆ ಅದರಿಂದಲೂ ಕಿಡ್ನಿ ಸ್ಟೋನ್ ಉಂಟಾಗಬಹುದು.
* ದಿನಕ್ಕೆ ಕನಿಷ್ಟ ೪-೬ ಲೀ. ನೀರು ಅಥವಾ ಪೇಯಗಳ ಸೇವನೆಯಿಂದ ಕಿಡ್ನಿ ಸ್ಟೋನ್ ಉಂಟಾಗುವುದನ್ನು ತಡೆಯಬಹುದು.
* ಅಕ್ಸಲೇಟ್ ಅಂಶ ಅಧಿಕವಾಗಿರುವ ಮಾಂಸ, ನಟ್ಸ್, ಬ್ರೋಕಲಿ ಮುಂತಾದ ಆಹಾರಗಳ ಸೇವನೆಗೆ ಮಿತಿ ಹೇರಬೇಕು.
* ತಂಬಾಕು, ಗುಟ್ಕಾ ಸೇವೆನೆ ಅತಿಯಾದರೂ ಕಿಡ್ನಿ ಸ್ಟೋನ್ ಉಂಟಾಗುತ್ತದೆ. ಹಾಗಾಗಿ ಇವುಗಳಿಗೆ ಕಡಿವಾಣ ಹಾಕಬೇಕು.
* ದೇಹದಲ್ಲಿ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿ ಇಟ್ಟುಕೊಂಡು, ಅಧಿಕ ಬೊಜ್ಜು ಉಂಟು ಮಾಡುವ ಆಹಾರಗಳನ್ನು ವರ್ಜಿಸಬೇಕು.
* ಎಳನೀರು, ನಿಂಬೆರಸ, ಬಾರ್ಲಿ ನೀರು, ಬಾಳೆ ದಿಂಡಿನ ರಸ, ದಾಳಿಂಬೆ ಜ್ಯೂಸ್, ಹಣ್ಣುಗಳ ಸೇವನೆ ಒಳ್ಳೆಯದು.
andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

23 mins ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

7 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

7 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

7 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

7 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

7 hours ago