ಆಂದೋಲನ ಪುರವಣಿ

ರೇಖಾಚಿತ್ರಗಳ ಮೂಲಕ ಪಾಠ

ಭೌತಶಾಸ್ತ್ರ ಶಿಕ್ಷಕ ಮೋಹನ್ ಕುಮಾರ್ ಅವರ ಕಲಾ ಪ್ರೀತಿ

– ರಾಜೇಂದ್ರ ಎಸ್, ಮಹದೇವಪುರ

ವೃತ್ತಿಯಲ್ಲಿ ಭೌತಶಾಸ್ತ್ರ ಶಿಕ್ಷಕರು. ಸದ್ಯ ಮೈಸೂರಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಮೈಸೂರು ತಾಲ್ಲೂಕು ವಲಯದ ಶಿಕ್ಷಣ ಸಂಯೋಜಕರಾಗಿ ಸೇವೆ. ಇದರೊಂದಿಗೆ ರೇಖಾ ಚಿತ್ರಗಳನ್ನು ಬಿಡಿಸುವಲ್ಲಿ ಪರಿಣತರು ಯು.ಜಿ. ಮೋಹನ್ ಕುಮಾರ ಆರಾಧ್ಯ.

ಮಕ್ಕಳಿಗೆ ಗುರುತ್ವ, ಅಯಸ್ಕಾಂತ, ವೇಗ, ಚಲನೆ ಸೇರಿ ಭೌತ ವಿಜ್ಞಾನದ ಬಗ್ಗೆ ಪಾಠ ಮಾಡುವುದರ ಜೊತೆಗೆ ಕಲೆಯ ಬಗ್ಗೆಯೂ ಆಸಕ್ತಿ ಮೂಡುವಂತೆ ಮಾಡುತ್ತಿರುವ ಮೋಹನ್ ಕುಮಾರ್ ಅವರು ಸ್ವತಃ ಸಾವಿರಾರು ರೇಖಾಚಿತ್ರಗಳನ್ನು ರಚಿಸಿದ್ದಾರೆ.

ಸಾಹಿತಿಗಳು, ವಿಜ್ಞಾನಿಗಳು, ಪ್ರಸಿದ್ಧ ವ್ಯಕ್ತಿಗಳ ರೇಖಾಚಿತ್ರಗಳನ್ನು ಬಿಡಿಸಲು ನಿತ್ಯವೂ ೩ ಗಂಟೆಗಳನ್ನು ವಿನಿಯೋಗಿಸುವ ಮೋಹನ್ ಕುಮಾರ್ ಈ ಮೂಲಕ ಮಕ್ಕಳಿಗೆ ಸಾಧಕರ ಪರಿಚಯ ಮಾಡಿಕೊಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ನಿತ್ಯವೂ ಒಬ್ಬೊಬ್ಬ ಸಾಧಕರ ಚಿತ್ರ ರಚಿಸಿ ಅದರೊಂದಿಗೆ ಅವರ ಬಗ್ಗೆ ಪುಟ್ಟದೊಂದು ಟಿಪ್ಪಣಿ ಬರೆದು ಎಲ್ಲ ಕಡೆ ಹಂಚುತ್ತಿದ್ದಾರೆ.

೧,೦೦೦ಕ್ಕೂ ಹೆಚ್ಚು ಸಾಧಕ ವ್ಯಕ್ತಿಗಳ ಚಿತ್ರಗಳನ್ನು ರಚಿಸಿರುವ ಇವರು ೫೦ಕ್ಕೂ ಹೆಚ್ಚು ಕಡೆಗಳಲ್ಲಿ ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನ ನೀಡಿದ್ದಾರೆ. ಮಕ್ಕಳ, ಸಮಾಜ ಅರಿವು ಹೆಚ್ಚಿಸುವ ನಿಟ್ಟಿನಲ್ಲಿ ಸೇವೆ ಸಲ್ಲಿಸುತ್ತಿರುವ ಇವರಿಗೆ ೨೦೧೭ರ ದಸರಾ ಪ್ರಶಸ್ತಿ, ಮೈಸೂರು ರೋಟರಿ ಕ್ಲಬ್ ವತಿಯಿಂದ ಸೋಂಪುರ ಬಸಪ್ಪ ಆದರ್ಶ ಶಿಕ್ಷಕ ಪ್ರಶಸ್ತಿ, ಮೈಸೂರು ಲಯನ್ಸ್ ಕ್ಲಬ್ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.

andolana

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

8 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

8 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

8 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

9 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

9 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

9 hours ago