ಕನ್ನಡ ಕಿರುತೆರೆಯ ನಟಿಯೊಬ್ಬಳು ತನ್ನ ಮಗುವಿಗೆ ಜನ್ಮ ನೀಡಿದ ನಂತರ ತನ್ನಲ್ಲಾದ ಬದಲಾವಣೆಯನ್ನು ಕುರಿತು ಮುಕ್ತವಾಗಿ ರಿಯಾಲಿಟಿ ಶೋನಲ್ಲಿ ಹೇಳಿಕೊಂಡ ವಿಡಿಯೋ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಕೆಲವರು ಲೊಲ್ ಎನ್ನುತ್ತಾ, ಅತಿಯಾಯ್ತು ಎಂದು ಪ್ರತಿಕ್ರಿಯಿಸುತ್ತಿದ್ದರು. ಮಗುವಿಗೆ ಜನ್ಮ ನೀಡಿದ ಬಹುತೇಕ ಮಹಿಳೆಯರಲ್ಲಿ ಇದು ಸಹಜ ಬದಲಾವಣೆ. ಇನ್ನೊಂದು ಜೀವವನ್ನು ತನ್ನಿಂದ ಲೋಕಕ್ಕೆ ತಂದ ಮೇಲೆ, ತಾಯಿಯಾದವಳ ದೇಹಸ್ಥಿತಿಯಲ್ಲಿ ಹಾರ್ಮೋನ್ ಬಹಳ ವ್ಯತ್ಯಯವನ್ನು ಉಂಟುಮಾಡುತ್ತದೆ. ಕನಿಷ್ಟ 40 ದಿನಗಳವರೆಗೆ ಇದನ್ನು ಗುರುತಿಸಬಹುದು. ಎಷ್ಟೋ ಮಹಿಳೆಯರು ಮಗುವನ್ನು ಕಂಡು ಅಳುತ್ತಾ, ನನ್ನ ಮಗುವನ್ನು ನಾನು ಇಷ್ಟಪಡುತ್ತೇನಾ? ತಾನು ಒಳ್ಳೆ ತಾಯಿಯಾಗಬಹುದೇ? ಎಂಬ ಪ್ರಶ್ನೆಗಳನ್ನಿಟ್ಟು ಕೊರಗುತ್ತಾರೆ. ಕೆಲವರು ಮೌನವಾಗಿ ಖಿನ್ನತೆಗೂ ಜಾರುತ್ತಾರೆ. ಇವೆಲ್ಲ ಯೋಚನೆಗೆ ಅರ್ಥವೇ ಇಲ್ಲವೆಂದು ತಳ್ಳಿಹಾಕುವಂತಿಲ್ಲ. ಏಕೆಂದರೆ, ಒಳಗಿನ ಸಂಕಟಗಳ ತೀವ್ರತೆ ಬೇರೆಯದ್ದೇ ಆಗಿರುತ್ತದೆ. ಕೆಲ ಮಹಿಳೆಯರು 41ನೆಯ ದಿನದ ನಂತರ ಚೇತರಿಸಿಕೊಂಡು, ವ್ಯಾಯಾಮ ಮತ್ತು ದೈಹಿಕ ಚಟುವಟಿಕೆಗಳಿಂದ ಮನಸ್ಸನ್ನು ಪ್ರಶಾಂತಗೊಳಿಸಿಕೊಳ್ಳುತ್ತಾರೆ. ಇನ್ನುಳಿದವರಿಗೆ ಕುಟುಂಬ, ಸ್ನೇಹಿತರ ಬಳಗ ಜೊತೆಗಿದ್ದು, ತಾಯ್ತನದ ಸಹಜತೆಗಳನ್ನು ತಿಳಿಸಿ, ಮಾನಸಿಕವಾಗಿ ಅವರನ್ನು ಗಟ್ಟಿಗೊಳಿಸುವುದು ಅನಿವಾರ್ಯ.

andolana

Recent Posts

ಚಾ.ನಗರ | ಮನುಸ್ಮೃತಿ ಪ್ರತಿ ಹರಿದು ಪ್ರತಿಭಟನೆ

ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು…

7 mins ago

ಕರ್ನಾಟಕದಲ್ಲಿ ಉದ್ಯೋಗ ಸೃಷ್ಠಿ | ರಾಹುಲ್‌ ಗಾಂಧಿ ಹಾಗೂ ಅಶ್ವಿನ್‌ ವೈಷ್ಣವ್‌ ನಡುವೆ ಟ್ವಿಟ್‌ ವಾರ್…

ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…

60 mins ago

ಚಿತ್ರದುರ್ಗ ಬಸ್‌ ದುರಂತ | ಶಾಲಾ ಮಕ್ಕಳಿದ್ದ ಮತ್ತೊಂದು ಬಸ್ಸಿಗೂ ಬೆಂಕಿ : ಕೂದಲೆಳೆ ಅಂತರದಲ್ಲಿ ಪವಾಡಸದೃಶ ಪಾರು!

ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…

1 hour ago

ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…

2 hours ago

ನಾಳೆ ದೆಹಲಿಗೆ ತೆರಳಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್‌.27ರಂದು ದೆಹಲಿಯ ಇಂದಿರಾ…

3 hours ago

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…

3 hours ago