ಪುತ್ತರಿರ ಕರುಣ್ ಕಾಳಯ್ಯ, ಚೆಟ್ಟಳ್ಳಿ
ಈಗೀಗ ಅತಿ ಹೆಚ್ಚು ಬೇಡಿಕೆ ಕಂಡುಕೊಂಡಿರುವ ಅವಕಾಡೋ ಅಥವಾ ಬೆಣ್ಣೆಹಣ್ಣು ರೈತರ ಮುಂದೆ ಹೊಸ ಸಾಧ್ಯತೆ ತೆರೆದಿಟ್ಟಿರುವುದು ಸತ್ಯ. ಅತ್ಯಧಿಕ ಪೋಷಕಾಂಶಗಳು, ಸಕ್ಕರೆ ಕಾಯಿಲೆ ಇರುವವರಿಗೆ ಉತ್ತಮ ಎನ್ನಿಸಿಕೊಂಡಿರುವ ಬೆಣ್ಣೆಹಣ್ಣು ಕೃಷಿಯಿಂದ ರೈತರ ಬಾಳಲ್ಲೂ ಸಿಹಿ ತುಂಬಲಿದೆ.
ಮೆಕ್ಸಿಕೋ ಮತ್ತು ಮಧ್ಯ ಅಮೆರಿಕಾಕ್ಕೆ ಸೇರಿದ ಅವಕಾಡೋವನ್ನು ೧೯ನೇ ಶತವಾನದಲ್ಲೇ ಕ್ರೈಸ್ತ ಮಿಷನರಿಗಳು ಭಾರತಕ್ಕೆ ಪರಿಚಯಿಸಿದವು. ಪ್ರಸ್ತುತ ೮೦ಕ್ಕೂ ಹೆಚ್ಚು ದೇಶಗಳಲ್ಲಿ ಒಟ್ಟು ೭.೨೬ ಲಕ್ಷ ಹೆಕ್ಟೇರು ಪ್ರದೇಶಗಳಲ್ಲಿ ಇದನ್ನು ಬೆಳೆಸಲಾಗುತ್ತಿದೆ. ವಿಶ್ವದ ಒಟ್ಟು ಉತ್ಪಾದನೆುಂಲ್ಲಿ ಶೇ. ೧೧.೧ರಷ್ಟು ಏಷ್ಯಾ ಖಂಡದಲ್ಲಿ ಬೆಳೆಯಲಾಗುತ್ತಿದೆ. ಈಗೀಗ ಭಾರತದಲ್ಲಿ ಇದರ ಕೃಷಿ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ.
ಕಾಫಿ ತೋಟಗಳಲ್ಲಿ ಅಂತರ ಬೆಳೆಯಾಗಿ ಬೆಳೆಯಬಹುದಾದ ಬೆಣ್ಣೆಹಣ್ಣನ್ನು ಕೊಡಗಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೆಡಲಾಗಿದೆ. ಚೆಟ್ಟಳ್ಳಿ ಕೇಂದ್ರೀಯ ತೋಟಗಾರಿಕಾ ಕೇಂದ್ರದಲ್ಲಿ ಅವಕಾಡೊ ತಳಿ ಅಭಿವೃದ್ಧಿ ಹಾಗೂ ತರಬೇತಿ ಕಾರ್ಯಾಗಾರವೂ ನಡೆಯುತ್ತಿರುವುದರಿಂದ ಹೆಚ್ಚಿನ ಕೃಷಿಕರಿಗೆ ಅನುಕೂಲವಾಗುತ್ತಿದೆ.
ಬೆಣ್ಣೆಹಣ್ಣಿನ ಬೇಸಾಯ ಕ್ರಮಗಳು
* ಬೀಜಗಳ ಮೂಲಕ ಸಸಿ ಬೆಳೆಸಬಹುದಾದರೂ ಉತ್ತಮ ಗಿಡಗಳ ಕಾಂಡಗಳನ್ನು ಕಸಿಮಾಡಿ ಸಸಿ ಬೆಳೆಸುವುದು ಉತ್ತಮ ವಿಧಾನ
* ಸೀಳುಕಸಿ, ಪ್ಯಾಚ್ ಬಡ್ಡಿಂಗ್ ಮತ್ತು ಎಪಿಕೋ ಟೈಲ್ಗ್ರಾಫ್ಟಿಂಗ್ ವಿಧಾನಗಳಿಂದಲೂ ಸಸಿ ಪೋಷಣೆ
* ಬೆಣ್ಣೆಹಣ್ಣು ೧೫೦ ಪ್ರಬೇಧಗಳನ್ನು ಒಳಗೊಂಡಿದ್ದು, ವೆಸ್ಟ್ಇಂಡಿಸ್ ಪ್ರಬೇಧ, ಮೆಕ್ಸಿಕನ್ ಪ್ರಬೇಧ, ಗ್ವಾಟೆಮಲನ್ ಪ್ರಬೇಧ ಮುಖ್ಯವಾದವು.
* ಕರ್ನಾಟಕದಲ್ಲಿ ಅರ್ಕಾಸುಪ್ರೀಮ್ ತಳಿಯ ಪ್ರಮಾಣ ಹೆಚ್ಚಿದೆ. ಇದನ್ನುಕೊಡಗು ಜಿಲ್ಲೆುಂ ಚೆಟ್ಟಳ್ಳಿ ಕೇಂದ್ರೀಯ ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ಬಿಡುಗಡೆ ವಾಡಲಾಗಿದೆ.
ಚೆಟ್ಟಳ್ಳಿಯಲ್ಲಿ ತಳಿ ಅಭಿವೃದ್ಧಿ
ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ಚೆಟ್ಟಳಿುಂ ಕೇಂದ್ರೀಯ ತೋಟ ಗಾರಿಕಾ ಕೇಂದ್ರದಲ್ಲಿ ಅವಕಾಡೋ ತಳಿ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಬೆಣ್ಣೆಹಣ್ಣು ರೈತರಿಗೆ ಹೊಸ ಸಾಧ್ಯತೆ ತೆರೆದಿಟ್ಟಿದ್ದು, ಈ ಬಾರಿ ಒಂದು ಲಕ್ಷಗಿಡಗಳ ಬೇಡಿಕೆ ಬಂದಿದೆ ಎನ್ನುತ್ತಾರೆ ಚೆಟ್ಟಳ್ಳಿ ಕೇಂದ್ರದ ಉಪನಿರ್ದೇಶಕ ಡಾ. ಎಸ್ ರಾಜೇಂದ್ರನ್.
ಕೊಡಗಿನ ಬಟರ್ಫ್ರೂಟ್ ತಳಿಗೆ ಬೇಡಿಕೆ
ದಶಕಗಳಿಂದಲೂ ಕೊಡಗಿನ ವಾತಾವರಣಕ್ಕೆ ಸೂಕ್ತವಾದ ನಾಟಿ ತಳಿಗಳ ಬೆಳೆಯಲಾಗುತ್ತಿದ್ದು, ಇವುಗಳಿಗೆ ಹೆಚ್ಚಿನ ಬೇಡಿಕೆ ಇರಲಿಲ್ಲ. ಕಳೆದ ಐದಾರು ವರ್ಷಗಳಿಂದ ಬಟರ್ ಫ್ರೂಟ್ಗೆ ಬೇಡಿಕೆ ಹೆಚ್ಚಿದಂತೆ ಕೊಡಗಿನ ಬಟರ್ಫ್ರೂಟ್ ತಳಿಗೆ ಬೇಡಿಕೆ ಹೆಚ್ಚತೊಡಗಿದೆ. ನೆರೆಯ ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಚಾಮರಾಜನಗರ, ಚಿಕ್ಕಮಂಗಳೂರು, ಮೈಸೂರು ಸೇರಿ ಇನ್ನು ಹಲವೆಡೆ ಕೊಡಗಿನ ಬಟರ್ಫ್ರೂಟ್ ತಳಿಗಳು ವಾರಾಟ ವಾಗುತಿವೆ ಎನ್ನುತ್ತಾರೆ ರಾಜೇಂದ್ರನ್.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…