ಆಂದೋಲನ ಪುರವಣಿ

ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ನಮ್ಮ ಸುತ್ತಮುತ್ತಲೇ ಇದೆ

• ಎನ್.ಕೇಶವಮೂರ್ತಿ

ಮಂಡ್ಯ ಸಮೀಪದ ಹಳ್ಳಿಯೊಂದರಲ್ಲಿ ಹೂವಿನ ಬೇಸಾಯ ಮಾಡುವ ಕುಟುಂಬವೊಂದಿದೆ. ಈ ಕುಟುಂಬ ತಮ್ಮ ಎರಡು ಎಕರೆ ಜಮೀನಿನಲ್ಲಿ ಸೇವಂತಿಗೆ,ಕಾಕಡ, ಕನಕಾಂಬರ, ಸುಗಂಧರಾಜ,ಮಲ್ಲಿಗೆಹೂಗಳನ್ನುಬೆಳೆಯುತ್ತಾರೆ. ಕೈತೂಕದಲ್ಲಿ ನೀರು ಹೊತ್ತು ಬೆಳೆಯುವುದೂ ಇದೆ. ಕಷ್ಟಪಟ್ಟು ಬೆಳೆದ ಹೂವನ್ನು ಇವರು ಮಾರೋದು ಹಳ್ಳಿಗಳ ಸಂತೆಗಳಲ್ಲಿಯೇ ಹೊರತು ನಗರಗಳ ಮಾರುಕಟ್ಟೆಗಳಲ್ಲಿ ಅಲ್ಲ.

ಏಕೆ ಹೀಗೆ? ಎಂದು ಪ್ರಶ್ನಿಸಿದರೆ ರೈತರು ಹೇಳುವುದು, ‘ಸರ್ ಈ ಸಂತೆ ನಮಗೆ ಹತ್ತಿರ, ಸೈಕಲ್‌ನಲ್ಲಿ ಬರಬಹುದು, ಬಹಳ ಜನ ಗ್ರಾಹಕರು ಪರಿಚಯ ಆಗಿರುವುದರಿಂದ ಮಾರಾಟ ಬೇಗ ಆಗುತ್ತೆ, ತಕ್ಷಣ ಹಣ ಸಂದಾಯವೂ ಆಗಿ ನಾವು ತಂದೆ ಮಕ್ಕಳು ಸೇರಿ, ಬೆಳಗಿನ ನಾಲ್ಕಾರು ಗಂಟೇಲಿ ಕಟ್ಟಿದ ಹೂ ಮಾರಿಬಿಡ್ತೀವಿ. ಮಾರಿದ ಮೇಲೆ ಮನೆಗೆ ಹೋಗಿ ತಿಂಡಿ ತಿಂತೀವಿ. ಬೇರೆ ಖರ್ಚು ಇರೋಲ್ಲ. ಒಮ್ಮೊಮ್ಮೆ ಹೂವಿನ ಜತೆ ಬೆಳೆದ ತರಕಾರಿಯನ್ನೂ ಹೀಗೇ ಮಾರ್ತೀವಿ. ನಮಗೋಸ್ಕರ ಕಾಯುವ ಗ್ರಾಹಕರಿದ್ದಾರೆ. ಮುಂಗಡವಾಗಿ ಹಬ್ಬ ಹರಿದಿನಗಳಲ್ಲಿ ಹಣ ನೀಡುವವರಿದ್ದಾರೆ. ನಮ್ಮ ಹೂವಿನ ಗುಣಮಟ್ಟ ಉತ್ತಮವಾಗಿರುವುದರಿಂದ ನಮಗೆ ನಾವು ಬೆಳೆದಿರೋದನ್ನು ಮಾರಲು ಎಂದಿಗೂ ಸಮಸ್ಯೆಯಾಗಿಲ್ಲ. ಪೇಟೆಗಿಂತ ಬೆಲೆ ಕಡಿಮೆ ಇರಬಹುದು. ಆದರೆ ಉಳಿದ ಖರ್ಚು ಕಡಿಮೆಯಾಗಿರುವುದರಿಂದ ಲಾಭಕ್ಕೇನೂ ಮೋಸವಿಲ್ಲ ಅಂತಾರೆ. ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯನ್ನು ಎಲ್ಲೆಲ್ಲೂ ಹುಡುಕುವ ನಾವು ನಮ್ಮ ಹಳ್ಳಿ, ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಿದ್ದೆಲ್ಲಿ? ದೀಪದ ಕೆಳಗೆ ಕತ್ತಲೆ ಅಂತಾ ಇದಕ್ಕೇ ಹೇಳ್ತಾರೇನೋ…!

ಸುಮ್ಮನೆ ಒಂದು ಹಳ್ಳಿನ ಉದಾಹರಣೆಗೆ ತೆಗೆದುಕೊಳ್ಳೋಣ. ಐದುನೂರು ಮನೆಗಳ ಗ್ರಾಮ ಅಂದುಕೊಳ್ಳಿ. ಒಂದೊಂದು ಮನೆಯವರೂ ಹಾಲು, ಮೊಸರು, ಬೆಣ್ಣೆ, ತುಪ್ಪ, ಹಣ್ಣು, ತರಕಾರಿ, ಸೊಪ್ಪು, ಅಕ್ಕಿ, ರಾಗಿ, ಬೇಳೆಕಾಳುಗಳು, ಎಣ್ಣೆ, ಸಾಂಬಾರ ಪದಾರ್ಥಗಳು ಹೀಗೆ ಮನೆಗೆ ಬೇಕಾದ ಇತರೇ ವಸ್ತುಗಳಿಗಾಗಿ ಕನಿಷ್ಠ ಮೂರು ಸಾವಿರ ರೂ.ಗಳಾದರೂ ಖರ್ಚಾಗಲಿದೆ. ಇವುಗಳಲ್ಲಿ ಒಂದಿಷ್ಟನ್ನು ರೈತರು ತಾವೇ ಬೆಳೆದುಕೊಳ್ಳುತ್ತಾರೆ. ಆದರೆ ಬಹುಪಾಲು ರೈತರೂ ತಮ್ಮ ಮನೆ ಅಗತ್ಯಗಳಿಗಾಗಿ ಮಾರುಕಟ್ಟೆ ಅವಲಂಬಿಸಿದ್ದಾರೆ. ಅಂದಾಜಿನ ಪ್ರಕಾರ ಐದುನೂರು ಮನೆಗಳ ಗ್ರಾಮವೊಂದು ಪ್ರತಿ ತಿಂಗಳು ಏನಿಲ್ಲ ಎಂದರೂ ಮಾರುಕಟ್ಟೆ ಮೌಲ್ಯ ಹದಿನೈದರಿಂದ ಇಪ್ಪತ್ತು ಲಕ್ಷ ರೂ. ಖರ್ಚು ಮಾಡುತ್ತಿದೆ.

ಈ ಮಾರುಕಟ್ಟೆಯನ್ನು ಯಾವ ರೈತ ಬಳಸಿಕೊಳ್ಳುತ್ತಿದ್ದಾನೆ? ಇದರ ಬದಲು ಸಮೀಪದ ಪಟ್ಟಣಕ್ಕೆ ಹೋಗಿ ಇತರೇ ಗ್ರಾಹಕರಂತೆ ಖರೀದಿಸುತ್ತಿದ್ದಾನೆ.ಪಟ್ಟಣಕ್ಕೆ ಹೋಗಿ ಬರುವ, ಅಲ್ಲಿ ಶೋಕಿ ಮಾಡುವ, ಸಿನಿಮಾ ಹೋಟೆಲ್ ಖರ್ಚು, ಅಲ್ಲದೆ ಪಾನಪ್ರಿಯರಾದರೆ ಅದರ ಖರ್ಚು ಎಲ್ಲ ಸೇರಿ ತಿಂಗಳಿಗೆ ಮೂರರಿಂದ ಐದು ಸಾವಿರ ರೂ. ಹೆಚ್ಚು ಖರ್ಚು. ಅದೂ ಮನೆಗೆ ಬೇಕಾಗಿದ್ದ ಸಾಮಾನು ತರಲು ಆಗುವ ಖರ್ಚಿಗೆ ಕೊಸರು. ರೈತರು ಪ್ರಾಪಂಚಿಕ ಸುಖಗಳಿಂದ ದೂರ ಇರಬೇಕು ಅಂತಾ ಹೇಳುವುದು ನನ್ನ ಉದ್ದೇಶವಲ್ಲ. ಬದಲಿಗೆ ಆದಾಯ ಹಾಗೂ ವೆಚ್ಚದ ಮೂಲ ಹುಡುಕುವುದೇ ಆಗಿದೆ.ನಾನು ಹೇಳುವುದಿಷ್ಟು.

ನಮ್ಮ ಮಾರುಕಟ್ಟೆ ಬೇರೆಲ್ಲೂ ಇಲ್ಲ. ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೇ ಇದೆ. ನಮ್ಮ ಹಳ್ಳಿಯಲ್ಲಿಯೇ ಇದೆ. ನಮ್ಮ ಮನೆ ಸುತ್ತಮುತ್ತಲಿನ ಪ್ರದೇಶಗಳಲ್ಲಿದೆ. ಮೊದಲು ಆ ಮಾರುಕಟ್ಟೆಯನ್ನು ಅರ್ಥ ಮಾಡಿಕೊಳ್ಳೋಣ, ಸದ್ಬಳಕೆ ಮಾಡಿಕೊಳ್ಳೋಣ. ನಂತರ ಬೇರೆ ಮಾರುಕಟ್ಟೆ ನಿಧಾನವಾಗಿ ನಮಗೆ ಅರ್ಥವಾಗುತ್ತೆ.ಮೊದಲು ಮನೆ ಗೆದ್ದು ನಂತರ ಮಾರುಕಟ್ಟೆ ಗೆಲ್ಲಬೇಕಲ್ಲವೇ?

andolana

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

8 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

9 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

9 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

9 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

10 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

10 hours ago