ಆಂದೋಲನ ಪುರವಣಿ

ಕೊಡಗಿನ ಬಟರ್‌ಫ್ರೂಟ್‌ಗೆ ಸಖತ್ ಡಿಮ್ಯಾಂಡ್ !

ಪುತ್ತರಿರ ಕರುಣ್ ಕಾಳಯ್ಯ, ಚೆಟ್ಟಳ್ಳಿ

ಈಗೀಗ ಅತಿ ಹೆಚ್ಚು ಬೇಡಿಕೆ ಕಂಡುಕೊಂಡಿರುವ ಅವಕಾಡೋ ಅಥವಾ ಬೆಣ್ಣೆಹಣ್ಣು ರೈತರ ಮುಂದೆ ಹೊಸ ಸಾಧ್ಯತೆ ತೆರೆದಿಟ್ಟಿರುವುದು ಸತ್ಯ. ಅತ್ಯಧಿಕ ಪೋಷಕಾಂಶಗಳು, ಸಕ್ಕರೆ ಕಾಯಿಲೆ ಇರುವವರಿಗೆ ಉತ್ತಮ ಎನ್ನಿಸಿಕೊಂಡಿರುವ ಬೆಣ್ಣೆಹಣ್ಣು ಕೃಷಿಯಿಂದ ರೈತರ ಬಾಳಲ್ಲೂ ಸಿಹಿ ತುಂಬಲಿದೆ.
ಮೆಕ್ಸಿಕೋ ಮತ್ತು ಮಧ್ಯ ಅಮೆರಿಕಾಕ್ಕೆ ಸೇರಿದ ಅವಕಾಡೋವನ್ನು ೧೯ನೇ ಶತವಾನದಲ್ಲೇ ಕ್ರೈಸ್ತ ಮಿಷನರಿಗಳು ಭಾರತಕ್ಕೆ ಪರಿಚಯಿಸಿದವು. ಪ್ರಸ್ತುತ ೮೦ಕ್ಕೂ ಹೆಚ್ಚು ದೇಶಗಳಲ್ಲಿ ಒಟ್ಟು ೭.೨೬ ಲಕ್ಷ ಹೆಕ್ಟೇರು ಪ್ರದೇಶಗಳಲ್ಲಿ ಇದನ್ನು ಬೆಳೆಸಲಾಗುತ್ತಿದೆ. ವಿಶ್ವದ ಒಟ್ಟು ಉತ್ಪಾದನೆುಂಲ್ಲಿ ಶೇ. ೧೧.೧ರಷ್ಟು ಏಷ್ಯಾ ಖಂಡದಲ್ಲಿ ಬೆಳೆಯಲಾಗುತ್ತಿದೆ. ಈಗೀಗ ಭಾರತದಲ್ಲಿ ಇದರ ಕೃಷಿ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ.

ಕಾಫಿ ತೋಟಗಳಲ್ಲಿ ಅಂತರ ಬೆಳೆಯಾಗಿ ಬೆಳೆಯಬಹುದಾದ ಬೆಣ್ಣೆಹಣ್ಣನ್ನು ಕೊಡಗಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೆಡಲಾಗಿದೆ. ಚೆಟ್ಟಳ್ಳಿ ಕೇಂದ್ರೀಯ ತೋಟಗಾರಿಕಾ ಕೇಂದ್ರದಲ್ಲಿ ಅವಕಾಡೊ ತಳಿ ಅಭಿವೃದ್ಧಿ ಹಾಗೂ ತರಬೇತಿ ಕಾರ್ಯಾಗಾರವೂ ನಡೆಯುತ್ತಿರುವುದರಿಂದ ಹೆಚ್ಚಿನ ಕೃಷಿಕರಿಗೆ ಅನುಕೂಲವಾಗುತ್ತಿದೆ.

ಬೆಣ್ಣೆಹಣ್ಣಿನ ಬೇಸಾಯ ಕ್ರಮಗಳು

* ಬೀಜಗಳ ಮೂಲಕ ಸಸಿ ಬೆಳೆಸಬಹುದಾದರೂ ಉತ್ತಮ ಗಿಡಗಳ ಕಾಂಡಗಳನ್ನು ಕಸಿಮಾಡಿ ಸಸಿ ಬೆಳೆಸುವುದು ಉತ್ತಮ ವಿಧಾನ

* ಸೀಳುಕಸಿ, ಪ್ಯಾಚ್ ಬಡ್ಡಿಂಗ್ ಮತ್ತು ಎಪಿಕೋ ಟೈಲ್‌ಗ್ರಾಫ್ಟಿಂಗ್ ವಿಧಾನಗಳಿಂದಲೂ ಸಸಿ ಪೋಷಣೆ

* ಬೆಣ್ಣೆಹಣ್ಣು ೧೫೦ ಪ್ರಬೇಧಗಳನ್ನು ಒಳಗೊಂಡಿದ್ದು, ವೆಸ್ಟ್‌ಇಂಡಿಸ್ ಪ್ರಬೇಧ, ಮೆಕ್ಸಿಕನ್ ಪ್ರಬೇಧ, ಗ್ವಾಟೆಮಲನ್ ಪ್ರಬೇಧ ಮುಖ್ಯವಾದವು.

* ಕರ್ನಾಟಕದಲ್ಲಿ ಅರ್ಕಾಸುಪ್ರೀಮ್ ತಳಿಯ ಪ್ರಮಾಣ ಹೆಚ್ಚಿದೆ. ಇದನ್ನುಕೊಡಗು ಜಿಲ್ಲೆುಂ ಚೆಟ್ಟಳ್ಳಿ ಕೇಂದ್ರೀಯ ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ಬಿಡುಗಡೆ ವಾಡಲಾಗಿದೆ.


ಚೆಟ್ಟಳ್ಳಿಯಲ್ಲಿ ತಳಿ ಅಭಿವೃದ್ಧಿ
ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ಚೆಟ್ಟಳಿುಂ ಕೇಂದ್ರೀಯ ತೋಟ ಗಾರಿಕಾ ಕೇಂದ್ರದಲ್ಲಿ ಅವಕಾಡೋ ತಳಿ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಬೆಣ್ಣೆಹಣ್ಣು ರೈತರಿಗೆ ಹೊಸ ಸಾಧ್ಯತೆ ತೆರೆದಿಟ್ಟಿದ್ದು, ಈ ಬಾರಿ ಒಂದು ಲಕ್ಷಗಿಡಗಳ ಬೇಡಿಕೆ ಬಂದಿದೆ ಎನ್ನುತ್ತಾರೆ ಚೆಟ್ಟಳ್ಳಿ ಕೇಂದ್ರದ ಉಪನಿರ್ದೇಶಕ ಡಾ. ಎಸ್ ರಾಜೇಂದ್ರನ್.


ಕೊಡಗಿನ ಬಟರ್‌ಫ್ರೂಟ್ ತಳಿಗೆ ಬೇಡಿಕೆ
ದಶಕಗಳಿಂದಲೂ ಕೊಡಗಿನ ವಾತಾವರಣಕ್ಕೆ ಸೂಕ್ತವಾದ ನಾಟಿ ತಳಿಗಳ ಬೆಳೆಯಲಾಗುತ್ತಿದ್ದು, ಇವುಗಳಿಗೆ ಹೆಚ್ಚಿನ ಬೇಡಿಕೆ ಇರಲಿಲ್ಲ. ಕಳೆದ ಐದಾರು ವರ್ಷಗಳಿಂದ ಬಟರ್ ಫ್ರೂಟ್‌ಗೆ ಬೇಡಿಕೆ ಹೆಚ್ಚಿದಂತೆ ಕೊಡಗಿನ ಬಟರ್‌ಫ್ರೂಟ್ ತಳಿಗೆ ಬೇಡಿಕೆ ಹೆಚ್ಚತೊಡಗಿದೆ. ನೆರೆಯ ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಚಾಮರಾಜನಗರ, ಚಿಕ್ಕಮಂಗಳೂರು, ಮೈಸೂರು ಸೇರಿ ಇನ್ನು ಹಲವೆಡೆ ಕೊಡಗಿನ ಬಟರ್‌ಫ್ರೂಟ್ ತಳಿಗಳು ವಾರಾಟ ವಾಗುತಿವೆ ಎನ್ನುತ್ತಾರೆ ರಾಜೇಂದ್ರನ್.

andolanait

Recent Posts

ಬೆಟ್ಟಳ್ಳಿ ಮಾರಮ್ಮ ಜಾತ್ರೆಯನ್ನು ಯಶಸ್ವಿಗೊಳಿಸಿ: ತಹಶೀಲ್ದಾರ್‌ ಚೈತ್ರಾ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವನ್ನು…

17 mins ago

ಓದುಗರ ಪತ್ರ: ವಿದ್ಯುತ್ ದರ ಏರಿಕೆ ಜನಸಾಮಾನ್ಯರಿಗೆ ಶಾಕ್

ರಾಜ್ಯದ ಐದು ಎಸ್ಕಾಂಗಳು ಸುಮಾರು ರೂ.೪,೫೦೦ ಕೋಟಿ ನಷ್ಟದ ನೆಪವೊಡ್ಡಿ ಪ್ರತಿ ಯೂನಿಟ್‌ಗೆ ೯೯ ಪೈಸೆಯವರೆಗೆ ದರ ಏರಿಕೆಗೆ ಪ್ರಸ್ತಾವನೆ…

60 mins ago

ಓದುಗರ ಪತ್ರ: ಬೃಂದಾವನ: ಟಿಕೆಟ್ ಹಣ ವಾಪಸ್ ನೀಡಿ

ವಿಶ್ವವಿಖ್ಯಾತ ಕೆ ಆರ್‌ಎಸ್‌ನ ಬೃಂದಾವನ ಗಾರ್ಡನ್‌ನಲ್ಲಿ ಫೆ.೨೨ರ ಸಂಜೆ ಸಂಗೀತ ನೃತ್ಯ ಕಾರಂಜಿ ತಾಂತ್ರಿಕ ಕಾರಣದಿಂದ ಚಾಲನೆಗೊಳ್ಳದ ಕಾರಣ ಅಲ್ಲಿ…

1 hour ago

ಓದುಗರ ಪತ್ರ: ಇರ್ವಿನ್ ರಸ್ತೆ ಫುಟ್‌ಪಾತ್ ಒತ್ತುವರಿ ತೆರವುಗೊಳಿಸಿ

ಮೈಸೂರು ನಗರದ ಇರ್ವಿನ್ ರಸ್ತೆಯಲ್ಲಿ ಸಾಲು-ಸಾಲಾಗಿ ಫರ್ನಿಚರ್ಸ್ ಅಂಗಡಿಯವರು ತಮ್ಮ ಅಂಗಡಿಯ ಫರ್ನಿಚರ್ಸ್‌ಗಳನ್ನು ಫುಟ್‌ಪಾತ್‌ಗಳ ಮೇಲೆ ಜೋಡಿಸಿರುವುದರಿಂದ ಪಾದಚಾರಿಗಳಿಗೆ ತೀವ್ರ…

1 hour ago

ಹೂ ಮಳೆಗಾಗಿ ಕಾದಿರುವ ಕಾಫಿ ಬೆಳೆಗಾರರು

ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

4 hours ago

ಫೆ.26, 27ಕ್ಕೆ ಕಡಬೂರಿನಲ್ಲಿ ಶಿವ, ಗಣೇಶ ದೇವಸ್ಥಾನ ಲೋಕಾರ್ಪಣೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…

4 hours ago