ಮಹಿಳೆಯರನ್ನು ಉದ್ಯಮಿಗಳನ್ನಾಗಿಸುವತ್ತ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಮಹತ್ತರ ಹೆಜ್ಜೆಯನ್ನಿಟ್ಟು, ಒಂದೂವರೆ ದಶಕಗಳೇ ಕಳೆದಿವೆ. ಅನೇಕ ಮಹಿಳೆಯರು ಉದ್ಯೋಗಿನಿ ಯೋಜನೆಯನ್ನು ಪಡೆದುಕೊಂಡು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ.
ಬುಕ್ ಬೈಂಡಿಂಗ್ ಮತ್ತು ನೋಟ್ಬುಕ್ಗಳ ತಯಾರಿಕೆ, ಜಾಮ್, ಜೆಲ್ಲಿ, ಉಪ್ಪಿನಕಾಯಿ ತಯಾರಿಕೆ, ಹಪ್ಪಳ ತಯಾರಿಕೆ, ಸೀರೆ ಮತ್ತು ಕಸೂತಿ ಕೆಲಸ ಸೇರಿದಂತೆ ಹಲವಾರು ಉದ್ಯಮಗಳ ಕನಸನ್ನು ಸಾಕಾರಗೊಳಿಸಲು ಉದ್ಯೋಗಿನಿ ಯೋಜನೆ ನೆರವಾಗಿದೆ. ೧೯೯೭-೯೮ನೇ ಸಾಲಿನಲ್ಲಿ ಜಾರಿಯಾದ ಉದ್ಯೋಗಿನಿ ಯೋಜನೆಯಡಿಯಲ್ಲಿ ಅರ್ಹ ಮಹಿಳಾ ಉದ್ಯಮಿಗಳಿಗೆ ಉದ್ಯಮ ಸ್ಥಾಪಿಸಲು ಮತ್ತು ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಗರಿಷ್ಟ ಒಂದು ಲಕ್ಷ ರೂ. ಗಳವರೆಗೆ ಬ್ಯಾಂಕ್ ಮೂಲಕ ಸಾಲ ನೀಡುವ ಕಾರ್ಯಕ್ರಮ ರೂಪಿಸಿದೆ.
ಈ ಹಣಕಾಸು ಸಂಸ್ಥೆಗಳು ಮಂಜೂರು ಮಾಡುವ ಸಾಲದ ಮೊತ್ತಕ್ಕೆ ನಿಗಮದಿಂದ ಸಹಾಯಧನ ಮಂಜೂರು ಮಾಡಲು ಅವಕಾಶವಿದೆ. ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿ ಸಲ್ಲಿಸಬೇಕು. ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. ೨೦ರಷ್ಟು ಅಥವಾ ಗರಿಷ್ಟ ಏಳೂವರೆ ಸಾವಿರ ರೂಪಾಯಿಗಳು ಮೀರದಂತೆ ಮತ್ತು ವಿಶೇಷ ವರ್ಗದವರಿಗೆ (ಅಂಗವಿಕಲರು/ವಿಧವೆ/ಸಂಕಷ್ಟಕ್ಕೊಳಗಾದ ಮಹಿಳೆಯರಿಗೆ) ಶೇ. ೩೦ರಷ್ಟು ಅಥವಾ ಗರಿಷ್ಟ ಹತ್ತು ಸಾವಿರ ರೂಪಾಯಿಗಳಂತೆ ಹಾಗೂ (ಪ. ಜಾತಿ/ಪ. ಪಂ)ದವರಿಗೆ ಶೇ. ೫೦ರಷ್ಟು ಅಥವಾ ಗರಿಷ್ಟ ರೂ. ೫೦,೦೦೦ಗಳಷ್ಟು ಸಹಾಯಧನವನ್ನು ಈ ಯೋಜನೆಯಿಂದ ಪಡೆಯಬಹುದಾಗಿದೆ.
ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್ಘಾಟ್ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…