ಮೊಡವೆಗಳು ದೇಹದ ಹಾರ್ಮೋನುಗಳ ಏರಿಳಿತಗಳಿಗೆ ಸಂಬಂಧಿಸಿವೆ. ಇವು ಹಾರ್ಮೋನುಗಳ ಬದಲಾವಣೆಗಳಿಗೆ ಪ್ರತಿಕ್ರಿಯೆಯಾಗಿ ಕಾಣಿಸಿಕೊಳ್ಳುತ್ತದೆ. ವಿಶೇಷವಾಗಿ ಟೆಸ್ಟೋಸ್ಟೆರಾನ್ನಂತಹ ಆಂಡ್ರೋಜಿನ್ಗಳ ಹೆಚ್ಚಳದಿಂದಾಗಿ ಮೊಡವೆಗಳು ಉಂಟಾಗಿ ನೋವಿನಿಂದ ಕೂಡಿರುತ್ತದೆ.
ಈ ಮೊಡವೆಗಳನ್ನು ನಿಯಂತ್ರಿಸುವುದು ಹೇಗೆ ಅಂತೀರಾ? ಅದಕ್ಕಾಗಿ ನೀವು ಚರ್ಮದ ಆರೈಕೆಯನ್ನು ದಿನಚರಿಯನ್ನಾಗಿ ಅನುಸರಿಸಬೇಕಾಗುತ್ತದೆ. ಇದು ಮೊಡವೆಗಳನ್ನು ನಿಯಂತ್ರಿಸಲು ಉತ್ತಮ ಮಾರ್ಗವಾಗಿದೆ.
ನಿಮ್ಮ ಮುಖವನ್ನು ದಿನಕ್ಕೆ ಎರಡು ಬಾರಿ ಅಂದರೆ ಬೆಳಿಗ್ಗೆ ಮತ್ತು ಸಂಜೆ ತೊಳೆಯಬೇಕು. ಅತಿಯಾಗಿ ತೊಳೆಯುವುದೂ ಮೊಡವೆಗಳಿಗೆ ಒಳ್ಳೆಯದಲ್ಲ. ಮುಖವನ್ನು ಸ್ವಚ್ಛಗೊಳಿಸಲು ಸೌಮ್ಯವಾದ ಕ್ಲೆನ್ಸರ್ ಬಳಸಬೇಕು. ಅದೂ ಕೂಡ ಅತಿಯಾಗಬಾರದು. ಸ್ವಚ್ಛಗೊಳಿಸಲು ಬೆಚ್ಚಗಿನ ನೀರು ಉತ್ತಮ.
ಆದಷ್ಟೂ ಸೌಂದರ್ಯ ವರ್ಧಕಗಳನ್ನು ಕಡಿಮೆ ಮಾಡುವುದು ಉತ್ತಮ.
ಚರ್ಮವನ್ನು ನೈಸರ್ಗಿಕವಾಗಿ ಇಟ್ಟುಕೊಳ್ಳಬೇಕು. ಮೊಡವೆಗಳಿಗೆ ಸ್ವಯಂ ಆರೈಕೆಯೇ ಮುಖ್ಯವಾದ ಚಿಕಿತ್ಸೆಯಾಗಿದ್ದು, ನಿಮ್ಮ ಮುಖದ ಚರ್ಮವನ್ನು ಸರಿಯಾಗಿ ನೋಡಿಕೊಂಡರೆ ಸಾಕು ಅದಕ್ಕೆ ಯಾವುದೇ ಔಷಧಿ ಅಗತ್ಯವಿರುವುದಿಲ್ಲ.
ಇವುಗಳೊಂದಿಗೆ ಆರೋಗ್ಯಕರ ಡಯಟ್ ತುಂಬಾ ಮುಖ್ಯ. ನಿಮ್ಮ ಆಹಾರ ಕ್ರಮವು ನಿಮ್ಮ ಮೊಡವೆ ಸ್ಥಿತಿಯೊಂದಿಗೆ ನೇರ ಸಂಪರ್ಕವನ್ನು ಹೊಂದಿರುವುದರಿಂದ ಆಹಾರದಲ್ಲಿನ ಕೊಬ್ಬಿನಾಂಶ ಮತ್ತು ಕಾರ್ಬೋ ಹೈಡ್ರೆಟ್ಗಳು ನಿಮ್ಮ ಮೇದೋಗ್ರಂಥಿಗಳ ಸ್ರಾವ ಉತ್ಪಾದನೆಯನ್ನು ಹೆಚ್ಚಿಸಬಹುದು. ಅದು ಮೊಡವೆಗೆ ಕಾರಣವಾಗಬಹುದು. ಆದ್ದರಿಂದ ಧಾನ್ಯಗಳು, ಸಿಹಿಕಾರಕಗಳು, ಹಾಲು ಮತ್ತು ಚೀಸ್ ಸೇರಿದಂತೆ ಡೈರಿ ಉತ್ಪನ್ನಗಳು, ಕರಿದ ಆಹಾರಗಳು ಮತ್ತು ಕೇಕ್ಗಳನ್ನು ಆದಷ್ಟು ಕಡಿಮೆ ಮಾಡಬೇಕು. ಹೀಗೆ ಮನೆಯಲ್ಲಿಯೇ ಚರ್ಮದ ಕಾಳಜಿ ವಹಿಸಿದರೆ ಮೊಡವೆಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…
ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…
ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್ಗೆ…
ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಕೇಂದ್ರ ಸರ್ಕಾರದ ವಿರುದ್ಧ…
ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್…
ನಟ ದರ್ಶನ್ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಬೆಂಗಳೂರಿನ…