ಮಹಿಳೆ ಸಬಲೆ

ಗಂಡಸರ ಮಾತು ನಂಬಿ ಸಮನ್ಸ್ ತಿರಸ್ಕರಿಸಬೇಡಿ

ಅಂಜಲಿ ರಾಮಣ್ಣ

ಮೈಸೂರು ಕಡೆಯ ಜನರಿಗೆ ಚಿರಪರಿಚಿತರಾಗಿದ್ದ ನನ್ನ ತಂದೆ ಕೆ.ರಾಮಣ್ಣ ಅವರು ಮೈಸೂರಿನ ಶಂಕರಮಠ ರಸ್ತೆಯಲ್ಲಿ ಒಂದು ಮನೆ ಕಟ್ಟಿದ್ದರು. ಇಬ್ಬರು ಮೂವರು ಬಾಡಿಗೆದಾರರು ಕೊಟ್ಟ ಕಷ್ಟ ಅಷ್ಟಿಷ್ಟಲ್ಲ. ದೊಡ್ಡ ಕುಟುಂಬದ ಸಂಸಾರಸ್ಥ ಒಬ್ಬ ಬಾಡಿಗೆದಾರ. ಆತನ ಮನೆಭರ್ತಿ ವಯಸ್ಕ ಹೆಂಗಸರು, ಯುವತಿಯರು, ಮಕ್ಕಳು ಇದ್ದರು. ಸರಿಯಾಗಿ ಬಾಡಿಗೆಯನ್ನೂ ಕೊಡದೆ, ಮನೆಯನ್ನು ಬಿಡಲೂ ಒಪ್ಪದೆ ಆತನ ಸತಾಯಿಸುವಿಕೆ ಜಾಸ್ತಿ ಆದಾಗ ಕೋರ್ಟಿನಲ್ಲಿ ದಾವೆ ಹೂಡಲಾಗಿತ್ತು.

ವರ್ಷಗಳ ನಂತರ ಅಂತೂ ನಮ್ಮ ತಂದೆಯವರದ್ದೇ ಮನೆ ಅಂತಾಗಿ ಬಾಡಿಗೆದಾರ ಮನೆ ತೆರವು ಮಾಡಿಕೊಡಬೇಕು ಎಂದು ಕೋರ್ಟಿನ ಆದೇಶ ಆಯಿತು. ನ್ಯಾಯಾಲಯದ ಆದೇಶವನ್ನು ಜಾರಿಗೆ ತರುವುದಕ್ಕೋಸ್ಕರ ನ್ಯಾಯಾಲಯದ ನೋಟಿಸ್ ಮತ್ತು ಸಮನ್ಸ್ ಅನ್ನು ನೀಡಲು ಪೊಲೀಸರು ಯಾವಾಗ ಹೋದರೂ ಆತ ಮನೆಯ ಹೆಬ್ಬಾಗಿಲಿನಲ್ಲಿ ಹೆಂಗಸರನ್ನು ಸಾಲಾಗಿ ಕುಳ್ಳಿರಿಸಿ ಮನೆಯಲ್ಲಿ ಯಾರೂ ಗಂಡಸರಿಲ್ಲ ಎಂದು ಸಬೂಬು ಹೇಳಿಸಿ ನ್ಯಾಯಾಲಯದ ಪೊಲೀಸರನ್ನು ಹಿಂದಿರುಗಿಸುತ್ತಿದ್ದರು. ಮನೆಯನ್ನು ವಶಪಡಿಸಿಕೊಳ್ಳುವ ಆದೇಶ ಪ್ರತಿಯನ್ನು ತೆಗೆದುಕೊಂಡು ಹೋದಾಗಲೂ ಇದ್ದಬದ್ದ ಹೆಂಗಸರೆಲ್ಲಾ ಹೊಸ್ತಿಲ ಮೇಲೇ ಕುಳಿತು ಗಂಡಸರು ಇಲ್ಲ ಎಂದು ಬಿರುಸಿನಲ್ಲಿ ಹೇಳುತ್ತಿದ್ದರು.

ಆಗ ಚಾಲ್ತಿಯಲ್ಲಿದ್ದ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ (Criminal Procedure Code) ೧೯೭೩ ಈ ಕಾನೂನಿನ ಸೆಕ್ಷನ್ ೬೪ರಲ್ಲಿ ಸಮನ್ಸ್ ನೀಡಲಾಗಿರುವ ವ್ಯಕ್ತಿ ಮನೆಯಲ್ಲಿ ಇರದಿದ್ದ ಸಂದರ್ಭದಲ್ಲಿ ಸಮನ್ಸ್ಅನ್ನು ಕುಟುಂಬದ ವಯಸ್ಕ ‘ಪುರುಷ’ ಸದಸ್ಯನಿಗೆ ತಲುಪಿಸಿ ಬರಬೇಕು ಎಂದಿತ್ತು. ಹಾಗಾಗಿ ಬಹಳ ಪ್ರಕರಣಗಳಲ್ಲಿ ಮಹಿಳೆಯರನ್ನು ಗುರಾಣಿಯಂತೆ ಬಳಸಿಕೊಂಡು ಪ್ರಕರಣಗಳ ವಿಲೇವಾರಿಯನ್ನು ವಿಳಂಬವಾಗುವಂತೆ ಮಾಡಲಾಗುತ್ತಿತ್ತು. ಕೋರ್ಟಿನಲ್ಲಿ ಅಂತಿಮ ತೀರ್ಪು ಬರುವುದರೊಳಗೆ ಆತ ಮನೆಯ ಹೊರಗಿನ ಆವರಣ ಬಿಟ್ಟು ಒಳಗಿನ ಎಲ್ಲಾ ಬಾಗಿಲುವಾಡಗಳನ್ನು, ಮರಗೆಲಸವನ್ನು ಕಿತ್ತು ಎಲ್ಲಿಗೋ ಸಾಗಿಸಿ ಬಿಟ್ಟಿದ್ದರು. ಗೋಡೆಗಳ ಪ್ಲಾಸ್ಟರ್ಅನ್ನು ಮುಕ್ಕು ಮಾಡಿ ನೆಲವನ್ನೆಲ್ಲಾ ಅಗೆದು ಬಿಟ್ಟಿದ್ದರು.

ತ್ವರಿತಗತಿಯ ನ್ಯಾಯ ಎನ್ನುವ ಉದ್ದೇಶವನ್ನು ಹೊಂದಿರುವ, ಜುಲೈ ೨೦೨೪ರಂದು ಜಾರಿಗೆ ಬಂದಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ೨೦೨೩ ಈ ಕಾನೂನಿನ ಸೆಕ್ಷನ್ ೬೬ರಲ್ಲಿ ಸಮನ್ಸ್ ನೀಡಲಾಗಿರುವ ವ್ಯಕ್ತಿ ಮನೆಯಲ್ಲಿ ಇಲ್ಲದಾಗ, ಕುಟುಂಬದ ‘ಯಾವುದೇ’ ವಯಸ್ಕ ಸದಸ್ಯರಿಗೆ ತಲುಪಿಸಬೇಕು ಎನ್ನುವ ಬದಲಾವಣೆ ತರಲಾಗಿದೆ. ಹಾಗಾಗಿ ಮಹಿಳೆಯರನ್ನು ಮುಂದಿಟ್ಟುಕೊಂಡು ನ್ಯಾಯಾಲಯದ ಸಮಯವನ್ನು ಹಾಳು ಮಾಡುವ ಹಾಗಿಲ್ಲ. ನ್ಯಾಯಾಲಯದ ಆದೇಶವನ್ನು ಜಾರಿ ತರುವುದಕ್ಕಾಗಿಯೋ, ಆರೋಪಿ ಎನ್ನುವ ಕಾರಣಕ್ಕೋ, ಸಾಕ್ಷಿ ಹೇಳುವುದಕ್ಕಾಗಿ ಹಾಜರಿರಬೇಕು ಎಂತಲೋ, ಆಪಾದಿತ ಎಂದು ದಾವೆಯಲ್ಲಿ ಸೇರಿಸಬೇಕೋ ಬೇಡವೋ ಎಂದು ನಿರ್ಧರಿಸುವ ಕಾರಣಕ್ಕೂ ನ್ಯಾಯಾಲಯವು ವ್ಯಕ್ತಿಯೊಬ್ಬನಿಗೆ ಸಮನ್ಸ್ ನೀಡಬಹುದು.

ಅಂತಹ ಸಮನ್ಸ್ಅನ್ನು ಮರುಜಾರಿಯ ನಂತರವೂ ಕುಟುಂಬದ ಯಾವುದೇ ಮಹಿಳೆಯು ಆ ಸಮನ್ಸ್ ಸೇರಬೇಕಾದ ವ್ಯಕ್ತಿಗೆ ತಲುಪಿಸಲು ಅಡ್ಡಿಯಾದರೆ ಅದನ್ನು ಸೆಕ್ಷನ್ ೨೦೭ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಿ ಆಕೆಗೆ ೧ ರಿಂದ ೬ ತಿಂಗಳುಗಳ ಕಾಲ ಜೈಲು ಶಿಕ್ಷೆ ನೀಡಬಹುದು ಮತ್ತು ೫ ರಿಂದ ೧೦ ಸಾವಿರ ರೂ.ಗಳವರೆಗಿನ ದಂಡವನ್ನೂ ವಿಧಿಸಬಹುದು. ಅಷ್ಟೇ ಅಲ್ಲದೆ ಆಕೆಯನ್ನು ನ್ಯಾಯಾಂಗ ನಿಂದನೆ ಕಾನೂನಿನ ಅಡಿಯಲ್ಲಿಯೂ ಅಪರಾಧಿ ಎಂದು ಹೇಳಿ ಸೆಕ್ಷನ್ ೧೨ರ ಅಡಿಯಲ್ಲಿ ಹೆಚ್ಚುವರಿ ಸೆರೆವಾಸ ಮತ್ತು ದಂಡ ವಿಧಿಸುವ ಅವಕಾಶ ನ್ಯಾಯಾಲಯಕ್ಕೆ ಇರುತ್ತದೆ. ಕುಟುಂಬದ ಯಾವುದೇ ವಯಸ್ಕ ಮಹಿಳೆಯು ಮನೆಯಲ್ಲಿನ ಪುರುಷರ ಮಾತನ್ನು ನಂಬಿ ಸಮನ್ಸ್ ಅನ್ನು ತಿರಸ್ಕರಿಸುವ ಹಾಗಿಲ್ಲ. ಅಂತೆಯೇ ಸಮನ್ಸ್ಅನ್ನು ಮನೆಯಲ್ಲಿ ಕೆಲಸ ಮಾಡುವ ಕೆಲಸದಾಕೆ ಸ್ವೀಕರಿಸುವ ಹಾಗಿಲ್ಲ.

(ಲೇಖಕರು ಮಹಿಳೆ ಮತ್ತು ಮಕ್ಕಳ ಹಕ್ಕುಗಳ ವಕೀಲರು)

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

5 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

11 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago