ಆಂದೋಲನ ಪುರವಣಿ

ರೇಖಾಚಿತ್ರಗಳ ಮೂಲಕ ಪಾಠ

ಭೌತಶಾಸ್ತ್ರ ಶಿಕ್ಷಕ ಮೋಹನ್ ಕುಮಾರ್ ಅವರ ಕಲಾ ಪ್ರೀತಿ

– ರಾಜೇಂದ್ರ ಎಸ್, ಮಹದೇವಪುರ

ವೃತ್ತಿಯಲ್ಲಿ ಭೌತಶಾಸ್ತ್ರ ಶಿಕ್ಷಕರು. ಸದ್ಯ ಮೈಸೂರಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಮೈಸೂರು ತಾಲ್ಲೂಕು ವಲಯದ ಶಿಕ್ಷಣ ಸಂಯೋಜಕರಾಗಿ ಸೇವೆ. ಇದರೊಂದಿಗೆ ರೇಖಾ ಚಿತ್ರಗಳನ್ನು ಬಿಡಿಸುವಲ್ಲಿ ಪರಿಣತರು ಯು.ಜಿ. ಮೋಹನ್ ಕುಮಾರ ಆರಾಧ್ಯ.

ಮಕ್ಕಳಿಗೆ ಗುರುತ್ವ, ಅಯಸ್ಕಾಂತ, ವೇಗ, ಚಲನೆ ಸೇರಿ ಭೌತ ವಿಜ್ಞಾನದ ಬಗ್ಗೆ ಪಾಠ ಮಾಡುವುದರ ಜೊತೆಗೆ ಕಲೆಯ ಬಗ್ಗೆಯೂ ಆಸಕ್ತಿ ಮೂಡುವಂತೆ ಮಾಡುತ್ತಿರುವ ಮೋಹನ್ ಕುಮಾರ್ ಅವರು ಸ್ವತಃ ಸಾವಿರಾರು ರೇಖಾಚಿತ್ರಗಳನ್ನು ರಚಿಸಿದ್ದಾರೆ.

ಸಾಹಿತಿಗಳು, ವಿಜ್ಞಾನಿಗಳು, ಪ್ರಸಿದ್ಧ ವ್ಯಕ್ತಿಗಳ ರೇಖಾಚಿತ್ರಗಳನ್ನು ಬಿಡಿಸಲು ನಿತ್ಯವೂ ೩ ಗಂಟೆಗಳನ್ನು ವಿನಿಯೋಗಿಸುವ ಮೋಹನ್ ಕುಮಾರ್ ಈ ಮೂಲಕ ಮಕ್ಕಳಿಗೆ ಸಾಧಕರ ಪರಿಚಯ ಮಾಡಿಕೊಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ನಿತ್ಯವೂ ಒಬ್ಬೊಬ್ಬ ಸಾಧಕರ ಚಿತ್ರ ರಚಿಸಿ ಅದರೊಂದಿಗೆ ಅವರ ಬಗ್ಗೆ ಪುಟ್ಟದೊಂದು ಟಿಪ್ಪಣಿ ಬರೆದು ಎಲ್ಲ ಕಡೆ ಹಂಚುತ್ತಿದ್ದಾರೆ.

೧,೦೦೦ಕ್ಕೂ ಹೆಚ್ಚು ಸಾಧಕ ವ್ಯಕ್ತಿಗಳ ಚಿತ್ರಗಳನ್ನು ರಚಿಸಿರುವ ಇವರು ೫೦ಕ್ಕೂ ಹೆಚ್ಚು ಕಡೆಗಳಲ್ಲಿ ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನ ನೀಡಿದ್ದಾರೆ. ಮಕ್ಕಳ, ಸಮಾಜ ಅರಿವು ಹೆಚ್ಚಿಸುವ ನಿಟ್ಟಿನಲ್ಲಿ ಸೇವೆ ಸಲ್ಲಿಸುತ್ತಿರುವ ಇವರಿಗೆ ೨೦೧೭ರ ದಸರಾ ಪ್ರಶಸ್ತಿ, ಮೈಸೂರು ರೋಟರಿ ಕ್ಲಬ್ ವತಿಯಿಂದ ಸೋಂಪುರ ಬಸಪ್ಪ ಆದರ್ಶ ಶಿಕ್ಷಕ ಪ್ರಶಸ್ತಿ, ಮೈಸೂರು ಲಯನ್ಸ್ ಕ್ಲಬ್ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago