ಮಹಿಳೆ ಸಬಲೆ

ಮಹಿಳೆಯರಿಗಾಗಿ ಉದ್ಯೋಗಿನಿ

ಮಹಿಳೆಯರನ್ನು ಉದ್ಯಮಿಗಳನ್ನಾಗಿಸುವತ್ತ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಮಹತ್ತರ ಹೆಜ್ಜೆಯನ್ನಿಟ್ಟು, ಒಂದೂವರೆ ದಶಕಗಳೇ ಕಳೆದಿವೆ. ಅನೇಕ ಮಹಿಳೆಯರು ಉದ್ಯೋಗಿನಿ ಯೋಜನೆಯನ್ನು ಪಡೆದುಕೊಂಡು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ.

ಬುಕ್ ಬೈಂಡಿಂಗ್ ಮತ್ತು ನೋಟ್‌ಬುಕ್‌ಗಳ ತಯಾರಿಕೆ, ಜಾಮ್, ಜೆಲ್ಲಿ, ಉಪ್ಪಿನಕಾಯಿ ತಯಾರಿಕೆ, ಹಪ್ಪಳ ತಯಾರಿಕೆ, ಸೀರೆ ಮತ್ತು ಕಸೂತಿ ಕೆಲಸ ಸೇರಿದಂತೆ ಹಲವಾರು ಉದ್ಯಮಗಳ ಕನಸನ್ನು ಸಾಕಾರಗೊಳಿಸಲು ಉದ್ಯೋಗಿನಿ ಯೋಜನೆ ನೆರವಾಗಿದೆ. ೧೯೯೭-೯೮ನೇ ಸಾಲಿನಲ್ಲಿ ಜಾರಿಯಾದ ಉದ್ಯೋಗಿನಿ ಯೋಜನೆಯಡಿಯಲ್ಲಿ ಅರ್ಹ ಮಹಿಳಾ ಉದ್ಯಮಿಗಳಿಗೆ ಉದ್ಯಮ ಸ್ಥಾಪಿಸಲು ಮತ್ತು ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಗರಿಷ್ಟ ಒಂದು ಲಕ್ಷ ರೂ. ಗಳವರೆಗೆ ಬ್ಯಾಂಕ್ ಮೂಲಕ ಸಾಲ ನೀಡುವ ಕಾರ್ಯಕ್ರಮ ರೂಪಿಸಿದೆ.

ಈ ಹಣಕಾಸು ಸಂಸ್ಥೆಗಳು ಮಂಜೂರು ಮಾಡುವ ಸಾಲದ ಮೊತ್ತಕ್ಕೆ ನಿಗಮದಿಂದ ಸಹಾಯಧನ ಮಂಜೂರು ಮಾಡಲು ಅವಕಾಶವಿದೆ. ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿ ಸಲ್ಲಿಸಬೇಕು. ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. ೨೦ರಷ್ಟು ಅಥವಾ ಗರಿಷ್ಟ ಏಳೂವರೆ ಸಾವಿರ ರೂಪಾಯಿಗಳು ಮೀರದಂತೆ ಮತ್ತು ವಿಶೇಷ ವರ್ಗದವರಿಗೆ (ಅಂಗವಿಕಲರು/ವಿಧವೆ/ಸಂಕಷ್ಟಕ್ಕೊಳಗಾದ ಮಹಿಳೆಯರಿಗೆ) ಶೇ. ೩೦ರಷ್ಟು ಅಥವಾ ಗರಿಷ್ಟ ಹತ್ತು ಸಾವಿರ ರೂಪಾಯಿಗಳಂತೆ ಹಾಗೂ (ಪ. ಜಾತಿ/ಪ. ಪಂ)ದವರಿಗೆ ಶೇ. ೫೦ರಷ್ಟು ಅಥವಾ ಗರಿಷ್ಟ ರೂ. ೫೦,೦೦೦ಗಳಷ್ಟು ಸಹಾಯಧನವನ್ನು ಈ ಯೋಜನೆಯಿಂದ ಪಡೆಯಬಹುದಾಗಿದೆ.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago