ಆಂದೋಲನ ಪುರವಣಿ

ಕೊಡಗಿನ ಬಟರ್‌ಫ್ರೂಟ್‌ಗೆ ಸಖತ್ ಡಿಮ್ಯಾಂಡ್ !

ಪುತ್ತರಿರ ಕರುಣ್ ಕಾಳಯ್ಯ, ಚೆಟ್ಟಳ್ಳಿ

ಈಗೀಗ ಅತಿ ಹೆಚ್ಚು ಬೇಡಿಕೆ ಕಂಡುಕೊಂಡಿರುವ ಅವಕಾಡೋ ಅಥವಾ ಬೆಣ್ಣೆಹಣ್ಣು ರೈತರ ಮುಂದೆ ಹೊಸ ಸಾಧ್ಯತೆ ತೆರೆದಿಟ್ಟಿರುವುದು ಸತ್ಯ. ಅತ್ಯಧಿಕ ಪೋಷಕಾಂಶಗಳು, ಸಕ್ಕರೆ ಕಾಯಿಲೆ ಇರುವವರಿಗೆ ಉತ್ತಮ ಎನ್ನಿಸಿಕೊಂಡಿರುವ ಬೆಣ್ಣೆಹಣ್ಣು ಕೃಷಿಯಿಂದ ರೈತರ ಬಾಳಲ್ಲೂ ಸಿಹಿ ತುಂಬಲಿದೆ.
ಮೆಕ್ಸಿಕೋ ಮತ್ತು ಮಧ್ಯ ಅಮೆರಿಕಾಕ್ಕೆ ಸೇರಿದ ಅವಕಾಡೋವನ್ನು ೧೯ನೇ ಶತವಾನದಲ್ಲೇ ಕ್ರೈಸ್ತ ಮಿಷನರಿಗಳು ಭಾರತಕ್ಕೆ ಪರಿಚಯಿಸಿದವು. ಪ್ರಸ್ತುತ ೮೦ಕ್ಕೂ ಹೆಚ್ಚು ದೇಶಗಳಲ್ಲಿ ಒಟ್ಟು ೭.೨೬ ಲಕ್ಷ ಹೆಕ್ಟೇರು ಪ್ರದೇಶಗಳಲ್ಲಿ ಇದನ್ನು ಬೆಳೆಸಲಾಗುತ್ತಿದೆ. ವಿಶ್ವದ ಒಟ್ಟು ಉತ್ಪಾದನೆುಂಲ್ಲಿ ಶೇ. ೧೧.೧ರಷ್ಟು ಏಷ್ಯಾ ಖಂಡದಲ್ಲಿ ಬೆಳೆಯಲಾಗುತ್ತಿದೆ. ಈಗೀಗ ಭಾರತದಲ್ಲಿ ಇದರ ಕೃಷಿ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ.

ಕಾಫಿ ತೋಟಗಳಲ್ಲಿ ಅಂತರ ಬೆಳೆಯಾಗಿ ಬೆಳೆಯಬಹುದಾದ ಬೆಣ್ಣೆಹಣ್ಣನ್ನು ಕೊಡಗಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೆಡಲಾಗಿದೆ. ಚೆಟ್ಟಳ್ಳಿ ಕೇಂದ್ರೀಯ ತೋಟಗಾರಿಕಾ ಕೇಂದ್ರದಲ್ಲಿ ಅವಕಾಡೊ ತಳಿ ಅಭಿವೃದ್ಧಿ ಹಾಗೂ ತರಬೇತಿ ಕಾರ್ಯಾಗಾರವೂ ನಡೆಯುತ್ತಿರುವುದರಿಂದ ಹೆಚ್ಚಿನ ಕೃಷಿಕರಿಗೆ ಅನುಕೂಲವಾಗುತ್ತಿದೆ.

ಬೆಣ್ಣೆಹಣ್ಣಿನ ಬೇಸಾಯ ಕ್ರಮಗಳು

* ಬೀಜಗಳ ಮೂಲಕ ಸಸಿ ಬೆಳೆಸಬಹುದಾದರೂ ಉತ್ತಮ ಗಿಡಗಳ ಕಾಂಡಗಳನ್ನು ಕಸಿಮಾಡಿ ಸಸಿ ಬೆಳೆಸುವುದು ಉತ್ತಮ ವಿಧಾನ

* ಸೀಳುಕಸಿ, ಪ್ಯಾಚ್ ಬಡ್ಡಿಂಗ್ ಮತ್ತು ಎಪಿಕೋ ಟೈಲ್‌ಗ್ರಾಫ್ಟಿಂಗ್ ವಿಧಾನಗಳಿಂದಲೂ ಸಸಿ ಪೋಷಣೆ

* ಬೆಣ್ಣೆಹಣ್ಣು ೧೫೦ ಪ್ರಬೇಧಗಳನ್ನು ಒಳಗೊಂಡಿದ್ದು, ವೆಸ್ಟ್‌ಇಂಡಿಸ್ ಪ್ರಬೇಧ, ಮೆಕ್ಸಿಕನ್ ಪ್ರಬೇಧ, ಗ್ವಾಟೆಮಲನ್ ಪ್ರಬೇಧ ಮುಖ್ಯವಾದವು.

* ಕರ್ನಾಟಕದಲ್ಲಿ ಅರ್ಕಾಸುಪ್ರೀಮ್ ತಳಿಯ ಪ್ರಮಾಣ ಹೆಚ್ಚಿದೆ. ಇದನ್ನುಕೊಡಗು ಜಿಲ್ಲೆುಂ ಚೆಟ್ಟಳ್ಳಿ ಕೇಂದ್ರೀಯ ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ಬಿಡುಗಡೆ ವಾಡಲಾಗಿದೆ.


ಚೆಟ್ಟಳ್ಳಿಯಲ್ಲಿ ತಳಿ ಅಭಿವೃದ್ಧಿ
ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ಚೆಟ್ಟಳಿುಂ ಕೇಂದ್ರೀಯ ತೋಟ ಗಾರಿಕಾ ಕೇಂದ್ರದಲ್ಲಿ ಅವಕಾಡೋ ತಳಿ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಬೆಣ್ಣೆಹಣ್ಣು ರೈತರಿಗೆ ಹೊಸ ಸಾಧ್ಯತೆ ತೆರೆದಿಟ್ಟಿದ್ದು, ಈ ಬಾರಿ ಒಂದು ಲಕ್ಷಗಿಡಗಳ ಬೇಡಿಕೆ ಬಂದಿದೆ ಎನ್ನುತ್ತಾರೆ ಚೆಟ್ಟಳ್ಳಿ ಕೇಂದ್ರದ ಉಪನಿರ್ದೇಶಕ ಡಾ. ಎಸ್ ರಾಜೇಂದ್ರನ್.


ಕೊಡಗಿನ ಬಟರ್‌ಫ್ರೂಟ್ ತಳಿಗೆ ಬೇಡಿಕೆ
ದಶಕಗಳಿಂದಲೂ ಕೊಡಗಿನ ವಾತಾವರಣಕ್ಕೆ ಸೂಕ್ತವಾದ ನಾಟಿ ತಳಿಗಳ ಬೆಳೆಯಲಾಗುತ್ತಿದ್ದು, ಇವುಗಳಿಗೆ ಹೆಚ್ಚಿನ ಬೇಡಿಕೆ ಇರಲಿಲ್ಲ. ಕಳೆದ ಐದಾರು ವರ್ಷಗಳಿಂದ ಬಟರ್ ಫ್ರೂಟ್‌ಗೆ ಬೇಡಿಕೆ ಹೆಚ್ಚಿದಂತೆ ಕೊಡಗಿನ ಬಟರ್‌ಫ್ರೂಟ್ ತಳಿಗೆ ಬೇಡಿಕೆ ಹೆಚ್ಚತೊಡಗಿದೆ. ನೆರೆಯ ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಚಾಮರಾಜನಗರ, ಚಿಕ್ಕಮಂಗಳೂರು, ಮೈಸೂರು ಸೇರಿ ಇನ್ನು ಹಲವೆಡೆ ಕೊಡಗಿನ ಬಟರ್‌ಫ್ರೂಟ್ ತಳಿಗಳು ವಾರಾಟ ವಾಗುತಿವೆ ಎನ್ನುತ್ತಾರೆ ರಾಜೇಂದ್ರನ್.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

3 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

3 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

4 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

6 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

10 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

10 hours ago