ಮಹಿಳೆ ಸಬಲೆ

ಚಳಿಗಾಲದಲ್ಲಿ ಕಾಯುವ ಗಿಡಮೂಲಿಕೆಗಳು

ಡಾ.ಚೈತ್ರ ಸುಖೇಶ್

ಚಳಿಗಾಲದಲ್ಲಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಕೆಲವೊಂದು ಆಯುರ್ವೇದ ಗಿಡಮೂಲಿಕೆಗಳನ್ನು ನಮ್ಮ ಆಹಾರದಲ್ಲಿ ಸೇರಿಸಿಕೊಂಡು ಸೇವಿಸುವುದು ಅತ್ಯವಶ್ಯ. ಇದು ನಮ್ಮ ದೇಹದ ಯೋಗಕ್ಷೇಮ ವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ.

ತುಳಸಿ: ತುಳಸಿಯನ್ನು ದಿನನಿತ್ಯದ ಆಹಾರದಲ್ಲಿ ಉಪಯೋಗಿಸುವುದು ಉತ್ತಮ. ಇದು ಆರೋಗ್ಯಕ್ಕೆ ಹೆಚ್ಚು ಫಲಕಾರಿಯಾಗಿದೆ. ಇದರಲ್ಲಿ ರೋಗ ನಿರೋಧಕ ಗುಣಗಳಿವೆ. ಇದು ಶೀತ, ಜ್ವರ, ಕೆಮ್ಮು, ಉಸಿರಾಟದ ಸಮಸ್ಯೆಗಳ ವಿರುದ್ಧ ಹೋರಾಡಲು ಸಹಾಯಕವಾಗಿದ್ದು, ನೀರಿಗೆ ತುಳಸಿ ಎಲೆಗಳನ್ನು ಹಾಕಿ ಕುದಿಸಿ ಕಷಾಯ ಮಾಡುವುದು, ಚಹಾದೊಡನೆ ಕುದಿಸಿ ಕುಡಿಯುವುದರಿಂದ ನಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುವ ಜೊತೆಗೆ ಆರೋಗ್ಯದ ರಕ್ಷಣೆಗೆ ಸಹಕಾರಿಯಾಗಿದೆ.

ಅಶ್ವಗಂಧ: ಅಶ್ವಗಂಧದ ಬೇರಿನ ಕಷಾಯ, ಅಶ್ವಗಂಧದ ಚೂರ್ಣವನ್ನು ಹಾಲಿಗೆ ಹಾಕಿ ಬೆರೆಸಿ ಕುಡಿಯುವುದರಿಂದ ದೇಹದ ಉಷ್ಣತೆಯನ್ನು ಸಮತೋಲನದಲ್ಲಿಡಲು ಹಾಗೂ ಮಾನಸಿಕ ಒತ್ತಡವನ್ನು ತಗ್ಗಿಸಲು ಸಹಕಾರಿಯಾಗಿದ್ದು, ಇದು ಕೂಡ ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಅರಿಶಿನ: ಅರಿಶಿನ ಚಳಿಗಾಲದಲ್ಲಿ ನಮ್ಮ ದೇಹದ ಉಷ್ಣತೆಯನ್ನು ಸಮತೋಲನದಲ್ಲಿಡಲು ಸಹಕಾರಿಯಾಗಿದೆ. ಒಂದು ಲೋಟ ಬೆಚ್ಚಗಿನ ಹಾಲಿನೊಂದಿಗೆ ಒಂದು ಚಿಟಿಕೆ ಅರಿಶಿನ ಕಲಸಿ ಕುಡಿಯುವುದು ಆರೋಗ್ಯಕ್ಕೆ ಹೆಚ್ಚು ಸಹಕಾರಿ.

ಅಮೃತಬಳ್ಳಿ: ಅಮೃತ ಬಳ್ಳಿ ಗಿಡಮೂಲಿಕೆಯು ನಮ್ಮ ದೇಹದಲ್ಲಿ ಅಮೃತಕ್ಕೆ ಸಮಾನವಾಗಿ ಕೆಲಸ ಮಾಡುತ್ತದೆ. ಕೆಮ್ಮು, ನೆಗಡಿ, ಜ್ವರ, ವೈರಲ್ ಫೀವರ್ ಮುಂತಾದ ಆರೋಗ್ಯ ಸಮಸ್ಯೆಗಳಿಗೆ ಇದರ ಕಷಾಯ ಮಾಡಿಕೊಂಡು ದಿನನಿತ್ಯ ಕುಡಿಯುವುದು ಹೆಚ್ಚು ಪರಿಣಾಮಕಾರಿ. ದೇಹವನ್ನು ಪುನರುಜ್ಜೀವನಗೊಳಿಸುವಲ್ಲಿ ಅಮೃತ ಬಳ್ಳಿಯು ಹೆಚ್ಚು ಸಹಕಾರಿಯಾಗಿದೆ.

ನೆಲ್ಲಿಕಾಯಿ: ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಅಂಶವು ಅಧಿಕ ಪ್ರಮಾಣದಲ್ಲಿದೆ. ನೆಲ್ಲಿಕಾಯಿಯ ತಾಜಾ ರಸ, ಒಣಗಿಸಿ ಕುಟ್ಟಿ ಪುಡಿ ಮಾಡಿದ ಪುಡಿಯನ್ನು ಸೇವಿಸುವುದರಿಂದ ತಲೆ ಕೂದಲಿನ ಸಮಸ್ಯೆ ನಿವಾರಣೆಯಾಗುವ ಜೊತೆಗೆ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ.

ಶತಾವರಿ: ಚಳಿಗಾಲದಲ್ಲಿ ದೇಹದ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸಲು ಮತ್ತು ಚಳಿಗಾಲದಲ್ಲಿ ಉಂಟಾಗುವ ಮಾನಸಿಕ ಒತ್ತಡವನ್ನು ನಿಭಾಯಿಸಲು ಶತಾವರಿ ಹೆಚ್ಚು ಸಹಾಯಕವಾಗಿದೆ. ಇದರ ಪುಡಿಯನ್ನು ಬೆಚ್ಚಗಿನ ಹಾಲಿನೊಂದಿಗೆ ಬೆರೆಸಿ ಸೇವಿಸುವುದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯವಿದೆ.

ತ್ರಿಫಲಾ: ತ್ರಿಫಲಾ ಎಂಬುದು ಆಮ್ಲ, ಹರೀತಕಿ ಮತ್ತು ಬಿಭೀತಕಿ ಎಂಬ ಮೂರು ಗಿಡ ಮೂಲಿಕೆಗಳನ್ನು ಒಳಗೊಂಡಿದೆ. ಇದರ ಸೇವನೆ ಜೀರ್ಣಕ್ರಿಯೆಗೆ ಸಹಕರಿಸುತ್ತದೆ. ಇದು ಮಲಬದ್ಧತೆಯನ್ನು ತಡೆಗಟ್ಟಲು ಹೆಚ್ಚು ಸಹಕಾರಿ. ಈ ತ್ರಿಫಲಾವನ್ನು ಮಲಗುವ ಮುನ್ನ ಬಿಸಿ ನೀರಿನಲ್ಲಿ ಹಾಕಿಸೇವಿಸುವುದು ಉತ್ತಮ.

ಆಯುರ್ವೇದ ಮೂಲಿಕೆಗಳನ್ನು ನಮ್ಮ ನಿತ್ಯ ಆಹಾರದಲ್ಲಿ ಸೇರಿಸಿ ಸೇವಿಸುವುದರಿಂದ ನಾವು ಆರೋಗ್ಯವಾಗಿರಲು ಹೆಚ್ಚು ಸಹಕಾರಿಯಾಗಲಿವೆ. ಇದರೊಂದಿಗೆ ದಿನನಿತ್ಯ ನಿಯಮಿತವಾದ ವ್ಯಾಯಾಮ, ಯೋಗದ ಅಭ್ಯಾಸ ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಜೊತೆಗೆ ರಕ್ತ ಪರಿಚಲನೆಯನ್ನು ಉತ್ತಮಗೊಳಿಸುತ್ತದೆ. ಜೊತೆಗೆ ಮಾನಸಿಕ ಒತ್ತಡವನ್ನು ಪರಿಹರಿಸುವುದರಲ್ಲಿ ಹೆಚ್ಚು ಸಹಕಾರಿ. ಇದಿಷ್ಟೇ ಅಲ್ಲದೆ ಒಬ್ಬ ಮನುಷ್ಯ ಉತ್ತಮ ನಿದ್ರೆ ಮಾಡುವುದು ಅವನ ಆರೋಗ್ಯಕ್ಕೆ ಹೆಚ್ಚು ಸಹಕಾರಿ. ಸುಖ ನಿದ್ರೆಯ ಸಮಯದಲ್ಲಿ ನಮ್ಮ ದೇಹವು ದುರಸ್ತಿ ಪ್ರಕ್ರಿಯೆಗೆ ಒಳಗಾಗುತ್ತದೆ. ಬೆಳವಣಿಗೆಯ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಸುಧಾರಿಸಲು ಉತ್ತಮ ನಿದ್ರೆ ಸಹಕಾರಿಯಾಗಿದೆ. ಆದ್ದರಿಂದ ಆಹಾರ, ವ್ಯಾಯಾಮದಷ್ಟೇ ಉತ್ತಮ ನಿದ್ರೆಯೂ ಮನುಷ್ಯನಿಗೆ ಅತ್ಯವಶ್ಯ.

ಆಂದೋಲನ ಡೆಸ್ಕ್

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

2 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

3 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

4 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

4 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

4 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

5 hours ago