ಕಾಡುವ ಮೊಡವೆಗಳಿಗೆ ಸುಲಭ ಪರಿಹಾರ

ಮೊಡವೆಗಳು ದೇಹದ ಹಾರ್ಮೋನುಗಳ ಏರಿಳಿತಗಳಿಗೆ ಸಂಬಂಧಿಸಿವೆ. ಇವು ಹಾರ್ಮೋನುಗಳ ಬದಲಾವಣೆಗಳಿಗೆ ಪ್ರತಿಕ್ರಿಯೆಯಾಗಿ ಕಾಣಿಸಿಕೊಳ್ಳುತ್ತದೆ. ವಿಶೇಷವಾಗಿ ಟೆಸ್ಟೋಸ್ಟೆರಾನ್‌ನಂತಹ ಆಂಡ್ರೋಜಿನ್‌ಗಳ ಹೆಚ್ಚಳದಿಂದಾಗಿ ಮೊಡವೆಗಳು ಉಂಟಾಗಿ ನೋವಿನಿಂದ ಕೂಡಿರುತ್ತದೆ.

ಈ ಮೊಡವೆಗಳನ್ನು ನಿಯಂತ್ರಿಸುವುದು ಹೇಗೆ ಅಂತೀರಾ? ಅದಕ್ಕಾಗಿ ನೀವು ಚರ್ಮದ ಆರೈಕೆಯನ್ನು ದಿನಚರಿಯನ್ನಾಗಿ ಅನುಸರಿಸಬೇಕಾಗುತ್ತದೆ. ಇದು ಮೊಡವೆಗಳನ್ನು ನಿಯಂತ್ರಿಸಲು ಉತ್ತಮ ಮಾರ್ಗವಾಗಿದೆ.

ನಿಮ್ಮ ಮುಖವನ್ನು ದಿನಕ್ಕೆ ಎರಡು ಬಾರಿ ಅಂದರೆ ಬೆಳಿಗ್ಗೆ ಮತ್ತು ಸಂಜೆ ತೊಳೆಯಬೇಕು. ಅತಿಯಾಗಿ ತೊಳೆಯುವುದೂ ಮೊಡವೆಗಳಿಗೆ ಒಳ್ಳೆಯದಲ್ಲ. ಮುಖವನ್ನು ಸ್ವಚ್ಛಗೊಳಿಸಲು ಸೌಮ್ಯವಾದ ಕ್ಲೆನ್ಸರ್‌ ಬಳಸಬೇಕು. ಅದೂ ಕೂಡ ಅತಿಯಾಗಬಾರದು. ಸ್ವಚ್ಛಗೊಳಿಸಲು ಬೆಚ್ಚಗಿನ ನೀರು ಉತ್ತಮ.

ಆದಷ್ಟೂ ಸೌಂದರ್ಯ ವರ್ಧಕಗಳನ್ನು ಕಡಿಮೆ ಮಾಡುವುದು ಉತ್ತಮ.

ಚರ್ಮವನ್ನು ನೈಸರ್ಗಿಕವಾಗಿ ಇಟ್ಟುಕೊಳ್ಳಬೇಕು. ಮೊಡವೆಗಳಿಗೆ ಸ್ವಯಂ ಆರೈಕೆಯೇ ಮುಖ್ಯವಾದ ಚಿಕಿತ್ಸೆಯಾಗಿದ್ದು, ನಿಮ್ಮ ಮುಖದ ಚರ್ಮವನ್ನು ಸರಿಯಾಗಿ ನೋಡಿಕೊಂಡರೆ ಸಾಕು ಅದಕ್ಕೆ ಯಾವುದೇ ಔಷಧಿ ಅಗತ್ಯವಿರುವುದಿಲ್ಲ.
ಇವುಗಳೊಂದಿಗೆ ಆರೋಗ್ಯಕರ ಡಯಟ್ ತುಂಬಾ ಮುಖ್ಯ. ನಿಮ್ಮ ಆಹಾರ ಕ್ರಮವು ನಿಮ್ಮ ಮೊಡವೆ ಸ್ಥಿತಿಯೊಂದಿಗೆ ನೇರ ಸಂಪರ್ಕವನ್ನು ಹೊಂದಿರುವುದರಿಂದ ಆಹಾರದಲ್ಲಿನ ಕೊಬ್ಬಿನಾಂಶ ಮತ್ತು ಕಾರ್ಬೋ ಹೈಡ್ರೆಟ್‌ಗಳು ನಿಮ್ಮ ಮೇದೋಗ್ರಂಥಿಗಳ ಸ್ರಾವ ಉತ್ಪಾದನೆಯನ್ನು ಹೆಚ್ಚಿಸಬಹುದು. ಅದು ಮೊಡವೆಗೆ ಕಾರಣವಾಗಬಹುದು. ಆದ್ದರಿಂದ ಧಾನ್ಯಗಳು, ಸಿಹಿಕಾರಕಗಳು, ಹಾಲು ಮತ್ತು ಚೀಸ್ ಸೇರಿದಂತೆ ಡೈರಿ ಉತ್ಪನ್ನಗಳು, ಕರಿದ ಆಹಾರಗಳು ಮತ್ತು ಕೇಕ್‌ಗಳನ್ನು ಆದಷ್ಟು ಕಡಿಮೆ ಮಾಡಬೇಕು. ಹೀಗೆ ಮನೆಯಲ್ಲಿಯೇ ಚರ್ಮದ ಕಾಳಜಿ ವಹಿಸಿದರೆ ಮೊಡವೆಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

2 mins ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

1 hour ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

4 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

4 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

4 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

4 hours ago