ಮಹಿಳೆಯರನ್ನು ಉದ್ಯಮಿಗಳನ್ನಾಗಿಸುವತ್ತ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಮಹತ್ತರ ಹೆಜ್ಜೆಯನ್ನಿಟ್ಟು, ಒಂದೂವರೆ ದಶಕಗಳೇ ಕಳೆದಿವೆ. ಅನೇಕ ಮಹಿಳೆಯರು ಉದ್ಯೋಗಿನಿ ಯೋಜನೆಯನ್ನು ಪಡೆದುಕೊಂಡು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ.
ಬುಕ್ ಬೈಂಡಿಂಗ್ ಮತ್ತು ನೋಟ್ಬುಕ್ಗಳ ತಯಾರಿಕೆ, ಜಾಮ್, ಜೆಲ್ಲಿ, ಉಪ್ಪಿನಕಾಯಿ ತಯಾರಿಕೆ, ಹಪ್ಪಳ ತಯಾರಿಕೆ, ಸೀರೆ ಮತ್ತು ಕಸೂತಿ ಕೆಲಸ ಸೇರಿದಂತೆ ಹಲವಾರು ಉದ್ಯಮಗಳ ಕನಸನ್ನು ಸಾಕಾರಗೊಳಿಸಲು ಉದ್ಯೋಗಿನಿ ಯೋಜನೆ ನೆರವಾಗಿದೆ. ೧೯೯೭-೯೮ನೇ ಸಾಲಿನಲ್ಲಿ ಜಾರಿಯಾದ ಉದ್ಯೋಗಿನಿ ಯೋಜನೆಯಡಿಯಲ್ಲಿ ಅರ್ಹ ಮಹಿಳಾ ಉದ್ಯಮಿಗಳಿಗೆ ಉದ್ಯಮ ಸ್ಥಾಪಿಸಲು ಮತ್ತು ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಗರಿಷ್ಟ ಒಂದು ಲಕ್ಷ ರೂ. ಗಳವರೆಗೆ ಬ್ಯಾಂಕ್ ಮೂಲಕ ಸಾಲ ನೀಡುವ ಕಾರ್ಯಕ್ರಮ ರೂಪಿಸಿದೆ.
ಈ ಹಣಕಾಸು ಸಂಸ್ಥೆಗಳು ಮಂಜೂರು ಮಾಡುವ ಸಾಲದ ಮೊತ್ತಕ್ಕೆ ನಿಗಮದಿಂದ ಸಹಾಯಧನ ಮಂಜೂರು ಮಾಡಲು ಅವಕಾಶವಿದೆ. ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿ ಸಲ್ಲಿಸಬೇಕು. ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. ೨೦ರಷ್ಟು ಅಥವಾ ಗರಿಷ್ಟ ಏಳೂವರೆ ಸಾವಿರ ರೂಪಾಯಿಗಳು ಮೀರದಂತೆ ಮತ್ತು ವಿಶೇಷ ವರ್ಗದವರಿಗೆ (ಅಂಗವಿಕಲರು/ವಿಧವೆ/ಸಂಕಷ್ಟಕ್ಕೊಳಗಾದ ಮಹಿಳೆಯರಿಗೆ) ಶೇ. ೩೦ರಷ್ಟು ಅಥವಾ ಗರಿಷ್ಟ ಹತ್ತು ಸಾವಿರ ರೂಪಾಯಿಗಳಂತೆ ಹಾಗೂ (ಪ. ಜಾತಿ/ಪ. ಪಂ)ದವರಿಗೆ ಶೇ. ೫೦ರಷ್ಟು ಅಥವಾ ಗರಿಷ್ಟ ರೂ. ೫೦,೦೦೦ಗಳಷ್ಟು ಸಹಾಯಧನವನ್ನು ಈ ಯೋಜನೆಯಿಂದ ಪಡೆಯಬಹುದಾಗಿದೆ.
ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…
ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ…
ಹಿರಿಯ ನಟಿ, ನಿರ್ಮಾಪಕಿ, ಮಾಜಿ ಸಚಿವೆ ಡಾ.ಜಯಮಾಲ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ೨ನೇ ಬಾರಿಗೆ ಆಯ್ಕೆಯಾಗಿರುವುದು…
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ನಲ್ಲಿ ಕಳೆದ ಮೂರು ವರ್ಷಗಳಿಂದ ನಡೆದಿರುವ ಅಧಿಕಾರ…
ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…
ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …