ಭೌತಶಾಸ್ತ್ರ ಶಿಕ್ಷಕ ಮೋಹನ್ ಕುಮಾರ್ ಅವರ ಕಲಾ ಪ್ರೀತಿ
– ರಾಜೇಂದ್ರ ಎಸ್, ಮಹದೇವಪುರ
ವೃತ್ತಿಯಲ್ಲಿ ಭೌತಶಾಸ್ತ್ರ ಶಿಕ್ಷಕರು. ಸದ್ಯ ಮೈಸೂರಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಮೈಸೂರು ತಾಲ್ಲೂಕು ವಲಯದ ಶಿಕ್ಷಣ ಸಂಯೋಜಕರಾಗಿ ಸೇವೆ. ಇದರೊಂದಿಗೆ ರೇಖಾ ಚಿತ್ರಗಳನ್ನು ಬಿಡಿಸುವಲ್ಲಿ ಪರಿಣತರು ಯು.ಜಿ. ಮೋಹನ್ ಕುಮಾರ ಆರಾಧ್ಯ.
ಮಕ್ಕಳಿಗೆ ಗುರುತ್ವ, ಅಯಸ್ಕಾಂತ, ವೇಗ, ಚಲನೆ ಸೇರಿ ಭೌತ ವಿಜ್ಞಾನದ ಬಗ್ಗೆ ಪಾಠ ಮಾಡುವುದರ ಜೊತೆಗೆ ಕಲೆಯ ಬಗ್ಗೆಯೂ ಆಸಕ್ತಿ ಮೂಡುವಂತೆ ಮಾಡುತ್ತಿರುವ ಮೋಹನ್ ಕುಮಾರ್ ಅವರು ಸ್ವತಃ ಸಾವಿರಾರು ರೇಖಾಚಿತ್ರಗಳನ್ನು ರಚಿಸಿದ್ದಾರೆ.
ಸಾಹಿತಿಗಳು, ವಿಜ್ಞಾನಿಗಳು, ಪ್ರಸಿದ್ಧ ವ್ಯಕ್ತಿಗಳ ರೇಖಾಚಿತ್ರಗಳನ್ನು ಬಿಡಿಸಲು ನಿತ್ಯವೂ ೩ ಗಂಟೆಗಳನ್ನು ವಿನಿಯೋಗಿಸುವ ಮೋಹನ್ ಕುಮಾರ್ ಈ ಮೂಲಕ ಮಕ್ಕಳಿಗೆ ಸಾಧಕರ ಪರಿಚಯ ಮಾಡಿಕೊಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ನಿತ್ಯವೂ ಒಬ್ಬೊಬ್ಬ ಸಾಧಕರ ಚಿತ್ರ ರಚಿಸಿ ಅದರೊಂದಿಗೆ ಅವರ ಬಗ್ಗೆ ಪುಟ್ಟದೊಂದು ಟಿಪ್ಪಣಿ ಬರೆದು ಎಲ್ಲ ಕಡೆ ಹಂಚುತ್ತಿದ್ದಾರೆ.
೧,೦೦೦ಕ್ಕೂ ಹೆಚ್ಚು ಸಾಧಕ ವ್ಯಕ್ತಿಗಳ ಚಿತ್ರಗಳನ್ನು ರಚಿಸಿರುವ ಇವರು ೫೦ಕ್ಕೂ ಹೆಚ್ಚು ಕಡೆಗಳಲ್ಲಿ ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನ ನೀಡಿದ್ದಾರೆ. ಮಕ್ಕಳ, ಸಮಾಜ ಅರಿವು ಹೆಚ್ಚಿಸುವ ನಿಟ್ಟಿನಲ್ಲಿ ಸೇವೆ ಸಲ್ಲಿಸುತ್ತಿರುವ ಇವರಿಗೆ ೨೦೧೭ರ ದಸರಾ ಪ್ರಶಸ್ತಿ, ಮೈಸೂರು ರೋಟರಿ ಕ್ಲಬ್ ವತಿಯಿಂದ ಸೋಂಪುರ ಬಸಪ್ಪ ಆದರ್ಶ ಶಿಕ್ಷಕ ಪ್ರಶಸ್ತಿ, ಮೈಸೂರು ಲಯನ್ಸ್ ಕ್ಲಬ್ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…