ಆಂದೋಲನ ಪುರವಣಿ

ರೇಖಾಚಿತ್ರಗಳ ಮೂಲಕ ಪಾಠ

ಭೌತಶಾಸ್ತ್ರ ಶಿಕ್ಷಕ ಮೋಹನ್ ಕುಮಾರ್ ಅವರ ಕಲಾ ಪ್ರೀತಿ

– ರಾಜೇಂದ್ರ ಎಸ್, ಮಹದೇವಪುರ

ವೃತ್ತಿಯಲ್ಲಿ ಭೌತಶಾಸ್ತ್ರ ಶಿಕ್ಷಕರು. ಸದ್ಯ ಮೈಸೂರಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಮೈಸೂರು ತಾಲ್ಲೂಕು ವಲಯದ ಶಿಕ್ಷಣ ಸಂಯೋಜಕರಾಗಿ ಸೇವೆ. ಇದರೊಂದಿಗೆ ರೇಖಾ ಚಿತ್ರಗಳನ್ನು ಬಿಡಿಸುವಲ್ಲಿ ಪರಿಣತರು ಯು.ಜಿ. ಮೋಹನ್ ಕುಮಾರ ಆರಾಧ್ಯ.

ಮಕ್ಕಳಿಗೆ ಗುರುತ್ವ, ಅಯಸ್ಕಾಂತ, ವೇಗ, ಚಲನೆ ಸೇರಿ ಭೌತ ವಿಜ್ಞಾನದ ಬಗ್ಗೆ ಪಾಠ ಮಾಡುವುದರ ಜೊತೆಗೆ ಕಲೆಯ ಬಗ್ಗೆಯೂ ಆಸಕ್ತಿ ಮೂಡುವಂತೆ ಮಾಡುತ್ತಿರುವ ಮೋಹನ್ ಕುಮಾರ್ ಅವರು ಸ್ವತಃ ಸಾವಿರಾರು ರೇಖಾಚಿತ್ರಗಳನ್ನು ರಚಿಸಿದ್ದಾರೆ.

ಸಾಹಿತಿಗಳು, ವಿಜ್ಞಾನಿಗಳು, ಪ್ರಸಿದ್ಧ ವ್ಯಕ್ತಿಗಳ ರೇಖಾಚಿತ್ರಗಳನ್ನು ಬಿಡಿಸಲು ನಿತ್ಯವೂ ೩ ಗಂಟೆಗಳನ್ನು ವಿನಿಯೋಗಿಸುವ ಮೋಹನ್ ಕುಮಾರ್ ಈ ಮೂಲಕ ಮಕ್ಕಳಿಗೆ ಸಾಧಕರ ಪರಿಚಯ ಮಾಡಿಕೊಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ನಿತ್ಯವೂ ಒಬ್ಬೊಬ್ಬ ಸಾಧಕರ ಚಿತ್ರ ರಚಿಸಿ ಅದರೊಂದಿಗೆ ಅವರ ಬಗ್ಗೆ ಪುಟ್ಟದೊಂದು ಟಿಪ್ಪಣಿ ಬರೆದು ಎಲ್ಲ ಕಡೆ ಹಂಚುತ್ತಿದ್ದಾರೆ.

೧,೦೦೦ಕ್ಕೂ ಹೆಚ್ಚು ಸಾಧಕ ವ್ಯಕ್ತಿಗಳ ಚಿತ್ರಗಳನ್ನು ರಚಿಸಿರುವ ಇವರು ೫೦ಕ್ಕೂ ಹೆಚ್ಚು ಕಡೆಗಳಲ್ಲಿ ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನ ನೀಡಿದ್ದಾರೆ. ಮಕ್ಕಳ, ಸಮಾಜ ಅರಿವು ಹೆಚ್ಚಿಸುವ ನಿಟ್ಟಿನಲ್ಲಿ ಸೇವೆ ಸಲ್ಲಿಸುತ್ತಿರುವ ಇವರಿಗೆ ೨೦೧೭ರ ದಸರಾ ಪ್ರಶಸ್ತಿ, ಮೈಸೂರು ರೋಟರಿ ಕ್ಲಬ್ ವತಿಯಿಂದ ಸೋಂಪುರ ಬಸಪ್ಪ ಆದರ್ಶ ಶಿಕ್ಷಕ ಪ್ರಶಸ್ತಿ, ಮೈಸೂರು ಲಯನ್ಸ್ ಕ್ಲಬ್ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.

andolana

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

21 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

21 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

21 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

22 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

22 hours ago