ಕಾಡುವ ಮೊಡವೆಗಳಿಗೆ ಸುಲಭ ಪರಿಹಾರ

ಮೊಡವೆಗಳು ದೇಹದ ಹಾರ್ಮೋನುಗಳ ಏರಿಳಿತಗಳಿಗೆ ಸಂಬಂಧಿಸಿವೆ. ಇವು ಹಾರ್ಮೋನುಗಳ ಬದಲಾವಣೆಗಳಿಗೆ ಪ್ರತಿಕ್ರಿಯೆಯಾಗಿ ಕಾಣಿಸಿಕೊಳ್ಳುತ್ತದೆ. ವಿಶೇಷವಾಗಿ ಟೆಸ್ಟೋಸ್ಟೆರಾನ್‌ನಂತಹ ಆಂಡ್ರೋಜಿನ್‌ಗಳ ಹೆಚ್ಚಳದಿಂದಾಗಿ ಮೊಡವೆಗಳು ಉಂಟಾಗಿ ನೋವಿನಿಂದ ಕೂಡಿರುತ್ತದೆ.

ಈ ಮೊಡವೆಗಳನ್ನು ನಿಯಂತ್ರಿಸುವುದು ಹೇಗೆ ಅಂತೀರಾ? ಅದಕ್ಕಾಗಿ ನೀವು ಚರ್ಮದ ಆರೈಕೆಯನ್ನು ದಿನಚರಿಯನ್ನಾಗಿ ಅನುಸರಿಸಬೇಕಾಗುತ್ತದೆ. ಇದು ಮೊಡವೆಗಳನ್ನು ನಿಯಂತ್ರಿಸಲು ಉತ್ತಮ ಮಾರ್ಗವಾಗಿದೆ.

ನಿಮ್ಮ ಮುಖವನ್ನು ದಿನಕ್ಕೆ ಎರಡು ಬಾರಿ ಅಂದರೆ ಬೆಳಿಗ್ಗೆ ಮತ್ತು ಸಂಜೆ ತೊಳೆಯಬೇಕು. ಅತಿಯಾಗಿ ತೊಳೆಯುವುದೂ ಮೊಡವೆಗಳಿಗೆ ಒಳ್ಳೆಯದಲ್ಲ. ಮುಖವನ್ನು ಸ್ವಚ್ಛಗೊಳಿಸಲು ಸೌಮ್ಯವಾದ ಕ್ಲೆನ್ಸರ್‌ ಬಳಸಬೇಕು. ಅದೂ ಕೂಡ ಅತಿಯಾಗಬಾರದು. ಸ್ವಚ್ಛಗೊಳಿಸಲು ಬೆಚ್ಚಗಿನ ನೀರು ಉತ್ತಮ.

ಆದಷ್ಟೂ ಸೌಂದರ್ಯ ವರ್ಧಕಗಳನ್ನು ಕಡಿಮೆ ಮಾಡುವುದು ಉತ್ತಮ.

ಚರ್ಮವನ್ನು ನೈಸರ್ಗಿಕವಾಗಿ ಇಟ್ಟುಕೊಳ್ಳಬೇಕು. ಮೊಡವೆಗಳಿಗೆ ಸ್ವಯಂ ಆರೈಕೆಯೇ ಮುಖ್ಯವಾದ ಚಿಕಿತ್ಸೆಯಾಗಿದ್ದು, ನಿಮ್ಮ ಮುಖದ ಚರ್ಮವನ್ನು ಸರಿಯಾಗಿ ನೋಡಿಕೊಂಡರೆ ಸಾಕು ಅದಕ್ಕೆ ಯಾವುದೇ ಔಷಧಿ ಅಗತ್ಯವಿರುವುದಿಲ್ಲ.
ಇವುಗಳೊಂದಿಗೆ ಆರೋಗ್ಯಕರ ಡಯಟ್ ತುಂಬಾ ಮುಖ್ಯ. ನಿಮ್ಮ ಆಹಾರ ಕ್ರಮವು ನಿಮ್ಮ ಮೊಡವೆ ಸ್ಥಿತಿಯೊಂದಿಗೆ ನೇರ ಸಂಪರ್ಕವನ್ನು ಹೊಂದಿರುವುದರಿಂದ ಆಹಾರದಲ್ಲಿನ ಕೊಬ್ಬಿನಾಂಶ ಮತ್ತು ಕಾರ್ಬೋ ಹೈಡ್ರೆಟ್‌ಗಳು ನಿಮ್ಮ ಮೇದೋಗ್ರಂಥಿಗಳ ಸ್ರಾವ ಉತ್ಪಾದನೆಯನ್ನು ಹೆಚ್ಚಿಸಬಹುದು. ಅದು ಮೊಡವೆಗೆ ಕಾರಣವಾಗಬಹುದು. ಆದ್ದರಿಂದ ಧಾನ್ಯಗಳು, ಸಿಹಿಕಾರಕಗಳು, ಹಾಲು ಮತ್ತು ಚೀಸ್ ಸೇರಿದಂತೆ ಡೈರಿ ಉತ್ಪನ್ನಗಳು, ಕರಿದ ಆಹಾರಗಳು ಮತ್ತು ಕೇಕ್‌ಗಳನ್ನು ಆದಷ್ಟು ಕಡಿಮೆ ಮಾಡಬೇಕು. ಹೀಗೆ ಮನೆಯಲ್ಲಿಯೇ ಚರ್ಮದ ಕಾಳಜಿ ವಹಿಸಿದರೆ ಮೊಡವೆಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

ಆಂದೋಲನ ಡೆಸ್ಕ್

Recent Posts

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್:‌ ನಾಳೆಯಿಂದಲೇ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಹಣ

ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…

3 mins ago

ಹುಲಿ ಸೆರೆಗೆ ಚಾಮರಾಜನಗರದಲ್ಲಿ ಆಪರೇಷನ್‌ ಬೀಸ್ಟ್‌ ಆರಂಭ: ಡ್ರೋನ್‌ ಮೂಲಕ ಕಾರ್ಯಾಚರಣೆ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

22 mins ago

ಅಕ್ರಮವಾಗಿ ಕೇರಳಕ್ಕೆ ಜಾನುವಾರು ಸಾಗಾಟ: ಇಬ್ಬರ ಬಂಧನ

ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ…

41 mins ago

ವಿಶೇಷ ಚೇತನರಿಗೆ ಗುಡ್‌ನ್ಯೂಸ್‌: ಶಿಕ್ಷಣ ಉದ್ಯೋಗಕ್ಕೆ ಹೊಸ ನೀತಿ

ಬೆಂಗಳೂರು: ರಾಜ್ಯದಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ವಿಶೇಷ ಚೇತನರಿದ್ದು, ಅವರಿಗೆ ಶಿಕ್ಷಣ ಉದ್ಯೋಗವಕಾಶ ಕಲ್ಪಿಸಲು ನಮ್ಮ ಸರ್ಕಾರ ಹೊಸ…

42 mins ago

ಹೈಕೋರ್ಟ್‌ಗೆ ಎರಡು ವಾರ ಚಳಿಗಾಲದ ರಜೆ: ಜನವರಿ.5ರಿಂದ ಕಲಾಪ ಪುನಾರಂಭ

ಬೆಂಗಳೂರು: ಹೈಕೋರ್ಟ್‌ಗೆ ಡಿಸೆಂಬರ್.‌20ರಿಂದ 31ರವರೆಗೆ ಎರಡು ವಾರ ಚಳಿಗಾಲದ ರಜೆ ಇರುತ್ತದೆ. ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು,…

2 hours ago

ಮಾಜಿ ಸಚಿವ ಕೆ.ಎನ್‌ ರಾಜಣ್ಣ ಭೇಟಿ ಮಾಡಿದ ಡಿಸಿಎಂ

ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್‌ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ .…

2 hours ago