ಮಹಿಳೆ ಸಬಲೆ

ಹೆಣ್ಣು ಮಕ್ಕಳ ದಿನ ಸಾರ್ಥಕವಾಗುವುದು ಹೇಗೆ?

ಎಂ.ಜೆ.ಇಂದುಮತಿ

ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮವೊಂದನ್ನು ಹಮ್ಮಿಕೊಳ್ಳಲಾಗಿತ್ತು. ಹೆಚ್ಚುತ್ತಿರುವ ಸೈಬರ್ ಕ್ರೈಮ್ ವಿಷಯವಾಗಿ ಅನೇಕ ತಜ್ಞರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು. ಪಾಸ್ ವರ್ಡ್, ಓಟಿಪಿ ಹೇಳಿದರೆ ಮಾತ್ರ ತಮ್ಮ ಬ್ಯಾಂಕ್ ಖಾತೆಯಲ್ಲಿದ್ದ ದುಡ್ಡು ಹೋಗುತ್ತದೆ ಎಂಬ ಕಾಲ ಈಗಿಲ್ಲ. ಎಷ್ಟು ಅಸ್ಟೇಟ್ ಆಗಿದೆ ಎಂದರೆ, ಅಂತಹ ಅನಾಮಿಕ ವ್ಯಕ್ತಿಗಳಿಂದ ಒಂದು ಫೋನ್ ಕರೆಯನ್ನು ಸ್ವೀಕರಿಸಿದರೂ ಸಾಕು, ನಮ್ಮ ಇತಿಹಾಸವೇ ಅವರ ಕಂಪ್ಯೂಟರ್ ಪರದೆಯ ಮೇಲೆ ಬಂದಿರುತ್ತದೆ. ಅದರಲ್ಲಿ ತೀರಾ ಖಾಸಗಿ ವಿಚಾರಗಳೂ ಸೇರುತ್ತವೆ ಎಂಬುದನ್ನು ಗಮನಿಸಬೇಕು.

ಇಂತಹ ಜಾಲಗಳ ಬಗ್ಗೆ ಅರಿವಿರದ ಹೆಣ್ಣು ಮಗಳೊಬ್ಬಳು ಕರೆ ಸ್ವೀಕರಿಸಿದ ಅರೆಕ್ಷಣದಲ್ಲಿ, ಅವಳ ಮೊಬೈಲ್‌ಗೆ ದುಡ್ಡಿಗಾಗಿ ಬೇಡಿಕೆ, ಸಾಮಾಜಿಕ ಜಾಲತಾಣದಲ್ಲಿದ್ದ ಆಕೆಯ ಚಿತ್ರವನ್ನು ಕೃತಕ ಬುದ್ದಿಮತ್ತೆಯ ಸಹಾಯದಿಂದ ದುರ್ಬಳಕೆ ಮಾಡಿಕೊಳ್ಳುವುದು ಅಥವಾ ನಗ್ನಗೊಳಿಸುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಶೋಷಣೆಯಲ್ಲಿ ಇದರ ಪಾಲು ಸಾಕಷ್ಟಿವೆ.

ವಿಶ್ವ ಹೆಣ್ಣು ಮಕ್ಕಳ ದಿನವನ್ನು ಅಕ್ಟೋಬರ್ 11ರಂದು ಜಾಗತಿಕ ಮಟ್ಟದಲ್ಲಿ ಆಚರಿಸಿದ್ದೇವೆ. ಮಾರ್ಚ್ 8ರಂದು ಆಚರಿಸಲಾಗುವ ಅಂತಾರಾಷ್ಟ್ರೀಯ ಮಹಿಳಾ ದಿನ, ವಿಶ್ವ ಹೆಣ್ಣು ಮಕ್ಕಳ ದಿನಗಳೆಲ್ಲ ಮಹಿಳೆಯರು ಹಾಗೂ ಹದಿಹರೆಯದ ಹೆಣ್ಣು ಮಕ್ಕಳನ್ನು ಸಶಕ್ತಗೊಳಿಸುವ ಸಲುವಾಗಿಯೇ ಇರುವಂತಹದ್ದು.

ಈ ವರ್ಷದ ಆಚರಣೆಯಲ್ಲಿ ‘ಡಿಜಿಟಲ್ ಜನರೇಶನ್’ ಅಂದರೆ ತಂತ್ರಜ್ಞಾನದ ತಲೆಮಾರಿನ ಕುರಿತು ಘೋಷವಾಕ್ಯ ರೂಪಿಸಿದೆ. ಹುಡುಗಿಯರು ಅಂತರ್ಜಾಲದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಜಾಗತಿಕವಾಗಿ ಚರ್ಚಿಸುವುದಕ್ಕೆಂದೇ ವೇದಿಕೆಯನ್ನು ಒದಗಿಸುತ್ತಿದೆ. ಇಂಟರ್‌ನೆಟ್ ಸೌಲಭ್ಯ ಪಡೆದಿರುವವರ ಅಷ್ಟೂ ಸಂಖ್ಯೆಯಲ್ಲಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ 2.2 ಶತಕೋಟಿ ಜನರು ಹೆಣ್ಣು ಮಕ್ಕಳಾಗಿದ್ದಾರೆ.

ವಿಶ್ವ ಸಂಸ್ಥೆಯ ಸಾಮಾನ್ಯ ಸಭೆ ಅಕ್ಟೋಬರ್ 11ನೇ ತಾರೀಖನ್ನು ಹೆಣ್ಣು ಮಕ್ಕಳನ್ನು ಗೌರವಿಸುವ ದಿನವೆಂದು ಘೋಷಿಸಿತು. 1995ರಲ್ಲಿ ಬೀಜಿಂಗ್‌ನಲ್ಲಿ ನಡೆದ ಮಹಿಳೆಯರ ಬಗೆಗಿನ ವಿಶ್ವ ಸಮ್ಮೇಳನದಲ್ಲಿ ಬೀಜಿಂಗ್ ಘೋಷಣೆ ಮೂಲಕ ಮಹಿಳೆಯರು ಮತ್ತು ಹುಡುಗಿಯರ ಹಕ್ಕುಗಳಿಗೆ ಕರೆ ನೀಡಲಾಯಿತು. ಇದು ಜಾಗತಿಕ ಮಟ್ಟದಲ್ಲಿ ಪ್ರಪಂಚದಾದ್ಯಂತ ಹದಿಹರೆಯದ ಹುಡುಗಿಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಅಗತ್ಯವನ್ನು ಗುರುತಿಸಿದ ಮೊದಲ ನೀಲ ನಕ್ಷೆಯಾಗಿದೆ.

ಅಂತಾರಾಷ್ಟ್ರೀಯ ಸರ್ಕಾರೇತರ ಸಂಸ್ಥೆ ಪ್ಲಾನ್‌ ಇಂಟರ್‌ನ್ಯಾಷನಲ್‌ನ ಅಭಿಯಾನವು ‘ನಾನು ಹುಡುಗಿಯಾಗಿರುವುದರಿಂದ’ ಎಂಬುದರಿಂದ ಪ್ರಾರಂಭವಾಯಿತು. ಪ್ಲಾನ್ ಇಂಟರ್‌ನ್ಯಾಷನಲ್ ಒಂದು ಸರ್ಕಾರೇತರ ಸಂಸ್ಥೆಯಾಗಿದ್ದು, ಇದು ವಿಶ್ವದಾದ್ಯಂತ ಸುಮಾರು 70 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಸಂಸ್ಥೆ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಹೆಣ್ಣು ಮಕ್ಕಳನ್ನು ಪೋಷಿಸುವ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ.

ಸಾಮಾನ್ಯ ಸಭೆಯು ಅಕ್ಟೋಬರ್ 11, 2012ರಂದು ಹೆಣ್ಣು ಮಕ್ಕಳ ಅಂತಾರಾಷ್ಟ್ರೀಯ ದಿನದ ಉದ್ಘಾಟನಾ ದಿನವೆಂದು ಗುರುತಿಸುವ ನಿರ್ಣಯವನ್ನು ಯಶಸ್ವಿಯಾಗಿ ಅಂಗೀಕರಿಸಿತು. ಇದು ನಿರ್ದಿಷ್ಟವಾಗಿ ಬಾಲ್ಯ ವಿವಾಹಗಳ ಗಂಭೀರ ಸಮಸ್ಯೆಯ ಸುತ್ತ ಕೇಂದ್ರೀಕೃತವಾಗಿತ್ತು. ಬಾಲ್ಯ ವಿವಾಹವನ್ನು ಕೊನೆಗಾಣಿಸುವುದು ಅಂದಿನ ಉದ್ಘಾಟನಾ ವಿಷಯವಾಗಿತ್ತು. ಪ್ರತಿ ವರ್ಷವೂ ಹೆಣ್ಣು ಮಕ್ಕಳು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಕುರಿತು ಈ ದಿನವನ್ನು ವಿಶಿಷ್ಟ ಥೀಮ್‌ನೊಂದಿಗೆ ಆಚರಿಸಲಾಗುತ್ತಿದೆ.

ಕಾನೂನು ವ್ಯವಸ್ಥೆ ಇದ್ದರೂ ನಿತ್ಯವೂ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲಿವೆ. ಹೆಣ್ಣುಮಕ್ಕಳನ್ನು ಕಟ್ಟಿ ಹಾಕುವ ಅಥವಾ ಅವರ ಮೇಲೆ ಇನ್ನಷ್ಟು ನಿಯಂತ್ರಣ ಸಾಧಿಸುವ ಬದಲು, ಅತ್ಯಾಚಾರಿಗಳಿಗೆ ಕಾನೂನಿನ ಮೂಲಕ ಕಠಿಣ ಶಿಕ್ಷೆ ವಿಧಿಸಬೇಕು. ಹಾಗಾದಾಗ ಮಾತ್ರ ಅತ್ಯಾಚಾರ, ಹೆಣ್ಣಿನ ಮೇಲೆ ಶೋಷಣೆ ನಡೆಸುವುದಕ್ಕೆ ಹೆದರುತ್ತಾರೆ. ಕಾನೂನನ್ನು ಬಲಗೊಳಿಸುವುದೊಂದೇ ಪರಿಹಾರ ಎನಿಸುತ್ತದೆ.

ಸಬಲೀಕರಣ ಪದವನ್ನು ಎಲ್ಲೆಡೆ ಬಳಸಿ ಸವಕಲಾಗಿ ಸಿದ್ದೇವೆ. ಆದರೆ, ಹೆಣ್ಣು ಮಕ್ಕಳನ್ನು ಸಬಲೀಕರಣ ಗೊಳಿಸಲು ಮಾತ್ರ ಪೂರ್ಣ ಪ್ರಮಾಣದಲ್ಲಿ ಸಾಧ್ಯವಾಗಿಲ್ಲ. ಹೆಣ್ಣು ಮಕ್ಕಳಿಗೆ ಸಮಾನವಾದ ಅವಕಾಶಗಳನ್ನು ನೀಡಿದಾಗ ಅವರು ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ತಲುಪಬಹುದು ಮತ್ತು ಸಮಾಜಕ್ಕೆ ಅರ್ಥಪೂರ್ಣ ಕೊಡುಗೆ ನೀಡಬಹುದು. (ಲೇಖಕರು ಮೈಸೂರಿನ ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ).

 

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಏಪ್ರಿಲ್.‌8ರಿಂದ ಪಾಸ್‌ಪೋರ್ಟ್‌ ಮೇಳ: ಸಂಸದ ಯದುವೀರ್‌ ಒಡೆಯರ್‌ ಮಾಹಿತಿ

ಕೊಡಗು: ಸಂಸದ ಯದುವೀರ್‌ ಕೃಷ್ಣದತತ ಚಾಮರಾಜ ಒಡೆಯರ್‌ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್‌ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ…

14 mins ago

ಇರಾನ್‌ ಸರ್ವೋಚ್ಛ ನಾಯಕನಾಗಿ ಅಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಬಾ ಖಮೇನಿ ಆಯ್ಕೆ.?

ಟೆಹರಾನ್:‌ ಇರಾನ್‌ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಇರಾನ್‌ನ ಮುಂದಿನ ಸರ್ವೋಚ್ಛ…

33 mins ago

ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಿಗ್‌ ಬಜೆಟ್‌ ಸಿನಿಮಾ ಟಾಕ್ಸಿಕ್‌ ಇರಾನ್-‌ ಇಸ್ರೇಲ್‌ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಮಾರ್ಚ್.‌19ರಂದು ಬಿಡುಗಡೆಯಾಗಬೇಕಿದ್ದ…

52 mins ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ವಿಶೇಷ: ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಕಂಬ ಪ್ರತಿಷ್ಠಾಪನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ…

2 hours ago

ಹನೂರು| ಚಂಗಡಿ ಗ್ರಾಮದ ಸುತ್ತಮುತ್ತ ಪ್ರತಿನಿತ್ಯ ಹುಲಿ ಓಡಾಟ: ಆತಂಕದಲ್ಲಿ ಸ್ಥಳೀಯರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ…

2 hours ago

ಓದುಗರ ಪತ್ರ: ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಾಲೇಜು ಬಸ್ ನಿಲ್ದಾಣದ ಮೂಲಕ ನಂಜನಗೂಡು ಹಾಗೂ ಚಾಮರಾಜನಗರ  ಸಂಜೆಯ ವೇಳೆ ಸಾಕಷ್ಟು ಬಸ್‌ಗಳಿಲ್ಲದೆ…

2 hours ago