ಡಾ.ಚೈತ್ರ ಸುಖೇಶ್

ಧ್ಯಾನ ಎಂದರೇನು?

ಧ್ಯಾನ ಎಂದರೆ ನಮ್ಮ ಜೀವಶಕ್ತಿಯಾದ ಕುಂಡಲಿನಿ ಶಕ್ತಿಯ ಮೇಲೆ ನಮ್ಮ ಗಮನವನ್ನು ಕೇಂದ್ರೀಕರಿಸುವುದು. ಇದು ಮಾನಸಿಕ ಏಕಾಗ್ರತೆಯ ಅಡೆತಡೆಯಿಲ್ಲದ ಸ್ಥಿತಿ.

ಉಪಯೋಗಗಳು

■ ಮಾನಸಿಕ ಮತ್ತು ದೈಹಿಕ ಆರೋಗ್ಯ ಸುಧಾರಿಸುತ್ತದೆ.

■ಮನಸ್ಸು ಶಾಂತಗೊಳ್ಳುತ್ತದೆ.

■ಮನಸ್ಸು ಸಂತೋಷ ಮತ್ತು ಉಲ್ಲಾಸ/ ಉತ್ಸಾಹ ಭರಿತವಾಗುತ್ತದೆ.

■ಆಂತರಿಕ ಶಕ್ತಿ-ಸಾಮರ್ಥ್ಯ ಹೆಚ್ಚುತ್ತದೆ.

■ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.

■ದೀರ್ಘಕಾಲದ ನೋವನ್ನು ಕಡಿಮೆ ಮಾಡಲು ಸಹಕರಿಸುತ್ತದೆ.

■ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ.

■ಏಕಾಗ್ರತೆಯನ್ನು ಹೆಚ್ಚಿಸುತ್ತದೆ.

■ಆತಂಕ, ಒತ್ತಡ, ಖಿನ್ನತೆ ((Anxiel, Depressicen)ಯನ್ನು ಕಡಿಮೆ ಮಾಡುತ್ತದೆ.

■ ದೇಹದಲ್ಲಿರುವ ಅಧಿಕ ಕೊಬ್ಬನ್ನು ಕಡಿಮೆಗೊಳಿಸುತ್ತದೆ ಹಾಗೂ ದೇಹದ ತೂಕದ ನಿರ್ವಹಣೆಗೂ ಸಹಾಯಕಾರಿ.

ಧ್ಯಾನದ ಹಾದಿಯು ೩ ಹಂತಗಳು: 

■ ಧಾರಣ (ಏಕಾಗ್ರತೆ)

■ಧ್ಯಾನ (ಧ್ಯಾನ)

■ಸಮಾಧಿ (ಜ್ಞಾನೋದಯ)

ದೀರ್ಘ ವಾದ ಧ್ಯಾನವು ಸಮಾಧಿ ಅಥವಾ ಜ್ಞಾನೋದಯಕ್ಕೆ ಕಾರಣವಾಗುತ್ತದೆ. ಆಯುರ್ವೇದ, ಯೋಗ ಮತ್ತು ಧ್ಯಾನದ ಮೂಲಕ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಪಡೆಯಬಹುದು. ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ನಿರಂತರ ಧ್ಯಾನ ಅಭ್ಯಾಸದಿಂದ ನಮ್ಮ ದೇಹದಲ್ಲಿರುವ ೭ ಚಕ್ರಗಳನ್ನು ನಾವು ಸುಸ್ಥಿತಿಯಲ್ಲಿಡಬಹುದು. ಧ್ಯಾನದಲ್ಲಿ ಮುಖ್ಯವಾದ ಪ್ರಕಾರ ಚಕ್ರಧ್ಯಾನ. ಚಕ್ರ ಎಂದರೆ ಬೆನ್ನುಹುರಿ (Dire) ಮಾನವ ದೇಹದ ೭ ಪ್ರಮುಖ ಚಕ್ರಗಳು

೧. ಮೂಲಾಧಾರ ಚಕ್ರ-ಇದು ನಮ್ಮ ಬೆನ್ನು ಮೂಳೆಯ ಬುಡದಲ್ಲಿದೆ. ಇದು ಮಾನಸಿಕ ಶಕ್ತಿ, ವ್ಯಕ್ತಿತ್ವ, ಧೈರ್ಯ ಪ್ರವೃತ್ತಿಗಳನ್ನು ಹೆಚ್ಚಿಸುತ್ತದೆ.

೨. ಸಾದಿಸ್ಥಾನ ಚಕ್ರ-ಇದು ನಮ್ಮ ಹೊಕ್ಕಳಿನ ಕೆಳಗೆ ಇದೆ. ಇದು ಸಂತಾನೋತ್ಪತ್ತಿ ಅಂಗಗಳನ್ನು ನಿಯಂತ್ರಿಸುತ್ತದೆ.

೩. ಮಣಿಪುರ ಚಕ್ರ- ಇದು ಹೊಕ್ಕುಳ ಜಾಗದ ಮೇಲೆ ಇರುತ್ತದೆ. ಇದು ಮನುಷ್ಯನ ಜೀರ್ಣಾಂಗ ವ್ಯವಸ್ಥೆಗೆ ಸಹಾಯ ಮಾಡುತ್ತದೆ.

೪. ಹೃದಯ ಚಕ್ರ- ಇದು ಎದೆಯ ಮಧ್ಯ ಭಾಗದಲ್ಲಿದೆ. ಇದು ಹೃದಯ, ಶ್ವಾಸಕೋಶಗಳ ಆರೋಗ್ಯವನ್ನು ನಿಯಂತ್ರಿಸುತ್ತದೆ. ಈ ಚಕ್ರವು ನಿರ್ಬಂಧಿಸಲ್ಪಡಲು ಹಲವಾರು ಕಾರಣಗಳಿವೆ. ನಕಾರಾತ್ಮಕ ಭಾವನೆಗಳು, ಭಯ, ಕೆಟ್ಟ ಜೀವನ ಶೈಲಿ, ಕೆಟ್ಟ ಅಭ್ಯಾಸಗಳು.

೫. ವಿಶುದ್ಧ ಚಕ್ರ-ಇದು ಗಂಟಲಿನ ಚಕ್ರ.

೬. ಆಜ್ಞಾ ಚಕ್ರ- ಇದು ಹಣೆ/ಹುಬ್ಬುಗಳ ನಡುವೆ ಇದೆ. ಇದು ನಮ್ಮ ಮಾನಸಿಕ ಆರೋಗ್ಯವನ್ನು ನೋಡಿಕೊಳ್ಳುತ್ತದೆ.

೭.ಕಿರೀಟಿ ಚಕ್ರ- ಇದು ತಲೆಯ ಮೇಲ್ಭಾಗ/ನೆತ್ತಿಯ ಮೇಲಿದೆ. ಇದು ಉಳಿದೆಲ್ಲಾ ಚಕ್ರಗಳ ಸಮತೋಲನವನ್ನು ನಿಯಂತ್ರಿಸುತ್ತದೆ.

ಈ ಚಕ್ರಗಳ ನಿರಂತರ ಅಭ್ಯಾಸದಿಂದ ನಮ್ಮ ದೇಹದಲ್ಲಿ ಚಲನೆಯಲ್ಲಿರುವ ಶಕ್ತಿಗಳನ್ನು ನಿಭಾಯಿಸಬಹುದು. ಅಂದರೆ ಈ ಶಕ್ತಿ ವ್ಯವಸ್ಥೆಗಳು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಉಂಟಾಗುವ ಅಡೆತಡೆಗಳನ್ನು ತೆರವುಗೊಳಿಸಲು ಸಹಾಯ ಮಾಡುತ್ತದೆ. ದೇಹದ ಮೂಲಕ ಶಕ್ತಿಯ ಹರಿವನ್ನು ನಿಭಾಯಿಸುತ್ತದೆ.

ಆಂದೋಲನ ಡೆಸ್ಕ್

Recent Posts

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

55 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

4 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

5 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

18 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

18 hours ago