ಮಹಿಳೆ ಸಬಲೆ

ಗರ್ಭಕಂಠ ಕ್ಯಾನ್ಸರ್’ಗೆ ಉಚಿತ ಲಸಿಕೆ

ಬಿ.ಟಿ.ಮೋಹನ್ ಕುಮಾರ್

ಮಹಿಳೆಯರನ್ನು ಕಾಡುತ್ತಿರುವ ಅಪಾಯಕಾರಿ ‘ಗರ್ಭಕಂಠ ಕ್ಯಾನ್ಸರ್’ ಮಾರಕ ರೋಗಕ್ಕೆ ಮಂಡ್ಯದ ಡಾ. ಜ್ಯೋತಿ ಅವರು ಉಚಿತವಾಗಿ ಲಸಿಕೆ ನೀಡುವ ಮೂಲಕ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸುತ್ತಿದ್ದಾರೆ.

ಕ್ಯಾನ್ಸರ್ ರೋಗದಲ್ಲಿ ಬೇರೆ ಬೇರೆ ವಿಧಗಳಿವೆ. ಇದರಲ್ಲಿ ಗರ್ಭಕಂಠ ಕ್ಯಾನ್ಸರ್ ಮಹಿಳೆ ಯರನ್ನು ಬಹುವಾಗಿ ಕಾಡುತ್ತಿದೆ. ಭಾರತ ದಂತಹ ದೇಶದಲ್ಲಿ ಪ್ರತಿ ನಿಮಿಷಕ್ಕೆ ಒಬ್ಬ ಮಹಿಳೆ ಈ ರೋಗಕ್ಕೆ ಬಲಿಯಾಗುತ್ತಿರುವುದು ದುರಂತ. ಇಂತಹ ರೋಗಕ್ಕೆ ಸದ್ದಿಲ್ಲದೆ, ಬಡ ಮಕ್ಕಳಿಗೆ ಡಾ. ಜ್ಯೋತಿ ಉಚಿತವಾಗಿ ಲಸಿಕೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಗರ್ಭಕಂಠ ಕ್ಯಾನ್ಸರ್‌ಗೆ ಎಚ್‌ಪಿವಿ ವೈರಸ್ ಸೋಂಕು ಕಾರಣ. ಈ ಸೋಂಕಿಗೆ ಪರಿಹಾರವಾಗಿ ಎಚ್‌ಪಿವಿ ಎಂಬ ಲಸಿಕೆ ಉತ್ತಮವಾಗಿ ಕೆಲಸ ಮಾಡುತ್ತದೆ. ಇದನ್ನು ಕೆಲ ಕಂಪೆನಿಗಳು ಉತ್ಪಾದನೆ ಮಾಡುತ್ತವೆಯಾದರೂ ಒಂದು ಲಸಿಕೆಗೆ ೧೬೦೦ ರಿಂದ ೨೫೦೦ರೂ.ಗಳಿಗೂ ಹೆಚ್ಚು ಹಣ ತೆರಬೇಕಾಗುತ್ತದೆ. ಕೋವಿಡ್‌ಗೂ ಮುನ್ನ ಈ ಲಸಿಕೆಗೆ ಸುಮಾರು ೩,೦೦೦ ರೂ. ಗೂ ಹೆಚ್ಚು ಹಣ ನೀಡಬೇಕಿತ್ತು. ಕೋವಿಡ್ ನಂತರದ ದಿನಗಳಲ್ಲಿ ದರವನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಿರುವುದು ಸಮಾ ಧಾನ ತರಿಸಿದೆಯಾದರೂ, ಬಡವರು, ಮಧ್ಯಮ ವರ್ಗದವರಿಗೂ ಇಷ್ಟು ಪ್ರಮಾಣದ ಹಣ ಕೊಡುವುದು ದುಸ್ತರವಾಗಿದೆ.

ಇದನ್ನು ಮನಗಂಡ ಮಂಡ್ಯದ ಅಶೋಕ ನಗರದಲ್ಲಿರುವ ಸುರಭಿ ಆಸ್ಪತ್ರೆಯ ವೈದ್ಯೆ ಡಾ. ಜ್ಯೋತಿ ಅವರು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ೯ ರಿಂದ ೧೫ ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಉಚಿತವಾಗಿ ಎರಡು ಲಸಿಕೆ ಗಳನ್ನು ನೀಡುತ್ತಿದ್ದಾರೆ. ಸುಮಾರು ೧೬೦೦ ರೂ. ವೆಚ್ಚವಾಗುವ ಲಸಿಕೆಯನ್ನು ಪ್ರತಿ ತಿಂಗಳ ಮೊದಲ ಗುರುವಾರ ೫೦ ಮಂದಿ ಮಕ್ಕಳಿಗೆ ಉಚಿತವಾಗಿ ಲಸಿಕೆ ನೀಡುತ್ತಿದ್ದಾರೆ. ಈ ಲಸಿಕೆಯ ಎರಡು ಡೋಸ್ ಅನ್ನು ಉಚಿತವಾಗಿ ನೀಡುವ ಮೂಲಕ ಮಕ್ಕಳ ಪಾಲಿಗೆ ವರವಾಗಿದ್ದಾರೆ.

ಲಸಿಕೆ ಪಡೆಯಲು ಬರುವ ಸರ್ಕಾರಿ ಶಾಲೆಯ ಮಕ್ಕಳು ಮುಖ್ಯೋಪಾಧ್ಯಾಯರ ಸಹಿ ಇರುವ ಗುರುತಿನ ಚೀಟಿಯನ್ನು ತರುವುದು ಕಡ್ಡಾಯ. ಪ್ರತಿ ತಿಂಗಳು ೫೦ ಮಕ್ಕಳಿಗೆ ಮಾತ್ರ ಉಚಿತ ಲಸಿಕೆ ನೀಡಲಾಗುತ್ತದೆ. ಹೆಚ್ಚುವರಿ ಬಂದಲ್ಲಿ ಮುಂದಿನ ತಿಂಗಳಿಗೆ ನೋಂದಣಿ ಮಾಡಿಕೊಳ್ಳಲಾಗುತ್ತದೆ.

ಗರ್ಭಕಂಠ ಕ್ಯಾನ್ಸರ್ ರೋಗಕ್ಕೆ ಸರ್ಕಾರವೇ ಲಸಿಕೆ ಕೊಡಲು ಕಳೆದ ವರ್ಷದ ಬಜೆಟ್‌ನಲ್ಲೇ ಘೋಷಿಸಿತ್ತಾದರೂ ಈವರೆಗೂ ಆ ಯೋಜನೆ ಅನುಷ್ಠಾನವಾಗಿಲ್ಲ. ಇದರಿಂದಾಗಿ ಉಳ್ಳವರು ಹೆಚ್ಚಿನ ಹಣ ಕೊಟ್ಟು ಲಸಿಕೆಯನ್ನು ಪಡೆಯುತ್ತಾರೆ. ಬಡವರು, ಮಧ್ಯಮ ವರ್ಗದವರು ಲಸಿಕೆ ಪಡೆಯದೆ ಎಲ್ಲವನ್ನೂ ಸಹಿಸಿಕೊಂಡೇ ಬದುಕು ನಡೆಸುತ್ತಾರೆ. ಸರ್ಕಾರ ಇನ್ನಾದರೂ ಇಂತಹ ಆರೋಗ್ಯ ಸಂಬಂಧಿ ಯೋಜನೆಗಳನ್ನು ಶೀಘ್ರ ಅನುಷ್ಠಾನಗೊಳಿಸುವುದು ಅಗತ್ಯ.

” ಕಳೆದ ಒಂದು ವರ್ಷದಿಂದಲೂ ಸರ್ಕಾರಿ ಶಾಲೆಯ ಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್‌ಗೆ ಸಂಬಂಽಸಿದ ಎಚ್‌ಪಿವಿ ಲಸಿಕೆಯನ್ನು ಕೊಡುತ್ತಿದ್ದೇನೆ. ಇದರೊಂದಿಗೆ ಸಮಾಜಕ್ಕೆ ಕಿಂಚಿತ್ತಾದರೂ ಸೇವೆ ಮಾಡುವುದು ಉzಶವಾಗಿದೆ. ಸಂಘ-ಸಂಸ್ಥೆಗಳು ಕೈ ಜೋಡಿಸಿದರೆ ಮತ್ತಷ್ಟು ಹೆಚ್ಚಿನ ಮಕ್ಕಳಿಗೆ ಲಸಿಕೆ ಕೊಡಬಹುದು.”

– ಡಾ. ಜ್ಯೋತಿ, ಸ್ತ್ರೀರೋಗ ತಜ್ಞೆ, ಸುರಭಿ ಆಸ್ಪತ್ರೆ, ಮಂಡ್ಯ

ಆಂದೋಲನ ಡೆಸ್ಕ್

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

9 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

10 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

10 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

10 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

11 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

11 hours ago