ಡಾ. ಚೈತ್ರ ಸುಖೇಶ್
ಮನುಷ್ಯನ ಬೆಳವಣಿಗೆಯ ಹಾರ್ಮೋನ್ ನಮ್ಮ ಮಿದುಳಿನಲ್ಲಿರುವ ಪಿಟ್ಯುಟರಿ ಗ್ರಂಥಿಯಲ್ಲಿ ಉತ್ಪತ್ತಿಯಾಗುತ್ತದೆ. ಈ ಹಾರ್ಮೋನ್ನ ಉತ್ಪಾದನೆ ಒಬ್ಬರಲ್ಲಿ ಹೆಚ್ಚಾದರೆ ಅವರು ಎತ್ತರವಾಗಿ ಬೆಳೆಯು ತ್ತಾರೆ. ಕಡಿಮೆ ಉತ್ಪತ್ತಿಯಾದರೆ ಅವರು ಕುಳ್ಳರಾಗುತ್ತಾರೆ.
ಹದಿಹರೆಯದವರಲ್ಲಿ ಶಾರೀರಿಕ ಬೆಳವಣಿಗೆ ತೀರಾ ಕುಂಠಿತವಾದಾಗ ಅಥವಾ ಅವರಿಗೆ ತೀರಾ ಅತಿಯಾಗಿ ಸ್ರವಿಕೆಯಾಗುವಾಗ ವೈದ್ಯರನ್ನು ಕಾಣಬೇಕು. ಟೆಸ್ಟೋಸ್ಟೆರಾನ್ ಪುರುಷರಲ್ಲಿ ಪುರುಷತ್ವದ ಗುಣ ಲಕ್ಷಣಗಳಿಗೆ ಕಾರಣವಾಗುತ್ತದೆ. ಹಾಗೆಯೇ ಈಸ್ಟ್ರೋಜನ್ ಹೆಣ್ಣು ಮಕ್ಕಳಲ್ಲಿ ಸ್ತ್ರೀ ತನದ ಲಕ್ಷಣಗಳಿಗೆ ಕಾರಣವಾಗುತ್ತದೆ.
ಹೀಗಾಗಿ ಬೆಳೆಯುವ ಮಕ್ಕಳಿಗೆ ಪುಷ್ಟಿಕರವಾದ ಸಮತೋಲನ ಆಹಾರ ನೀಡಬೇಕು. ಆಗ ಉತ್ತಮ ಹಾರ್ಮೋನ್ ಬೆಳವಣಿಗೆಯಾಗಿ ಮಕ್ಕಳು ಆರೋಗ್ಯವಾಗಿರಲು ಸಹಾಯಕವಾಗುತ್ತದೆ. ಬೆಳೆಯುವ ಹಂತದಲ್ಲಿರುವ ಮಕ್ಕಳು ಎಲ್ಲ ಬಗೆಯ ಬೇಳೆ ಕಾಳುಗಳು, ಸೊಪ್ಪು, ತರಕಾರಿ, ಎಲ್ಲ ಬಗೆಯ ಹಣ್ಣುಗಳು, ಹಾಲು, ಮೊಸರು ಹೀಗೆ ಉತ್ತಮ ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳನ್ನು ಸೇವಿಸಬೇಕು.
ಈ ವಯಸ್ಸಿನಲ್ಲಿ ಮಕ್ಕಳು ಅತಿಯಾದ ಕೊಬ್ಬಿನಾಂಶವಿರುವ ಆಹಾರ, ಸಕ್ಕರೆ ಮಿಶ್ರಿತ ತಿಂಡಿಗಳು, ಎಣ್ಣೆಯಲ್ಲಿ ಕರಿದ ತಿನಿಸುಗಳು, ಕೇಕ್, ಚಾಕೊಲೇಟ್, ಐಸ್ಕ್ರೀಂನಂತಹ ಆಹಾರಗಳ ಸೇವನೆಯನ್ನು ಕಡಿಮೆ ಮಾಡ ಬೇಕು. ಈ ಆಹಾರಗಳು ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು.
ಇನ್ನು ಬೆಳವಣಿಗೆ ಹಂತದಲ್ಲಿರುವ ಮಕ್ಕಳಿಗೆ ನಾವು ಬೀದಿ ಬದಿಯ ಆಹಾರ, ಫಾಸ್ಟ್ ಫುಡ್ಗಳು, ಸಂಸ್ಕರಿಸಿದ ಆಹಾರ, ಸೋಡಾ ಸೇರಿಸಿದ ಆಹಾರ, ಟೇಸ್ಟ್ ಮೇಕರ್ ಮತ್ತು ಕ್ಲೋರಿನ್ ಹಾಕಿದ ಆಹಾರ ಪದಾರ್ಥಗಳನ್ನು ನೀಡಲೇಬಾರದು. ಇಂತಹ ಆಹಾರಗಳನ್ನು ಸೇವಿಸುವುದು ಆರೋಗ್ಯಕ್ಕೆ ಹೆಚ್ಚು ಹಾನಿಕಾರಕ.
ನಿಯಮಿತ ವ್ಯಾಯಾಮ: ವೇಗದ ನಡಿಗೆ, ಸೈಕಲಿಂಗ್, ಈಜು, ಆಟ ಗಳಲ್ಲಿ ತೊಡಗುವುದು ಬೆಳೆಯುವ ಮಕ್ಕಳಿಗೆ ಅತ್ಯಗತ್ಯ. ಇದರಿಂದ ಅವರ ಮೂಳೆಗಳು ಉತ್ತಮ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಬೆಳೆಯುವ ಹಂತದಲ್ಲಿ ಯಾವುದೇ ಚಟುವಟಿಕೆಗಳಿಲ್ಲದಿದ್ದಲ್ಲಿ ದೈಹಿಕ ಬೆಳವಣಿ ಗೆಯು ಕುಂಠಿತವಾಗುತ್ತದೆ. ಅಲ್ಲದೆ ತೂಕ ಹೆಚ್ಚಾಗಿ ಬೊಜ್ಜು ಬರಲು ಕಾರಣವಾಗುತ್ತದೆ.
ಬೌದ್ಧಿಕ ಬೆಳವಣಿಗೆ: ಹದಿಹರೆಯದ ವಯಸ್ಸಿನಲ್ಲಿ ಮಕ್ಕಳ ಬೌದ್ಧಿಕ ಮಟ್ಟ ವೃದ್ಧಿಯಾಗಬೇಕು. ಕಲಿಕೆಯಲ್ಲಿ ಆಸಕ್ತಿ, ನೆನಪಿನ ಶಕ್ತಿ, ಆಲೋಚನೆ ಮಾಡುವುದು, ವ್ಯಾವಹಾರಿಕ ಜ್ಞಾನ ಈ ಎಲ್ಲ ಬುದ್ಧಿ ಪ್ರಕಾರಗಳು ಹದಿಹರೆಯದಲ್ಲಿಯೇ ವಿಕಾಸಗೊಳ್ಳಬೇಕು.
ಪ್ರೀತಿ, ವಾತ್ಸಲ್ಯ, ಸ್ನೇಹ, ಧೈರ್ಯ, ಸಂತೋಷ ಮಕ್ಕಳಲ್ಲಿ ಹೆಚ್ಚಾಗಿ, ಭಯ, ಸಿಟ್ಟು, ದುಃಖ, ದ್ವೇಷ ಮುಂತಾದ ನಕಾರಾತ್ಮಕ ಭಾವನೆಗಳು ದೂರವಾಗಬೇಕು.
ಹದಿಹರೆಯದಲ್ಲಿ ಕಾಡುವ ಮರೆವಿನ ಸಮಸ್ಯೆಯನ್ನು ಹೋಗಲಾಡಿಸಿ, ಬುದ್ಧಿ ಶಕ್ತಿಯನ್ನು ಚುರುಕುಗೊಳಿಸಲು ಕೆಲ ವೊಂದು ಆಯುರ್ವೇದ ಮನೆಮದ್ದುಗಳು ತಂಬಾ ಸಹಕಾರಿಯಾಗಿವೆ.
ಹೀಗೆ ಮಾಡುವುದರಿಂದ ಮರೆವಿನ ಸಮಸ್ಯೆ ಕಡಿಮೆಯಾಗುತ್ತದೆ.
ಮಕ್ಕಳಲ್ಲಿ ಹಾರ್ಮೋನ್ ಉತ್ತಮ ರೀತಿಯಲ್ಲಿ ವೃದ್ಧಿಗೊಳ್ಳಲು ಸಹಕಾರಿಯಾಗುವ ಅಂಶಗಳು
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…