ಮಹಿಳೆ ಸಬಲೆ

ಉಂಡು ಮಲಗಿದರೂ ನಿಲ್ಲದ ಮುನಿಸು

‘ಗಂಡ-ಹೆಂಡಿರ ಜಗಳ ಉಂಡು ಮಲಗುವ ತನಕ’ ಎಂಬ ನಾಣ್ಣುಡಿಯೇ ಇದೆ. ಆದರೆ, ಬದಲಾದ ಜೀವನಶೈಲಿಯಿಂದಾಗಿ ಗಂಡ-ಹೆಂಡತಿ ಇಬ್ಬರೂ ಹೊರಗೆ ದುಡಿಯಲು ಹೋಗಿ ಸಂಪಾದನೆ ಮಾಡುವುದರಿಂದಾಗಿ ಸಣ್ಣ ಪುಟ್ಟ ವಿಷಯಗಳಿಗೂ ನಿನಗಿಂತ ನಾನೇನು ಕಮ್ಮಿ ಎಂಬ ಇಗೋ(ಉಜಟ) ಬೆಳೆಸಿಕೊಂಡ ಪರಿಣಾಮ ಹಾಲು-ಜೇನಿನಂತಹ ಸಂಬಂಧ ಹಾಳಾಗಿ, ಕೋರ್ಟ್-ಕಚೇರಿ ಅಲೆದು ಕಡೆಗೊಂದು ದಿನ ಗಂಡ-ಹೆಂಡತಿ ಬೇರೆ ಬೇರೆಯೂ ಆಗಿ ಮಕ್ಕಳು ಪರಿತಪಿಸುವ ಸ್ಥಿತಿಗೆ ದೂಡುತ್ತಿರುವ ಸಂಗತಿಗಳು ಸಮಾಜದಲ್ಲಿ ಹೆಚ್ಚುತ್ತಿವೆ. ಹೀಗಾಗದಿರಲು ದಂಪತಿಯ ನಡುವೆ ಪರಸ್ಪರ ಪ್ರೀತಿ, ವಿಶ್ವಾಸ, ನಂಬಿಕೆ, ಗೌರವ ಇರುವಂತೆ ಪ್ರತಿಯೊಬ್ಬರ ಜೀವನದಲ್ಲೂ ಒಂದಿಷ್ಟು ಜಗಳಗಳು ಇದ್ದೇ ಇರುತ್ತವೆ. ಇವೆಲ್ಲವೂ ಸಾಮಾನ್ಯ ಅಭ್ಯಾಸಗಳು. ಆದರೆ ಕೆಲವು ತಪ್ಪು ಅಭ್ಯಾಸಗಳು ನಿಧಾನವಾಗಿ ಸಂಬಂಧವನ್ನು ದುರ್ಬಲಗೊಳಿಸಬಹುದು.

ಪ್ರೀತಿ-ಪ್ರೇಮದ ಸಂಬಂಧವಾಗಿರಬಹುದು, ಅಥವಾ ದಾಂಪತ್ಯ ಜೀವನವಾಗಿರಬಹುದು, ಇವುಗಳು ನಿಂತಿರುವುದೇ ಪರಸ್ಪರ ಪ್ರೀತಿ, ವಿಶ್ವಾಸ, ನಂಬಿಕೆಗಳ ಮೇಲೆ. ಹೀಗೆ ಸಂಬಂಧಗಳಲ್ಲಿ ನಂಬಿಕೆ ಮತ್ತು ಗೌರವ ಎನ್ನುವುದು ತುಂಬಾ ಮುಖ್ಯ. ಆದರೆ ಕೆಲವೊಮ್ಮೆ ತಿಳಿದೋ- ತಿಳಿಯದೆಯೋ ಕೆಲವೊಂದು ತಪ್ಪುಗಳು ಘಟಿಸಿಬಿಡುತ್ತವೆ. ಆಗ ಹೆಣ್ಣಾಗಲಿ- ಗಂಡಾಗಲಿ ಹೋಗಲಿ ಬಿಡು, ನಡೆಯುವ ಕಾಲು ಎಡವದೆ ಕುಳಿತಾಗ ಎಡವುತ್ತದೆಯೇ ಎಂದು ತಮಗೆ ತಾವೇ ಸಮಾಧಾನ ಹೇಳಿಕೊಂಡಾಗ ಇಲ್ಲವೇ ತಪ್ಪು ಮಾಡಿದವರಿಗೆ ಸಮಾಧಾನದಿಂದ ಬುದ್ಧಿ ಹೇಳಿದಾಗ ಜಗಳ ವಿಪರೀತಕ್ಕೆ ಹೋಗಿ ಸಂಬಂಧ ಹಾಳಾಗುವುದು ತಪ್ಪುತ್ತದೆ.

ಈ ರೀತಿ ಗಂಡ-ಹೆಂಡಿರ ನಡುವೆ ಪರಸ್ಪರ ಹೊಂದಾಣಿಕೆ ಮನೋಭಾವನೆ ಇಲ್ಲವಾದಲ್ಲಿ ಹಾಲು-ಜೇನಿನಂತಹ ಸಂಬಂಧವನ್ನು ಹಾಳು ಮಾಡಲು ಸಣ್ಣಪುಟ್ಟ ವಿಷಯಗಳೇ ಸಾಕು.

ಸಂಗಾತಿಯನ್ನು ಲಘುವಾಗಿ ಕಾಣಬೇಡಿ:  ಸಂಬಂಧದಲ್ಲಿ ಗಂಡ ಅಥವಾ ಹೆಂಡತಿ ಪ್ರೀತಿ ಮತ್ತು ಅನ್ಯೋನ್ಯತೆಯನ್ನು ಕಾಪಾಡಿಕೊಳ್ಳಲು ಪರಸ್ಪರ ಪ್ರಶಂಸೆ ವ್ಯಕ್ತಪಡಿಸುವುದು ಮುಖ್ಯ. ನೀವು ನಿಮ್ಮ ಸಂಗಾತಿಯ ಪ್ರಯತ್ನಗಳನ್ನು ನಿರ್ಲಕ್ಷಿಸಲು ಪ್ರಾರಂಭಿಸಿದಾಗ ಅಥವಾ ಯಾವಾಗಲೂ ಅವರನ್ನು ಲಘುವಾಗಿ ಕಾಣತೊಡಗಿದಾಗ ಖಂಡಿತವಾಗಿಯೂ ಸಂಬಂಧದಲ್ಲಿ ಕಂದಕವನ್ನು ಸೃಷ್ಟಿಸುತ್ತದೆ.

ಇದನ್ನು ಓದಿ: ಹೋಲಿಕೆ ಎಂಬುದು ನಿಂದನೆ ಆಗದಿರಲಿ 

ಸಮಯದ ಅಭಾವ: ಗಂಡ-ಹೆಂಡತಿ ಇಬ್ಬರೂ ದುಡಿಯಲು ಹೊರಗೆ ಹೋಗುತ್ತಾರಾದರೂ ತನ್ನ ಕುಟುಂಬಕ್ಕಾಗಿ ದಿನದಲ್ಲಿ ಒಂದೆರಡು ಗಂಟೆ, ವಾರದಲ್ಲಿ ಒಂದು ದಿನ ಸಮಯಾವಕಾಶ ನೀಡಲಾರದಷ್ಟು ಒತ್ತಡಕ್ಕೆ ಸಿಲುಕಿದಾಗ ಕುಟುಂಬದಲ್ಲಿ ಪರಸ್ಪರ ಅಂತರಗಳು ಹೆಚ್ಚಾಗುತ್ತಾ ಹೋಗುತ್ತವೆ. ಇದಕ್ಕಾಗಿ ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುವುದರಿಂದ ಸಂಬಂಧ ಹಳಸದೆ ಇನ್ನಷ್ಟು ಬಲಗೊಳ್ಳುತ್ತದೆ.

ಸಣ್ಣಪುಟ್ಟ ವಿಷಯಗಳಿಗೆ ಪದೇ ಪದೆ ಅನಗತ್ಯವಾಗಿ ಕಾಲುಕೆರೆದು ಜಗಳ ಆಡುವುದರಿಂದ ಸಂಬಂಧ ಖಂಡಿತಾ ಹಳಸುತ್ತದೆ. ಗಂಡ-ಹೆಂಡತಿ ಪರಸ್ಪರ ಒಬ್ಬರನ್ನೊಬ್ಬರು ಗೌರವಿಸದಿದ್ದರೆ, ಆ ಸಂಬಂಧ ಎಂದಿಗೂ ಬಲವಾಗಿರಲು ಸಾಧ್ಯವಿಲ್ಲ. ನೀವು ಅವರ ಆಲೋಚನೆಗಳನ್ನು ಗೌರವಿಸದಿರುವ ಅಥವಾ ಇತರರ ಮುಂದೆ ಅವರನ್ನು ಕೀಳಾಗಿ ನೋಡುವ ಅಭ್ಯಾಸಗಳು ಸಂಗಾತಿಯ ಆತ್ಮವಿಶ್ವಾಸವನ್ನು ಘಾಸಿಗೊಳಿಸುತ್ತವೆ.

ಸಂಬಂಧದಲ್ಲಿ ಪ್ರೀತಿ, ವಿಶ್ವಾಸದ ಜತೆಗೆ ನಂಬಿಕೆಯೂ ಅತ್ಯಂತ ಮುಖ್ಯ. ಹೀಗಿರುವಾಗ ನೀವು ನಿಮ್ಮ ಸಂಗಾತಿಯನ್ನು ಅನುಮಾನಿಸಲು ಪ್ರಾರಂಭಿಸಿದರೆ, ಇಲ್ಲವೇ ನಿಮ್ಮ ಇಚ್ಛೆಗಳನ್ನು ಸಂಗಾತಿಯ ಮೇಲೆ ಹೇರಲು ಪ್ರಾರಂಭಿಸಿ ಅವರನ್ನು ನಿಯಂತ್ರಿಸಲು ಬಯಸಿದರೆ ಇದರಿಂದ ಸಂಬಂಧ ಹಾಳಾಗುವ ಸಾಧ್ಯತೆ ಹೆಚ್ಚಿರುತ್ತದೆ. ಸಂಗಾತಿಯನ್ನು ಸದಾ ಟೀಕಿಸುವುದು, ಅವರ ಒಳ್ಳೆಯ ಗುಣಗಳನ್ನು ನಿರ್ಲಕ್ಷಿಸುವುದು, ಹೊರಗಿನವರ ಮುಂದೆ ಕಾಲೆಳೆಯುವ ಪ್ರವೃತ್ತಿ ಹೆಚ್ಚಾದಾಗ ಸಂಬಂಧದ ಮಾಧುರ್ಯ ಕೊನೆಗಾಣಬಹುದು ಎಚ್ಚರ.

ಮಾತುಕತೆಯ ಕೊರತೆ, ಮನೆಯಿಂದ ಹೊರಗಿದ್ದಾಗ ಕಚೇರಿ ಕೆಲಸದ ಒತ್ತಡ, ಮನೆಗೆ ಬಂದಾಗ ಮೊಬೈಲ್ ಇಲ್ಲವೇ ಟಿವಿಯಲ್ಲಿ ಮುಳುಗಿ ಹೋಗಿ ಗಂಡ-ಹೆಂಡತಿ ನಡುವೆ ಕಷ್ಟ ಸುಖಗಳನ್ನು ಹಂಚಿಕೊಳ್ಳುವ ಮಾತುಕತೆಗೆ ಕಡಿವಾಣ ಬಿದ್ದಾಗ, ನೀವು ನಿಮ್ಮ ಭಾವನೆಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳದಿದ್ದರೆ ಅಥವಾ ನಿಮ್ಮ ಸಂಗಾತಿ ತನ್ನ ಭಾವನೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳದಿದ್ದಾಗ ಇಬ್ಬರ ನಡುವಿನ ಅಂತರ ಹೆಚ್ಚುತ್ತಾ ಹೋಗುತ್ತದೆ.

ಜೊತೆಗೆ ಸಂಬಂಧದಲ್ಲಿ ಅಪನಂಬಿಕೆಗೂ ಇದು ಕಾರಣವಾಗಬಹುದು. ಅಲ್ಲದೇ ಹೊರಗಿನವರ ಮೇಲೆ ಆಕರ್ಷಣೆ ಹೆಚ್ಚಾಗಬಹುದು.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

34 mins ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

51 mins ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

1 hour ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

1 hour ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

1 hour ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

2 hours ago