ಆಂದೋಲನ ಪುರವಣಿ

ರೇಖಾಚಿತ್ರಗಳ ಮೂಲಕ ಪಾಠ

ಭೌತಶಾಸ್ತ್ರ ಶಿಕ್ಷಕ ಮೋಹನ್ ಕುಮಾರ್ ಅವರ ಕಲಾ ಪ್ರೀತಿ

– ರಾಜೇಂದ್ರ ಎಸ್, ಮಹದೇವಪುರ

ವೃತ್ತಿಯಲ್ಲಿ ಭೌತಶಾಸ್ತ್ರ ಶಿಕ್ಷಕರು. ಸದ್ಯ ಮೈಸೂರಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಮೈಸೂರು ತಾಲ್ಲೂಕು ವಲಯದ ಶಿಕ್ಷಣ ಸಂಯೋಜಕರಾಗಿ ಸೇವೆ. ಇದರೊಂದಿಗೆ ರೇಖಾ ಚಿತ್ರಗಳನ್ನು ಬಿಡಿಸುವಲ್ಲಿ ಪರಿಣತರು ಯು.ಜಿ. ಮೋಹನ್ ಕುಮಾರ ಆರಾಧ್ಯ.

ಮಕ್ಕಳಿಗೆ ಗುರುತ್ವ, ಅಯಸ್ಕಾಂತ, ವೇಗ, ಚಲನೆ ಸೇರಿ ಭೌತ ವಿಜ್ಞಾನದ ಬಗ್ಗೆ ಪಾಠ ಮಾಡುವುದರ ಜೊತೆಗೆ ಕಲೆಯ ಬಗ್ಗೆಯೂ ಆಸಕ್ತಿ ಮೂಡುವಂತೆ ಮಾಡುತ್ತಿರುವ ಮೋಹನ್ ಕುಮಾರ್ ಅವರು ಸ್ವತಃ ಸಾವಿರಾರು ರೇಖಾಚಿತ್ರಗಳನ್ನು ರಚಿಸಿದ್ದಾರೆ.

ಸಾಹಿತಿಗಳು, ವಿಜ್ಞಾನಿಗಳು, ಪ್ರಸಿದ್ಧ ವ್ಯಕ್ತಿಗಳ ರೇಖಾಚಿತ್ರಗಳನ್ನು ಬಿಡಿಸಲು ನಿತ್ಯವೂ ೩ ಗಂಟೆಗಳನ್ನು ವಿನಿಯೋಗಿಸುವ ಮೋಹನ್ ಕುಮಾರ್ ಈ ಮೂಲಕ ಮಕ್ಕಳಿಗೆ ಸಾಧಕರ ಪರಿಚಯ ಮಾಡಿಕೊಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ನಿತ್ಯವೂ ಒಬ್ಬೊಬ್ಬ ಸಾಧಕರ ಚಿತ್ರ ರಚಿಸಿ ಅದರೊಂದಿಗೆ ಅವರ ಬಗ್ಗೆ ಪುಟ್ಟದೊಂದು ಟಿಪ್ಪಣಿ ಬರೆದು ಎಲ್ಲ ಕಡೆ ಹಂಚುತ್ತಿದ್ದಾರೆ.

೧,೦೦೦ಕ್ಕೂ ಹೆಚ್ಚು ಸಾಧಕ ವ್ಯಕ್ತಿಗಳ ಚಿತ್ರಗಳನ್ನು ರಚಿಸಿರುವ ಇವರು ೫೦ಕ್ಕೂ ಹೆಚ್ಚು ಕಡೆಗಳಲ್ಲಿ ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನ ನೀಡಿದ್ದಾರೆ. ಮಕ್ಕಳ, ಸಮಾಜ ಅರಿವು ಹೆಚ್ಚಿಸುವ ನಿಟ್ಟಿನಲ್ಲಿ ಸೇವೆ ಸಲ್ಲಿಸುತ್ತಿರುವ ಇವರಿಗೆ ೨೦೧೭ರ ದಸರಾ ಪ್ರಶಸ್ತಿ, ಮೈಸೂರು ರೋಟರಿ ಕ್ಲಬ್ ವತಿಯಿಂದ ಸೋಂಪುರ ಬಸಪ್ಪ ಆದರ್ಶ ಶಿಕ್ಷಕ ಪ್ರಶಸ್ತಿ, ಮೈಸೂರು ಲಯನ್ಸ್ ಕ್ಲಬ್ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.

andolana

Recent Posts

ಸ್ಕ್ಯಾನಿಂಗ್‌ ಸೆಂಟರ್‌ ಪರಿಶೀಲನೆಗೆ ಸಮಿತಿ ; ಪಿಸಿಪಿಎನ್‌ಡಿಟಿ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಕ್ರಮ : ಡಿಸಿ ಎಚ್ಚರಿಕೆ

ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್‌ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…

12 mins ago

ಕರ ಭಾರದ ನಡುವೆ ಘನ ತ್ಯಾಜ್ಯ ವಿಲೇವಾರಿಗೂ ಸೆಸ್‌

ಜನಪ್ರತಿನಿಧಿಗಳ ಆಡಳಿತವಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ಅಂಧ ದರ್ಬಾರ್‌ ಮೈಸೂರು : ಗ್ಯಾಸ್ ದರ ಹೆಚ್ಚಳ..., ವಿದ್ಯುತ್ ದರ ಹೆಚ್ಚಳ..., ನೀರಿನ…

38 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 25 ಶನಿವಾರ

60 mins ago

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

11 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

11 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

11 hours ago