ಡಾ.ಚೈತ್ರ ಸುಖೇಶ್
ಧ್ಯಾನ ಎಂದರೇನು?
ಧ್ಯಾನ ಎಂದರೆ ನಮ್ಮ ಜೀವಶಕ್ತಿಯಾದ ಕುಂಡಲಿನಿ ಶಕ್ತಿಯ ಮೇಲೆ ನಮ್ಮ ಗಮನವನ್ನು ಕೇಂದ್ರೀಕರಿಸುವುದು. ಇದು ಮಾನಸಿಕ ಏಕಾಗ್ರತೆಯ ಅಡೆತಡೆಯಿಲ್ಲದ ಸ್ಥಿತಿ.
ಉಪಯೋಗಗಳು
■ ಮಾನಸಿಕ ಮತ್ತು ದೈಹಿಕ ಆರೋಗ್ಯ ಸುಧಾರಿಸುತ್ತದೆ.
■ಮನಸ್ಸು ಶಾಂತಗೊಳ್ಳುತ್ತದೆ.
■ಮನಸ್ಸು ಸಂತೋಷ ಮತ್ತು ಉಲ್ಲಾಸ/ ಉತ್ಸಾಹ ಭರಿತವಾಗುತ್ತದೆ.
■ಆಂತರಿಕ ಶಕ್ತಿ-ಸಾಮರ್ಥ್ಯ ಹೆಚ್ಚುತ್ತದೆ.
■ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.
■ದೀರ್ಘಕಾಲದ ನೋವನ್ನು ಕಡಿಮೆ ಮಾಡಲು ಸಹಕರಿಸುತ್ತದೆ.
■ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ.
■ಏಕಾಗ್ರತೆಯನ್ನು ಹೆಚ್ಚಿಸುತ್ತದೆ.
■ಆತಂಕ, ಒತ್ತಡ, ಖಿನ್ನತೆ ((Anxiel, Depressicen)ಯನ್ನು ಕಡಿಮೆ ಮಾಡುತ್ತದೆ.
■ ದೇಹದಲ್ಲಿರುವ ಅಧಿಕ ಕೊಬ್ಬನ್ನು ಕಡಿಮೆಗೊಳಿಸುತ್ತದೆ ಹಾಗೂ ದೇಹದ ತೂಕದ ನಿರ್ವಹಣೆಗೂ ಸಹಾಯಕಾರಿ.
ಧ್ಯಾನದ ಹಾದಿಯು ೩ ಹಂತಗಳು:
■ ಧಾರಣ (ಏಕಾಗ್ರತೆ)
■ಧ್ಯಾನ (ಧ್ಯಾನ)
■ಸಮಾಧಿ (ಜ್ಞಾನೋದಯ)
ದೀರ್ಘ ವಾದ ಧ್ಯಾನವು ಸಮಾಧಿ ಅಥವಾ ಜ್ಞಾನೋದಯಕ್ಕೆ ಕಾರಣವಾಗುತ್ತದೆ. ಆಯುರ್ವೇದ, ಯೋಗ ಮತ್ತು ಧ್ಯಾನದ ಮೂಲಕ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಪಡೆಯಬಹುದು. ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.
ನಿರಂತರ ಧ್ಯಾನ ಅಭ್ಯಾಸದಿಂದ ನಮ್ಮ ದೇಹದಲ್ಲಿರುವ ೭ ಚಕ್ರಗಳನ್ನು ನಾವು ಸುಸ್ಥಿತಿಯಲ್ಲಿಡಬಹುದು. ಧ್ಯಾನದಲ್ಲಿ ಮುಖ್ಯವಾದ ಪ್ರಕಾರ ಚಕ್ರಧ್ಯಾನ. ಚಕ್ರ ಎಂದರೆ ಬೆನ್ನುಹುರಿ (Dire) ಮಾನವ ದೇಹದ ೭ ಪ್ರಮುಖ ಚಕ್ರಗಳು
೧. ಮೂಲಾಧಾರ ಚಕ್ರ-ಇದು ನಮ್ಮ ಬೆನ್ನು ಮೂಳೆಯ ಬುಡದಲ್ಲಿದೆ. ಇದು ಮಾನಸಿಕ ಶಕ್ತಿ, ವ್ಯಕ್ತಿತ್ವ, ಧೈರ್ಯ ಪ್ರವೃತ್ತಿಗಳನ್ನು ಹೆಚ್ಚಿಸುತ್ತದೆ.
೨. ಸಾದಿಸ್ಥಾನ ಚಕ್ರ-ಇದು ನಮ್ಮ ಹೊಕ್ಕಳಿನ ಕೆಳಗೆ ಇದೆ. ಇದು ಸಂತಾನೋತ್ಪತ್ತಿ ಅಂಗಗಳನ್ನು ನಿಯಂತ್ರಿಸುತ್ತದೆ.
೩. ಮಣಿಪುರ ಚಕ್ರ- ಇದು ಹೊಕ್ಕುಳ ಜಾಗದ ಮೇಲೆ ಇರುತ್ತದೆ. ಇದು ಮನುಷ್ಯನ ಜೀರ್ಣಾಂಗ ವ್ಯವಸ್ಥೆಗೆ ಸಹಾಯ ಮಾಡುತ್ತದೆ.
೪. ಹೃದಯ ಚಕ್ರ- ಇದು ಎದೆಯ ಮಧ್ಯ ಭಾಗದಲ್ಲಿದೆ. ಇದು ಹೃದಯ, ಶ್ವಾಸಕೋಶಗಳ ಆರೋಗ್ಯವನ್ನು ನಿಯಂತ್ರಿಸುತ್ತದೆ. ಈ ಚಕ್ರವು ನಿರ್ಬಂಧಿಸಲ್ಪಡಲು ಹಲವಾರು ಕಾರಣಗಳಿವೆ. ನಕಾರಾತ್ಮಕ ಭಾವನೆಗಳು, ಭಯ, ಕೆಟ್ಟ ಜೀವನ ಶೈಲಿ, ಕೆಟ್ಟ ಅಭ್ಯಾಸಗಳು.
೫. ವಿಶುದ್ಧ ಚಕ್ರ-ಇದು ಗಂಟಲಿನ ಚಕ್ರ.
೬. ಆಜ್ಞಾ ಚಕ್ರ- ಇದು ಹಣೆ/ಹುಬ್ಬುಗಳ ನಡುವೆ ಇದೆ. ಇದು ನಮ್ಮ ಮಾನಸಿಕ ಆರೋಗ್ಯವನ್ನು ನೋಡಿಕೊಳ್ಳುತ್ತದೆ.
೭.ಕಿರೀಟಿ ಚಕ್ರ- ಇದು ತಲೆಯ ಮೇಲ್ಭಾಗ/ನೆತ್ತಿಯ ಮೇಲಿದೆ. ಇದು ಉಳಿದೆಲ್ಲಾ ಚಕ್ರಗಳ ಸಮತೋಲನವನ್ನು ನಿಯಂತ್ರಿಸುತ್ತದೆ.
ಈ ಚಕ್ರಗಳ ನಿರಂತರ ಅಭ್ಯಾಸದಿಂದ ನಮ್ಮ ದೇಹದಲ್ಲಿ ಚಲನೆಯಲ್ಲಿರುವ ಶಕ್ತಿಗಳನ್ನು ನಿಭಾಯಿಸಬಹುದು. ಅಂದರೆ ಈ ಶಕ್ತಿ ವ್ಯವಸ್ಥೆಗಳು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಉಂಟಾಗುವ ಅಡೆತಡೆಗಳನ್ನು ತೆರವುಗೊಳಿಸಲು ಸಹಾಯ ಮಾಡುತ್ತದೆ. ದೇಹದ ಮೂಲಕ ಶಕ್ತಿಯ ಹರಿವನ್ನು ನಿಭಾಯಿಸುತ್ತದೆ.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…