ಮಹಿಳೆ ಸಬಲೆ

ಪುರುಷರ ಲಾಲಸೆಗಳಿಗೆ ಬಲಿಯಾಗದಿರಿ

ಅಂಜಲಿ ರಾಮಣ್ಣ

ವಕ್ಛ್‌ಗೆ ಸಂಬಂಧಪಟ್ಟ ಕಾನೂನು ರಾಷ್ಟ್ರಪತಿಯಿಂದ ಅನುಮೋದನೆ ಪಡೆದು ಜಾರಿಗೆ ಬಂದಿದೆ. ಈ ಕಾನೂನಿ ನೊಡನೆ ಸಹಮತ ಇಲ್ಲದ ಭಾರತ ದೇಶದ ಯಾವುದೇ ಪ್ರಜೆಯು ಸರ್ವೋಚ್ಚ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸಲು ಸಂವಿಧಾನವು ಅವಕಾಶ ನೀಡಿದೆ. ಹೀಗಿರುವಾಗ ಜನರು ಕಾನೂನಾತ್ಮಕ ಮಾರ್ಗ ವನ್ನು ಅನುಸರಿಸದೆ ದಂಗೆ ಏಳಬೇಕು, ರಕ್ತಪಾತ ಮಾಡ ಬೇಕು, ಸಾರ್ವ ಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಯುಂಟು ಮಾಡಬೇಕು, ಅರಾಜಕತೆ ಉಂಟು ಮಾಡಬೇಕು ಎಂದು ರಾಜಕಾರಣಿಯೊಬ್ಬರು ಕರೆಕೊಟ್ಟಿರುವ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.

ಸಾಮಾನ್ಯವಾಗಿ ಸಾಮಾಜಿಕ ಗಲಭೆಗಳನ್ನು ಹುಟ್ಟುಹಾಕಲು ಹೆಂಗಸರು ಮತ್ತು ಯುವಕರನ್ನು ಉದ್ವೇಗಕ್ಕೆ ಒಳಪಡಿಸಿ ತಮ್ಮ ಕಾರ್ಯ ಸಾಧಿಸಿಕೊಳ್ಳುವುದು ಪುರುಷರ ಹಳೆಯ ದುಶ್ಚಟವೇ ಆಗಿದೆ. ಆದರೆ ಯಾರದ್ದೋ ಮಾತುಗಳನ್ನು ಕೇಳಿಕೊಂಡು ಅದರಂತೆ ಸಮಾಜಕ್ಕೆ ತೊಂದರೆಯಾಗುವಂತೆ ನಡೆದುಕೊಂಡರೆ ಅದನ್ನು ಅಪರಾಧ ಎಂದಷ್ಟೇ ನೋಡಲಾಗುತ್ತದೆ. ಹೆಂಗಸರು ಎನ್ನುವ ಮಾಫಿ ಸಿಗುವುದಿಲ್ಲ.

ಭಾರತೀಯ ನ್ಯಾಯ ಸಂಹಿತೆ ೨೦೨೩ ಈ ಕಾಯಿದೆಯ ಸೆಕ್ಷನ್ ೧೫೨ರ ಅಡಿಯಲ್ಲಿ ಈ ದೇಶದ ಸಾರ್ವಭೌಮತ್ವಕ್ಕೆ, ಸುರಕ್ಷತೆಗೆ ಧಕ್ಕೆ ತರುವಂತಹ , ಅರಾಜಕತೆ ಉಂಟು ಮಾಡ ಬಹುದಾದಂತಹ, ಸರ್ಕಾರವನ್ನು ಹಿಂಸೆಯ ಮೂಲಕ ಉರುಳಿಸುವಂತಹ ಕೆಲಸಕ್ಕೆ, ಭಾಷಣಗಳ, ಮಾತುಗಳ, ವಾಟ್ಸಾಪ್ ಸಂದೇಶಗಳ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳ ಮೂಲಕ ಪ್ರಚೋದನೆ ನೀಡುವುದನ್ನು ಮತ್ತಿತರೆ ಚಟುವಟಿಕೆಗಳನ್ನು (ಸರಿಸುಮಾರು ಭಯೋತ್ಪಾ ದನೆ ಚಟುವಟಿಕೆ ಎಂದು ಪರಿಗಣಿಸಿ) ಅಪರಾಧ ಎಂದು ಗುರುತಿಸಲಾಗಿದೆ. ಜಾಮೀನು ರಹಿತ ಈ ಅಪರಾಧಕ್ಕೆ ೭ ವರ್ಷಗಳ ಜೈಲುವಾಸದಿಂದ ಜೀವಾವಧಿ ಶಿಕ್ಷೆ ಕೂಡ ಇದೆ.

ಆ ಪ್ರಚೋದನೆಯನ್ನು ಜಾರಿಗೆ ತರಲು ಧನ ಸಹಾಯ, ತಾಂತ್ರಿಕತೆಯ ಬೆಂಬಲ, ಸ್ಥಳ ನೀಡುವಿಕೆ, ಜನರನ್ನು ಗುಂಪುಗೂಡಿಸುವಿಕೆ, ಆಯುಧಗಳ ಸಂಗ್ರಹಣೆ ಮತ್ತು ಬಳಕೆ ಹಾಗೂ ಇದಕ್ಕೆ ಸಂಬಂಧಪಟ್ಟ ಮತ್ತ್ಯಾವುದೇ ರೀತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಲು ಮುಂದಾದರೆ ಮತ್ತು ಧಾರ್ಮಿಕ ಕಲಹಗಳನ್ನು ಉಂಟು ಮಾಡಿದರೆ ಅದನ್ನು ಸಹ ಇದೇ ಕಾನೂನಿನ ಸೆಕ್ಷನ್ ೧೯೧, ೨೭೦ ಮತ್ತು ೨೯೨ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ಗುರುತಿಸಿ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ.

ಹಾಗಾದರೆ ದೇಶದಲ್ಲಿ ನಡೆಯುವ ತಪ್ಪುಗಳೆಡೆಗೆ ಪ್ರಶ್ನೆ ಒಡ್ಡುವುದೇ ಅಪರಾಧ ಎಂದಲ್ಲ. ಸರ್ಕಾರ ಮತ್ತು ದೇಶ ಇವರೆಡರ ನಡುವಿನ ವ್ಯತ್ಯಾಸ ತಿಳಿದುಕೊಂಡು ನಮ್ಮ ಖಂಡನೆ ಯಾವುದರ ಕಡೆಗೆ ಇರಬೇಕು ಮತ್ತು ‘ಹೇಗೆ’ ಇರಬೇಕು ಎನ್ನುವುದನ್ನು ಅರ್ಥ ಮಾಡಿಕೊಂಡು ಸಂವಿಧಾನದ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಿರುತ್ತದೆ. ಮಹಿಳೆಯರು ಮತ್ತು ಯುವಕರು ಯಾರದ್ದೋ ಮಾತಿನಿಂದ ಪ್ರಚೋದನೆಗೊಂಡು ಅಥವಾ ಒತ್ತಡಕ್ಕೆ ಕಟ್ಟುಬಿದ್ದು ಇಂತಹ ಅಪರಾಧ ಕೃತ್ಯಕ್ಕೆ ಕೈ ಹಾಕಿ ಕುಟುಂಬದ ವರ್ತಮಾನ ಮತ್ತು ಭವಿಷ್ಯವನ್ನು ಹಾಳುಗೆಡಹುವ ಮೊದಲು ಎಚ್ಚೆತ್ತುಕೊಳ್ಳಬೇಕು. ಒಂದು ವೇಳೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸಲು ಯಾರಾದರೂ ಬಲವಂತ ಪಡಿಸುತ್ತಿದ್ದರೆ ಅವರ ಮೇಲೂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬಹುದು.

 (ಲೇಖಕರು ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳ ವಕೀಲರು)

ಆಂದೋಲನ ಡೆಸ್ಕ್

Recent Posts

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…

2 mins ago

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

2 hours ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

2 hours ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

2 hours ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

2 hours ago

ಮನುಷ್ಯನ ಮುಖವಾಡ ಕಳಚುವ ನಾಟಕ ‘ಪಾರ್ಟಿ’

ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…

2 hours ago