ಆಂದೋಲನ ಪುರವಣಿ

ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ನಮ್ಮ ಸುತ್ತಮುತ್ತಲೇ ಇದೆ

• ಎನ್.ಕೇಶವಮೂರ್ತಿ

ಮಂಡ್ಯ ಸಮೀಪದ ಹಳ್ಳಿಯೊಂದರಲ್ಲಿ ಹೂವಿನ ಬೇಸಾಯ ಮಾಡುವ ಕುಟುಂಬವೊಂದಿದೆ. ಈ ಕುಟುಂಬ ತಮ್ಮ ಎರಡು ಎಕರೆ ಜಮೀನಿನಲ್ಲಿ ಸೇವಂತಿಗೆ,ಕಾಕಡ, ಕನಕಾಂಬರ, ಸುಗಂಧರಾಜ,ಮಲ್ಲಿಗೆಹೂಗಳನ್ನುಬೆಳೆಯುತ್ತಾರೆ. ಕೈತೂಕದಲ್ಲಿ ನೀರು ಹೊತ್ತು ಬೆಳೆಯುವುದೂ ಇದೆ. ಕಷ್ಟಪಟ್ಟು ಬೆಳೆದ ಹೂವನ್ನು ಇವರು ಮಾರೋದು ಹಳ್ಳಿಗಳ ಸಂತೆಗಳಲ್ಲಿಯೇ ಹೊರತು ನಗರಗಳ ಮಾರುಕಟ್ಟೆಗಳಲ್ಲಿ ಅಲ್ಲ.

ಏಕೆ ಹೀಗೆ? ಎಂದು ಪ್ರಶ್ನಿಸಿದರೆ ರೈತರು ಹೇಳುವುದು, ‘ಸರ್ ಈ ಸಂತೆ ನಮಗೆ ಹತ್ತಿರ, ಸೈಕಲ್‌ನಲ್ಲಿ ಬರಬಹುದು, ಬಹಳ ಜನ ಗ್ರಾಹಕರು ಪರಿಚಯ ಆಗಿರುವುದರಿಂದ ಮಾರಾಟ ಬೇಗ ಆಗುತ್ತೆ, ತಕ್ಷಣ ಹಣ ಸಂದಾಯವೂ ಆಗಿ ನಾವು ತಂದೆ ಮಕ್ಕಳು ಸೇರಿ, ಬೆಳಗಿನ ನಾಲ್ಕಾರು ಗಂಟೇಲಿ ಕಟ್ಟಿದ ಹೂ ಮಾರಿಬಿಡ್ತೀವಿ. ಮಾರಿದ ಮೇಲೆ ಮನೆಗೆ ಹೋಗಿ ತಿಂಡಿ ತಿಂತೀವಿ. ಬೇರೆ ಖರ್ಚು ಇರೋಲ್ಲ. ಒಮ್ಮೊಮ್ಮೆ ಹೂವಿನ ಜತೆ ಬೆಳೆದ ತರಕಾರಿಯನ್ನೂ ಹೀಗೇ ಮಾರ್ತೀವಿ. ನಮಗೋಸ್ಕರ ಕಾಯುವ ಗ್ರಾಹಕರಿದ್ದಾರೆ. ಮುಂಗಡವಾಗಿ ಹಬ್ಬ ಹರಿದಿನಗಳಲ್ಲಿ ಹಣ ನೀಡುವವರಿದ್ದಾರೆ. ನಮ್ಮ ಹೂವಿನ ಗುಣಮಟ್ಟ ಉತ್ತಮವಾಗಿರುವುದರಿಂದ ನಮಗೆ ನಾವು ಬೆಳೆದಿರೋದನ್ನು ಮಾರಲು ಎಂದಿಗೂ ಸಮಸ್ಯೆಯಾಗಿಲ್ಲ. ಪೇಟೆಗಿಂತ ಬೆಲೆ ಕಡಿಮೆ ಇರಬಹುದು. ಆದರೆ ಉಳಿದ ಖರ್ಚು ಕಡಿಮೆಯಾಗಿರುವುದರಿಂದ ಲಾಭಕ್ಕೇನೂ ಮೋಸವಿಲ್ಲ ಅಂತಾರೆ. ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯನ್ನು ಎಲ್ಲೆಲ್ಲೂ ಹುಡುಕುವ ನಾವು ನಮ್ಮ ಹಳ್ಳಿ, ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಿದ್ದೆಲ್ಲಿ? ದೀಪದ ಕೆಳಗೆ ಕತ್ತಲೆ ಅಂತಾ ಇದಕ್ಕೇ ಹೇಳ್ತಾರೇನೋ…!

ಸುಮ್ಮನೆ ಒಂದು ಹಳ್ಳಿನ ಉದಾಹರಣೆಗೆ ತೆಗೆದುಕೊಳ್ಳೋಣ. ಐದುನೂರು ಮನೆಗಳ ಗ್ರಾಮ ಅಂದುಕೊಳ್ಳಿ. ಒಂದೊಂದು ಮನೆಯವರೂ ಹಾಲು, ಮೊಸರು, ಬೆಣ್ಣೆ, ತುಪ್ಪ, ಹಣ್ಣು, ತರಕಾರಿ, ಸೊಪ್ಪು, ಅಕ್ಕಿ, ರಾಗಿ, ಬೇಳೆಕಾಳುಗಳು, ಎಣ್ಣೆ, ಸಾಂಬಾರ ಪದಾರ್ಥಗಳು ಹೀಗೆ ಮನೆಗೆ ಬೇಕಾದ ಇತರೇ ವಸ್ತುಗಳಿಗಾಗಿ ಕನಿಷ್ಠ ಮೂರು ಸಾವಿರ ರೂ.ಗಳಾದರೂ ಖರ್ಚಾಗಲಿದೆ. ಇವುಗಳಲ್ಲಿ ಒಂದಿಷ್ಟನ್ನು ರೈತರು ತಾವೇ ಬೆಳೆದುಕೊಳ್ಳುತ್ತಾರೆ. ಆದರೆ ಬಹುಪಾಲು ರೈತರೂ ತಮ್ಮ ಮನೆ ಅಗತ್ಯಗಳಿಗಾಗಿ ಮಾರುಕಟ್ಟೆ ಅವಲಂಬಿಸಿದ್ದಾರೆ. ಅಂದಾಜಿನ ಪ್ರಕಾರ ಐದುನೂರು ಮನೆಗಳ ಗ್ರಾಮವೊಂದು ಪ್ರತಿ ತಿಂಗಳು ಏನಿಲ್ಲ ಎಂದರೂ ಮಾರುಕಟ್ಟೆ ಮೌಲ್ಯ ಹದಿನೈದರಿಂದ ಇಪ್ಪತ್ತು ಲಕ್ಷ ರೂ. ಖರ್ಚು ಮಾಡುತ್ತಿದೆ.

ಈ ಮಾರುಕಟ್ಟೆಯನ್ನು ಯಾವ ರೈತ ಬಳಸಿಕೊಳ್ಳುತ್ತಿದ್ದಾನೆ? ಇದರ ಬದಲು ಸಮೀಪದ ಪಟ್ಟಣಕ್ಕೆ ಹೋಗಿ ಇತರೇ ಗ್ರಾಹಕರಂತೆ ಖರೀದಿಸುತ್ತಿದ್ದಾನೆ.ಪಟ್ಟಣಕ್ಕೆ ಹೋಗಿ ಬರುವ, ಅಲ್ಲಿ ಶೋಕಿ ಮಾಡುವ, ಸಿನಿಮಾ ಹೋಟೆಲ್ ಖರ್ಚು, ಅಲ್ಲದೆ ಪಾನಪ್ರಿಯರಾದರೆ ಅದರ ಖರ್ಚು ಎಲ್ಲ ಸೇರಿ ತಿಂಗಳಿಗೆ ಮೂರರಿಂದ ಐದು ಸಾವಿರ ರೂ. ಹೆಚ್ಚು ಖರ್ಚು. ಅದೂ ಮನೆಗೆ ಬೇಕಾಗಿದ್ದ ಸಾಮಾನು ತರಲು ಆಗುವ ಖರ್ಚಿಗೆ ಕೊಸರು. ರೈತರು ಪ್ರಾಪಂಚಿಕ ಸುಖಗಳಿಂದ ದೂರ ಇರಬೇಕು ಅಂತಾ ಹೇಳುವುದು ನನ್ನ ಉದ್ದೇಶವಲ್ಲ. ಬದಲಿಗೆ ಆದಾಯ ಹಾಗೂ ವೆಚ್ಚದ ಮೂಲ ಹುಡುಕುವುದೇ ಆಗಿದೆ.ನಾನು ಹೇಳುವುದಿಷ್ಟು.

ನಮ್ಮ ಮಾರುಕಟ್ಟೆ ಬೇರೆಲ್ಲೂ ಇಲ್ಲ. ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೇ ಇದೆ. ನಮ್ಮ ಹಳ್ಳಿಯಲ್ಲಿಯೇ ಇದೆ. ನಮ್ಮ ಮನೆ ಸುತ್ತಮುತ್ತಲಿನ ಪ್ರದೇಶಗಳಲ್ಲಿದೆ. ಮೊದಲು ಆ ಮಾರುಕಟ್ಟೆಯನ್ನು ಅರ್ಥ ಮಾಡಿಕೊಳ್ಳೋಣ, ಸದ್ಬಳಕೆ ಮಾಡಿಕೊಳ್ಳೋಣ. ನಂತರ ಬೇರೆ ಮಾರುಕಟ್ಟೆ ನಿಧಾನವಾಗಿ ನಮಗೆ ಅರ್ಥವಾಗುತ್ತೆ.ಮೊದಲು ಮನೆ ಗೆದ್ದು ನಂತರ ಮಾರುಕಟ್ಟೆ ಗೆಲ್ಲಬೇಕಲ್ಲವೇ?

andolana

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago