ಆಂದೋಲನ ಪುರವಣಿ

ಯೋಗ ಕ್ಷೇಮ: ಜೀವನವಿಡೀ ಕಾಡುವ ಹರ್ಪಿಸ್ ಜನೈಟಾಲಿಸ್

ಕೆಲವು ವರ್ಷಗಳಿಂದೀಚೆಗೆ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿರುವ ಸಮಸ್ಯೆ ಹರ್ಪಿಸ್ ಜನೈಟಾಲಿಸ್. ಹರ್ಪಿಸ್ ಸಿಂಪ್ಲೆಕ್ಸ್ ವೈರಾಣುವಿನಿಂದ ಈ ರೋಗಬರುತ್ತದೆ. ಶರವೇಗದಲ್ಲಿ ಜಗತ್ತಿನಲ್ಲೆಲ್ಲಾ ಹರಡುತ್ತಿರುವ ಈ ಸಮಸ್ಯೆ ಒಮ್ಮೆ ಬಂದರೆ ದೀರ್ಘಕಾಲದವರೆಗೆ ರೋಗಿಯನ್ನು ಕಾಡುತ್ತದೆ.

ಇದು ವ್ಯಭಿಚಾರಿಗಳು, ಅಸುರಕ್ಷಿತ ಲೈಂಗಿಕ ಕ್ರಿಯೆಯಲ್ಲಿ ತೊಡಗುವವರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ರೋಗಾಣು ಲೈಂಗಿಕಾಂಗಗಳನ್ನು ಪ್ರವೇಶಿಸಿದ ೩ರಿಂದ ೬ದಿನಗಳ ಒಳಗೆ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ರೋಗದ ಲಕ್ಷಣಗಳು

* ಮೊದಲಿಗೆ ಜನನಾಂಗದ ಸುತ್ತಲೂ ಚುಚ್ಚಿದಂತೆ, ಉರಿದಂತಹ ಅನುಭವ

* ಕೆಂಪನೆಯ ಗುಳ್ಳೆಗಳು, ನೀರು ಗುಳ್ಳೆಗಳು ಕಾಣಿಸಿಕೊಳ್ಳುವುದು.

* ಸಣ್ಣ ಗುಳ್ಳೆಗಳು ಗುಂಪಾಗಿ ನಂತರ ಕೀವು ಗುಳ್ಳೆಗಳಾಗಿ ಬದಲಾಗುವುದು.

* ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಾಗ ಜ್ವರ ಬರುವುದು.

ಪುರುಷರಲ್ಲಿ ಜನನಾಂಗದ ಸುತ್ತಮುತ್ತ ಕಾಣಿಸಿಕೊಳ್ಳುವ ಗುಳ್ಳೆಗಳು ನಂತರ ತೊಡೆಯ ಭಾಗವನ್ನೂ ವ್ಯಾಪಿಸಿಕೊಳ್ಳುತ್ತವೆ. ಮಹಿಳೆಯರಲ್ಲಿ ಜನನಾಂಗದ ಒಳಭಾಗ, ಗರ್ಭಕೋಶದ ನಾಳಗಳಿಗೂ ಪ್ರವೇಶ ಮಾಡಬಹುದು. ಇದರಿಂದ ಭವಿಷ್ಯದಲ್ಲಿ ಕ್ಯಾನ್ಸರ್ ಸಹ ಬರಬಹುದು. ಒಂದು ವೇಳೆ ಮಹಿಳೆ ಗರ್ಭವತಿಯಾಗಿದ್ದರೆ ಹುಟ್ಟುವ ಮಗುವಿನ ಮೇಲೆಯೂ ಈ ವೈರಾಣು ಪ್ರಭಾವ ಬೀರುತ್ತದೆ. ಈ ವೇಳೆ ಸಿಸೇರಿಯನ್ ಮೂಲಕ ಮಗು ಹೊರಗೆ ತೆಗೆಯುವುದು ಅನಿವಾರ್ಯ. ಇದು ವಾಸಿಯಾಗಬಹುದಾದ ಕಾಯಿಲೆಯಾಗಿದ್ದು, ನಿಗದಿತವಾಗಿ ಔಷಧ ತೆಗೆದುಕೊಳ್ಳಬೇಕಾಗುತ್ತದೆ. ಎಸೈಕ್ಲೊವೀರ್ ಮುಂತಾದ ಔಷಧಗಳನ್ನು ತೆಗೆದುಕೊಳ್ಳಬಹುದು.

andolanait

Recent Posts

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

53 mins ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

2 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

2 hours ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

2 hours ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

3 hours ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

3 hours ago