ಆಂದೋಲನ ಪುರವಣಿ

ಯೋಗ ಕ್ಷೇಮ: ಜೀವನವಿಡೀ ಕಾಡುವ ಹರ್ಪಿಸ್ ಜನೈಟಾಲಿಸ್

ಕೆಲವು ವರ್ಷಗಳಿಂದೀಚೆಗೆ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿರುವ ಸಮಸ್ಯೆ ಹರ್ಪಿಸ್ ಜನೈಟಾಲಿಸ್. ಹರ್ಪಿಸ್ ಸಿಂಪ್ಲೆಕ್ಸ್ ವೈರಾಣುವಿನಿಂದ ಈ ರೋಗಬರುತ್ತದೆ. ಶರವೇಗದಲ್ಲಿ ಜಗತ್ತಿನಲ್ಲೆಲ್ಲಾ ಹರಡುತ್ತಿರುವ ಈ ಸಮಸ್ಯೆ ಒಮ್ಮೆ ಬಂದರೆ ದೀರ್ಘಕಾಲದವರೆಗೆ ರೋಗಿಯನ್ನು ಕಾಡುತ್ತದೆ.

ಇದು ವ್ಯಭಿಚಾರಿಗಳು, ಅಸುರಕ್ಷಿತ ಲೈಂಗಿಕ ಕ್ರಿಯೆಯಲ್ಲಿ ತೊಡಗುವವರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ರೋಗಾಣು ಲೈಂಗಿಕಾಂಗಗಳನ್ನು ಪ್ರವೇಶಿಸಿದ ೩ರಿಂದ ೬ದಿನಗಳ ಒಳಗೆ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ರೋಗದ ಲಕ್ಷಣಗಳು

* ಮೊದಲಿಗೆ ಜನನಾಂಗದ ಸುತ್ತಲೂ ಚುಚ್ಚಿದಂತೆ, ಉರಿದಂತಹ ಅನುಭವ

* ಕೆಂಪನೆಯ ಗುಳ್ಳೆಗಳು, ನೀರು ಗುಳ್ಳೆಗಳು ಕಾಣಿಸಿಕೊಳ್ಳುವುದು.

* ಸಣ್ಣ ಗುಳ್ಳೆಗಳು ಗುಂಪಾಗಿ ನಂತರ ಕೀವು ಗುಳ್ಳೆಗಳಾಗಿ ಬದಲಾಗುವುದು.

* ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಾಗ ಜ್ವರ ಬರುವುದು.

ಪುರುಷರಲ್ಲಿ ಜನನಾಂಗದ ಸುತ್ತಮುತ್ತ ಕಾಣಿಸಿಕೊಳ್ಳುವ ಗುಳ್ಳೆಗಳು ನಂತರ ತೊಡೆಯ ಭಾಗವನ್ನೂ ವ್ಯಾಪಿಸಿಕೊಳ್ಳುತ್ತವೆ. ಮಹಿಳೆಯರಲ್ಲಿ ಜನನಾಂಗದ ಒಳಭಾಗ, ಗರ್ಭಕೋಶದ ನಾಳಗಳಿಗೂ ಪ್ರವೇಶ ಮಾಡಬಹುದು. ಇದರಿಂದ ಭವಿಷ್ಯದಲ್ಲಿ ಕ್ಯಾನ್ಸರ್ ಸಹ ಬರಬಹುದು. ಒಂದು ವೇಳೆ ಮಹಿಳೆ ಗರ್ಭವತಿಯಾಗಿದ್ದರೆ ಹುಟ್ಟುವ ಮಗುವಿನ ಮೇಲೆಯೂ ಈ ವೈರಾಣು ಪ್ರಭಾವ ಬೀರುತ್ತದೆ. ಈ ವೇಳೆ ಸಿಸೇರಿಯನ್ ಮೂಲಕ ಮಗು ಹೊರಗೆ ತೆಗೆಯುವುದು ಅನಿವಾರ್ಯ. ಇದು ವಾಸಿಯಾಗಬಹುದಾದ ಕಾಯಿಲೆಯಾಗಿದ್ದು, ನಿಗದಿತವಾಗಿ ಔಷಧ ತೆಗೆದುಕೊಳ್ಳಬೇಕಾಗುತ್ತದೆ. ಎಸೈಕ್ಲೊವೀರ್ ಮುಂತಾದ ಔಷಧಗಳನ್ನು ತೆಗೆದುಕೊಳ್ಳಬಹುದು.

andolanait

Recent Posts

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

59 mins ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

5 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

8 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

8 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

8 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಿಸಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ…

8 hours ago