ಕೆಲವು ವರ್ಷಗಳಿಂದೀಚೆಗೆ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿರುವ ಸಮಸ್ಯೆ ಹರ್ಪಿಸ್ ಜನೈಟಾಲಿಸ್. ಹರ್ಪಿಸ್ ಸಿಂಪ್ಲೆಕ್ಸ್ ವೈರಾಣುವಿನಿಂದ ಈ ರೋಗಬರುತ್ತದೆ. ಶರವೇಗದಲ್ಲಿ ಜಗತ್ತಿನಲ್ಲೆಲ್ಲಾ ಹರಡುತ್ತಿರುವ ಈ ಸಮಸ್ಯೆ ಒಮ್ಮೆ ಬಂದರೆ ದೀರ್ಘಕಾಲದವರೆಗೆ ರೋಗಿಯನ್ನು ಕಾಡುತ್ತದೆ.
ಇದು ವ್ಯಭಿಚಾರಿಗಳು, ಅಸುರಕ್ಷಿತ ಲೈಂಗಿಕ ಕ್ರಿಯೆಯಲ್ಲಿ ತೊಡಗುವವರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ರೋಗಾಣು ಲೈಂಗಿಕಾಂಗಗಳನ್ನು ಪ್ರವೇಶಿಸಿದ ೩ರಿಂದ ೬ದಿನಗಳ ಒಳಗೆ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.
ರೋಗದ ಲಕ್ಷಣಗಳು
* ಮೊದಲಿಗೆ ಜನನಾಂಗದ ಸುತ್ತಲೂ ಚುಚ್ಚಿದಂತೆ, ಉರಿದಂತಹ ಅನುಭವ
* ಕೆಂಪನೆಯ ಗುಳ್ಳೆಗಳು, ನೀರು ಗುಳ್ಳೆಗಳು ಕಾಣಿಸಿಕೊಳ್ಳುವುದು.
* ಸಣ್ಣ ಗುಳ್ಳೆಗಳು ಗುಂಪಾಗಿ ನಂತರ ಕೀವು ಗುಳ್ಳೆಗಳಾಗಿ ಬದಲಾಗುವುದು.
* ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಾಗ ಜ್ವರ ಬರುವುದು.
ಪುರುಷರಲ್ಲಿ ಜನನಾಂಗದ ಸುತ್ತಮುತ್ತ ಕಾಣಿಸಿಕೊಳ್ಳುವ ಗುಳ್ಳೆಗಳು ನಂತರ ತೊಡೆಯ ಭಾಗವನ್ನೂ ವ್ಯಾಪಿಸಿಕೊಳ್ಳುತ್ತವೆ. ಮಹಿಳೆಯರಲ್ಲಿ ಜನನಾಂಗದ ಒಳಭಾಗ, ಗರ್ಭಕೋಶದ ನಾಳಗಳಿಗೂ ಪ್ರವೇಶ ಮಾಡಬಹುದು. ಇದರಿಂದ ಭವಿಷ್ಯದಲ್ಲಿ ಕ್ಯಾನ್ಸರ್ ಸಹ ಬರಬಹುದು. ಒಂದು ವೇಳೆ ಮಹಿಳೆ ಗರ್ಭವತಿಯಾಗಿದ್ದರೆ ಹುಟ್ಟುವ ಮಗುವಿನ ಮೇಲೆಯೂ ಈ ವೈರಾಣು ಪ್ರಭಾವ ಬೀರುತ್ತದೆ. ಈ ವೇಳೆ ಸಿಸೇರಿಯನ್ ಮೂಲಕ ಮಗು ಹೊರಗೆ ತೆಗೆಯುವುದು ಅನಿವಾರ್ಯ. ಇದು ವಾಸಿಯಾಗಬಹುದಾದ ಕಾಯಿಲೆಯಾಗಿದ್ದು, ನಿಗದಿತವಾಗಿ ಔಷಧ ತೆಗೆದುಕೊಳ್ಳಬೇಕಾಗುತ್ತದೆ. ಎಸೈಕ್ಲೊವೀರ್ ಮುಂತಾದ ಔಷಧಗಳನ್ನು ತೆಗೆದುಕೊಳ್ಳಬಹುದು.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…
ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್ ರಿಪೋರ್ಟ್ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್…
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…