ಕನ್ನಡ ಕಿರುತೆರೆಯ ನಟಿಯೊಬ್ಬಳು ತನ್ನ ಮಗುವಿಗೆ ಜನ್ಮ ನೀಡಿದ ನಂತರ ತನ್ನಲ್ಲಾದ ಬದಲಾವಣೆಯನ್ನು ಕುರಿತು ಮುಕ್ತವಾಗಿ ರಿಯಾಲಿಟಿ ಶೋನಲ್ಲಿ ಹೇಳಿಕೊಂಡ ವಿಡಿಯೋ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಕೆಲವರು ಲೊಲ್ ಎನ್ನುತ್ತಾ, ಅತಿಯಾಯ್ತು ಎಂದು ಪ್ರತಿಕ್ರಿಯಿಸುತ್ತಿದ್ದರು. ಮಗುವಿಗೆ ಜನ್ಮ ನೀಡಿದ ಬಹುತೇಕ ಮಹಿಳೆಯರಲ್ಲಿ ಇದು ಸಹಜ ಬದಲಾವಣೆ. ಇನ್ನೊಂದು ಜೀವವನ್ನು ತನ್ನಿಂದ ಲೋಕಕ್ಕೆ ತಂದ ಮೇಲೆ, ತಾಯಿಯಾದವಳ ದೇಹಸ್ಥಿತಿಯಲ್ಲಿ ಹಾರ್ಮೋನ್ ಬಹಳ ವ್ಯತ್ಯಯವನ್ನು ಉಂಟುಮಾಡುತ್ತದೆ. ಕನಿಷ್ಟ 40 ದಿನಗಳವರೆಗೆ ಇದನ್ನು ಗುರುತಿಸಬಹುದು. ಎಷ್ಟೋ ಮಹಿಳೆಯರು ಮಗುವನ್ನು ಕಂಡು ಅಳುತ್ತಾ, ನನ್ನ ಮಗುವನ್ನು ನಾನು ಇಷ್ಟಪಡುತ್ತೇನಾ? ತಾನು ಒಳ್ಳೆ ತಾಯಿಯಾಗಬಹುದೇ? ಎಂಬ ಪ್ರಶ್ನೆಗಳನ್ನಿಟ್ಟು ಕೊರಗುತ್ತಾರೆ. ಕೆಲವರು ಮೌನವಾಗಿ ಖಿನ್ನತೆಗೂ ಜಾರುತ್ತಾರೆ. ಇವೆಲ್ಲ ಯೋಚನೆಗೆ ಅರ್ಥವೇ ಇಲ್ಲವೆಂದು ತಳ್ಳಿಹಾಕುವಂತಿಲ್ಲ. ಏಕೆಂದರೆ, ಒಳಗಿನ ಸಂಕಟಗಳ ತೀವ್ರತೆ ಬೇರೆಯದ್ದೇ ಆಗಿರುತ್ತದೆ. ಕೆಲ ಮಹಿಳೆಯರು 41ನೆಯ ದಿನದ ನಂತರ ಚೇತರಿಸಿಕೊಂಡು, ವ್ಯಾಯಾಮ ಮತ್ತು ದೈಹಿಕ ಚಟುವಟಿಕೆಗಳಿಂದ ಮನಸ್ಸನ್ನು ಪ್ರಶಾಂತಗೊಳಿಸಿಕೊಳ್ಳುತ್ತಾರೆ. ಇನ್ನುಳಿದವರಿಗೆ ಕುಟುಂಬ, ಸ್ನೇಹಿತರ ಬಳಗ ಜೊತೆಗಿದ್ದು, ತಾಯ್ತನದ ಸಹಜತೆಗಳನ್ನು ತಿಳಿಸಿ, ಮಾನಸಿಕವಾಗಿ ಅವರನ್ನು ಗಟ್ಟಿಗೊಳಿಸುವುದು ಅನಿವಾರ್ಯ.

andolana

Recent Posts

ಹನೂರು| ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಕಾರ್ಯಕರ್ತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ…

25 mins ago

ಕಾಡಾನೆ ದಾಳಿಗೆ ನಾಶವಾದ ತೆಂಗು, ಮುಸುಕಿನ ಜೋಳ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಾನೆ ದಾಳಿಗೆ ತೆಂಗು ಹಾಗೂ ಮುಸುಕಿನ ಜೋಳದ ಬೆಳೆ ನಾಶವಾಗಿರುವ ಘಟನೆ…

33 mins ago

ರಾಜ್ಯಕ್ಕೂ ಬಂತು ಎಸ್‌ಐಆರ್‌ ; ಜೂನ್‌ನಿಂದ ಆರಂಭ

ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್‌ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು…

2 hours ago

ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ಪುರಭವನ?

ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…

3 hours ago

ಹಿಜಾಬ್‌ ವಿವಾದ : ಹೊಸ ಆದೇಶ ಸಕಾರಾತ್ಮಕ ಬೆಳವಣಿಗೆಗೆ ಸಹಾಯ

ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ಮುಟ್ಟಿದ ನನ್ನೂರಿನ ಮನಸುಗಳು…

• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…

5 hours ago