ಕಾಡುವ ಮೊಡವೆಗಳಿಗೆ ಸುಲಭ ಪರಿಹಾರ

ಮೊಡವೆಗಳು ದೇಹದ ಹಾರ್ಮೋನುಗಳ ಏರಿಳಿತಗಳಿಗೆ ಸಂಬಂಧಿಸಿವೆ. ಇವು ಹಾರ್ಮೋನುಗಳ ಬದಲಾವಣೆಗಳಿಗೆ ಪ್ರತಿಕ್ರಿಯೆಯಾಗಿ ಕಾಣಿಸಿಕೊಳ್ಳುತ್ತದೆ. ವಿಶೇಷವಾಗಿ ಟೆಸ್ಟೋಸ್ಟೆರಾನ್‌ನಂತಹ ಆಂಡ್ರೋಜಿನ್‌ಗಳ ಹೆಚ್ಚಳದಿಂದಾಗಿ ಮೊಡವೆಗಳು ಉಂಟಾಗಿ ನೋವಿನಿಂದ ಕೂಡಿರುತ್ತದೆ.

ಈ ಮೊಡವೆಗಳನ್ನು ನಿಯಂತ್ರಿಸುವುದು ಹೇಗೆ ಅಂತೀರಾ? ಅದಕ್ಕಾಗಿ ನೀವು ಚರ್ಮದ ಆರೈಕೆಯನ್ನು ದಿನಚರಿಯನ್ನಾಗಿ ಅನುಸರಿಸಬೇಕಾಗುತ್ತದೆ. ಇದು ಮೊಡವೆಗಳನ್ನು ನಿಯಂತ್ರಿಸಲು ಉತ್ತಮ ಮಾರ್ಗವಾಗಿದೆ.

ನಿಮ್ಮ ಮುಖವನ್ನು ದಿನಕ್ಕೆ ಎರಡು ಬಾರಿ ಅಂದರೆ ಬೆಳಿಗ್ಗೆ ಮತ್ತು ಸಂಜೆ ತೊಳೆಯಬೇಕು. ಅತಿಯಾಗಿ ತೊಳೆಯುವುದೂ ಮೊಡವೆಗಳಿಗೆ ಒಳ್ಳೆಯದಲ್ಲ. ಮುಖವನ್ನು ಸ್ವಚ್ಛಗೊಳಿಸಲು ಸೌಮ್ಯವಾದ ಕ್ಲೆನ್ಸರ್‌ ಬಳಸಬೇಕು. ಅದೂ ಕೂಡ ಅತಿಯಾಗಬಾರದು. ಸ್ವಚ್ಛಗೊಳಿಸಲು ಬೆಚ್ಚಗಿನ ನೀರು ಉತ್ತಮ.

ಆದಷ್ಟೂ ಸೌಂದರ್ಯ ವರ್ಧಕಗಳನ್ನು ಕಡಿಮೆ ಮಾಡುವುದು ಉತ್ತಮ.

ಚರ್ಮವನ್ನು ನೈಸರ್ಗಿಕವಾಗಿ ಇಟ್ಟುಕೊಳ್ಳಬೇಕು. ಮೊಡವೆಗಳಿಗೆ ಸ್ವಯಂ ಆರೈಕೆಯೇ ಮುಖ್ಯವಾದ ಚಿಕಿತ್ಸೆಯಾಗಿದ್ದು, ನಿಮ್ಮ ಮುಖದ ಚರ್ಮವನ್ನು ಸರಿಯಾಗಿ ನೋಡಿಕೊಂಡರೆ ಸಾಕು ಅದಕ್ಕೆ ಯಾವುದೇ ಔಷಧಿ ಅಗತ್ಯವಿರುವುದಿಲ್ಲ.
ಇವುಗಳೊಂದಿಗೆ ಆರೋಗ್ಯಕರ ಡಯಟ್ ತುಂಬಾ ಮುಖ್ಯ. ನಿಮ್ಮ ಆಹಾರ ಕ್ರಮವು ನಿಮ್ಮ ಮೊಡವೆ ಸ್ಥಿತಿಯೊಂದಿಗೆ ನೇರ ಸಂಪರ್ಕವನ್ನು ಹೊಂದಿರುವುದರಿಂದ ಆಹಾರದಲ್ಲಿನ ಕೊಬ್ಬಿನಾಂಶ ಮತ್ತು ಕಾರ್ಬೋ ಹೈಡ್ರೆಟ್‌ಗಳು ನಿಮ್ಮ ಮೇದೋಗ್ರಂಥಿಗಳ ಸ್ರಾವ ಉತ್ಪಾದನೆಯನ್ನು ಹೆಚ್ಚಿಸಬಹುದು. ಅದು ಮೊಡವೆಗೆ ಕಾರಣವಾಗಬಹುದು. ಆದ್ದರಿಂದ ಧಾನ್ಯಗಳು, ಸಿಹಿಕಾರಕಗಳು, ಹಾಲು ಮತ್ತು ಚೀಸ್ ಸೇರಿದಂತೆ ಡೈರಿ ಉತ್ಪನ್ನಗಳು, ಕರಿದ ಆಹಾರಗಳು ಮತ್ತು ಕೇಕ್‌ಗಳನ್ನು ಆದಷ್ಟು ಕಡಿಮೆ ಮಾಡಬೇಕು. ಹೀಗೆ ಮನೆಯಲ್ಲಿಯೇ ಚರ್ಮದ ಕಾಳಜಿ ವಹಿಸಿದರೆ ಮೊಡವೆಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

ಆಂದೋಲನ ಡೆಸ್ಕ್

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

9 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

9 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

9 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

11 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

13 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

14 hours ago