ಮಹಿಳೆ ಸಬಲೆ

ಬಾಳೆದಿಂಡಿನ ಆರೋಗ್ಯದ ಖಾದ್ಯಗಳು

* ರಮ್ಯ ಅರವಿಂದ್

ಸಾಮಾನ್ಯವಾಗಿ ಹಿರಿಯರು ರಾತ್ರಿ ಊಟವಾದ ನಂತರ ಒಂದು ಬಾಳೆಹಣ್ಣನ್ನು ಸೇವಿಸಬೇಕು ಎಂದು ಹೇಳುತ್ತಾರೆ. ಇದಕ್ಕೆ ಒಂದು ಪ್ರಮುಖವಾದ ಕಾರಣವೂ ಇದೆ. ನಾವು ಸೇವಿಸಿದ ಆಹಾರ ಚೆನ್ನಾಗಿ ಜೀರ್ಣವಾಗಬೇಕು ಮತ್ತು ಅದರಲ್ಲಿನ ಅನೇಕ ಸತ್ವಗಳು ದೇಹಕ್ಕೆ ಸೇರಬೇಕು. ಹಾಗಾಗಿ ಬಾಳೆಹಣ್ಣನ್ನು ಸೇವಿಸಲು ಹೇಳುತ್ತಾರೆ.

ಹೌದು ಬಾಳೆ ಗಿಡದ ಪ್ರತಿಯೊಂದು ಭಾಗವೂ ಆರೋಗ್ಯಕ್ಕೆ ಹೆಚ್ಚು ಸಹಕಾರಿಯಾಗಿದೆ. ಅದರಲ್ಲಿಯೂ ಬಾಳೆದಿಂಡು ಹೆಚ್ಚು ಪರಿಣಾಮಕಾರಿ. ಇದರಲ್ಲಿ ಫೈಬರ್ ಅಂಶ ಹೇರಳವಾಗಿರುವುದರಿಂದ ಜೀರ್ಣಶಕ್ತಿ ವೃದ್ಧಿಸಲು, ದೇಹದ ತೂಕ ಕಡಿಮೆಯಾ ಗಲು ಕಿಡ್ನಿಯಲ್ಲಿನ ಕಲ್ಲು, ಸಕ್ಕರೆ ಕಾಯಿಲೆ, ರಕ್ತದೊತ್ತಡದ ಸಮಸ್ಯೆಗಳಿಗೆ ಹಾಗೂ ದೇಹದ ಕಬ್ಬಿಣದ ಅಂಶ ಹೆಚ್ಚಿಸಲು ಸಹಾಯ ಮಾಡುತ್ತದೆ. ಬಹಳ ಮುಖ್ಯವಾಗಿ ಕಿಡ್ನಿಯಲ್ಲಿನ ಕಲ್ಲನ್ನು ಕರಗಿಸುವ ಶಕ್ತಿ ಬಾಳೆದಿಂಡಿಗಿದೆ ಎನ್ನುವ ಮಾತನ್ನು ಬಹಳ ಹಿಂದಿನಿಂದಲೂ ಕೇಳುತ್ತಿದ್ದೇವೆ. ಬಾಳೆದಿಂಡಿನಿಂದ ತಯಾರಿಸಿದ ಆಹಾರಗಳನ್ನು ಸೇವಿಸಿದರೆ ಕಿಡ್ನಿಯಲ್ಲಿನ ಕಲ್ಲಿನ ಸಮಸ್ಯೆಯಿಂದ ನಿವಾರಣೆ ಪಡೆಯಬಹುದು. ಬಾಳೆದಿಂಡಿನಿಂದ ಅನೇಕ ರುಚಿಕರವಾದ ಖಾದ್ಯಗಳನ್ನೂ ತಯಾರಿಸಬಹುದು.

ಅದು ಹೇಗೆ ಎಂಬುದನ್ನು ನೋಡೋಣ. ಬಾಳೆ ದಿಂಡನ್ನು ಕತ್ತರಿಸಿಕೊಳ್ಳುವಾಗ ದುಂಡನೆಯ ಆಕಾರದಲ್ಲಿ ಸಣ್ಣ ಸಣ್ಣ ಬಿಲ್ಲೆಗಳಾಗಿ ಕತ್ತರಿಸಿ ನಿಧಾನವಾಗಿ ನಾರನ್ನು ಬೆರಳಿನಿಂದ ಬೇರ್ಪಡಿಸಬೇಕು. ನಂತರ ಸಣ್ಣ ಸಣ್ಣದಾಗಿ ಕತ್ತರಿಸಿಕೊಳ್ಳಬೇಕು. ಕತ್ತರಿಸಿದ ಬಾಳೆದೆಂಡು ಬೇಗನೆ ಕಪ್ಪು ಬಣ್ಣಕ್ಕೆ ತಿರುಗುವುದರಿಂದ ಅದನ್ನು ಒಂದು ಪಾತ್ರೆಗೆ ಮಜ್ಜಿಗೆಯ ನೀರಿನಲ್ಲಿ ಅಥವಾ ನಿಂಬೆರಸದ ನೀರಿನಲ್ಲಿ ಹಾಕಿದರೆ ಬಿಳಿಯಾಗಿಯೇ ಇರುತ್ತದೆ.

ಬಾಳೆದಿಂಡಿನ ಪಲ್ಯ

ಅರ್ಧ ಬಾಳೆದಿಂಡನ್ನು ಸಣ್ಣಗೆ ಕತ್ತರಿಸಿಕೊಂಡು, ನೆನೆಸಿದ ಹೆಸರು ಕಾಳು ಅಥವಾ ಕಡಲೆ ಕಾಳುಗಳ ಜತೆಗೆ ಕಾಯಿತುರಿ, ಸೂಜಿ ಮೆಣಸು ಅಥವಾ ಗಾಂಧಾರಿ ಮೆಣಸು, ಶುಂಠಿಯನ್ನು ರುಬ್ಬಿಕೊಂಡು ಬಳಿಕ ಒಂದು ಪಾತ್ರೆಯಲ್ಲಿ ಎರಡರಿಂದ ಮೂರು ಚಮಚ ಕಡಲೆ ಕಾಯಿ ಎಣ್ಣೆಯನ್ನು ಹಾಕಿ ಬಿಸಿ ಮಾಡಿಕೊಳ್ಳಬೇಕು. ನಂತರ ಅದಕ್ಕೆ ಅರ್ಧ ಚಮಚದಷ್ಟು ಸಾಸಿವೆ ಹಾಕಿ ಒಂದೆರಡು ಒಣಮೆಣಸಿನಕಾಯಿ, ಇಂಗು ಸೇರಿಸಿ ಒಗ್ಗರಣೆ ಮಾಡಿಕೊಂಡು ತಣ್ಣಗೆ ಹಚ್ಚಿದ ಬಾಳೆದಿಂಡು ಹಾಗೂ ನೆನೆಸಿದ ಹಸಿರು ಕಾಳು ಹಾಕುವುದು. ಇದಕ್ಕೆ ಎರಡು ಲೋಟ ನೀರನ್ನು ಸೇರಿಸಿ ೧೦ ರಿಂದ ೧೫ ನಿಮಿಷಗಳ ಕಾಲ ಚೆನ್ನಾಗಿ ಬೇಯಿಸಿದ ನಂತರ ರುಚಿಗೆ ತಕ್ಕಷ್ಟು ಉಪ್ಪು ಹಾಗೂ ರುಬ್ಬಿದ ಮಸಾಲೆ ಹಾಗೂ ಸ್ವಲ್ಪ ಕೊತ್ತಂಬರಿ ಸೊಪ್ಪು ಸೇರಿಸಿ ಹಾಕಿ ಒಂದೆರಡು ನಿಮಿಷ ಬೇಯಿಸುವುದು. ಹೀಗೆ ತಯಾರಿಸಿಕೊಂಡ ಪಲ್ಯವನ್ನು ಆಗಾಗ್ಗೆ ಸೇವಿಸುವುದರಿಂದ ದೇಹದಲ್ಲಿ ಕೊಬ್ಬನ್ನು ಕರಗಿಸಲು ಹೆಚ್ಚು ಸಹಕಾರಿಯಾಗುತ್ತದೆ.

ಬಾಳೆ ದಿಂಡಿನ ಚಟ್ನಿ

ಹಚ್ಚಿದ ಬಾಳೆದೆಂಡಿಗೆ ಕಾಯಿತುರಿ, ಒಣಮೆಣಸಿನ ಕಾಯಿ, ಶುಂಠಿ, ಉದ್ದಿನಬೇಳೆ, ಹುಣಸೆ ಹಣ್ಣನ್ನು ಸೇರಿಸಿಕೊಳ್ಳಬೇಕು. ಬಳಿಕ ಒಂದು ಪಾತ್ರೆಯಲ್ಲಿ ಉದ್ದಿನ ಬೇಳೆ ಹಾಗೂ ಒಣಮೆಣಸಿನಕಾಯಿ ಹಾಕಿ ಎರಡು ನಿಮಿಷ ಹುರಿದುಕೊಂಡು ನಂತರ ಬಾಳೆದಿಂಡು, ಕಾಯಿತುರಿ, ಶುಂಠಿ ಹಾಗೂ ಉರಿದ ಪದಾರ್ಥವನ್ನು ಸೇರಿಸಿ ಸ್ವಲ್ಪ ನೀರನ್ನು ಹಾಕಿ ರುಬ್ಬಿಕೊಳ್ಳುವುದು. ನಂತರ ಒಂದು ಪಾತ್ರೆಯಲ್ಲಿ ಎರಡು ಚಮಚ ಕಡಲೆಕಾಯಿ ಎಣ್ಣೆಯನ್ನು ಬಿಸಿ ಮಾಡಿ ಅದಕ್ಕೆ ಸಾಸಿವೆ ಜೀರಿಗೆ ಹಾಗೂ ಇಂಗನ್ನು ಒಗ್ಗರಣೆ ಮಾಡಿ ಹಾಕುವುದು. ಹೀಗೆ ತಯಾರಿಸಿದ ಬಾಳೆದಿಂಡಿನ ಚಟ್ನಿಯು ದೋಸೆ, ಚಪಾತಿ, ಅನ್ನದ ಜೊತೆಯಲ್ಲಿ ಸವಿಯಲು ರುಚಿಕರವಾಗಿರುತ್ತದೆ.

ಬಾಳೆ ದಿಂಡಿನ ಚಾಟ್ಸ್

ಸಣ್ಣಗೆ ಹಚ್ಚಿದ ಬಾಳೆದಿಂಡಿಗೆ ಒಂದು ಕಪ್ ಕ್ಯಾರೆಟ್ ತುರಿ, ಒಂದು ಕಪ್ ಈರುಳ್ಳಿ, ಒಂದು ಕಪ್ ಟೊಮೆಟೊ, ಸ್ವಲ್ಪ ಕೊತ್ತಂಬರಿ ಸೊಪ್ಪು, ಅಚ್ಚ ಮೆಣಸಿನ ಕಾಯಿ ಪುಡಿ, ಚಾಟ್ ಮಸಾಲಾ, ಉರಿದ ಶೇಂಗಾ, ಖಾರಸೇವ್, ನಿಂಬೆರಸವನ್ನು ಒಂದು ಪಾತ್ರೆಗೆ ಹಾಕಿಕೊಂಡು ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿಕೊಂಡರೆ ರುಚಿಕರ ಚಾಟ್ಸ್ ಸವಿಯಲು ಸಿದ್ಧವಾಗುತ್ತದೆ. ಬಾಳೆದಿಂಡಿನಿಂದ ತಯಾರಿಸಿದ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಕಿಡ್ನಿ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು.

 

andolana

Recent Posts

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

24 mins ago

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

48 mins ago

ಶಾರುಖ್‌ ಖಾನ್‌ ಪುತ್ರನಿಂದ ದುರ್ವತನೆ ಪ್ರಕರಣ: ಡಿಜಿ & ಡಿಜಿಪಿಗೆ ದೂರು ಸಲ್ಲಿಕೆ

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬೆಂಗಳೂರಿನ ಪಬ್‌ನಲ್ಲಿ ಮಿಡಲ್‌ ಫಿಂಗಲ್‌ ತೋರಿಸಿ ದುರ್ವತನೆ ಮೆರೆದಿದ್ದು,…

1 hour ago

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

2 hours ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

2 hours ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

3 hours ago