ಮಹಿಳೆ ಸಬಲೆ

ಮಹಿಳೆಯರಿಗಾಗಿ ಉದ್ಯೋಗಿನಿ

ಮಹಿಳೆಯರನ್ನು ಉದ್ಯಮಿಗಳನ್ನಾಗಿಸುವತ್ತ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಮಹತ್ತರ ಹೆಜ್ಜೆಯನ್ನಿಟ್ಟು, ಒಂದೂವರೆ ದಶಕಗಳೇ ಕಳೆದಿವೆ. ಅನೇಕ ಮಹಿಳೆಯರು ಉದ್ಯೋಗಿನಿ ಯೋಜನೆಯನ್ನು ಪಡೆದುಕೊಂಡು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ.

ಬುಕ್ ಬೈಂಡಿಂಗ್ ಮತ್ತು ನೋಟ್‌ಬುಕ್‌ಗಳ ತಯಾರಿಕೆ, ಜಾಮ್, ಜೆಲ್ಲಿ, ಉಪ್ಪಿನಕಾಯಿ ತಯಾರಿಕೆ, ಹಪ್ಪಳ ತಯಾರಿಕೆ, ಸೀರೆ ಮತ್ತು ಕಸೂತಿ ಕೆಲಸ ಸೇರಿದಂತೆ ಹಲವಾರು ಉದ್ಯಮಗಳ ಕನಸನ್ನು ಸಾಕಾರಗೊಳಿಸಲು ಉದ್ಯೋಗಿನಿ ಯೋಜನೆ ನೆರವಾಗಿದೆ. ೧೯೯೭-೯೮ನೇ ಸಾಲಿನಲ್ಲಿ ಜಾರಿಯಾದ ಉದ್ಯೋಗಿನಿ ಯೋಜನೆಯಡಿಯಲ್ಲಿ ಅರ್ಹ ಮಹಿಳಾ ಉದ್ಯಮಿಗಳಿಗೆ ಉದ್ಯಮ ಸ್ಥಾಪಿಸಲು ಮತ್ತು ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಗರಿಷ್ಟ ಒಂದು ಲಕ್ಷ ರೂ. ಗಳವರೆಗೆ ಬ್ಯಾಂಕ್ ಮೂಲಕ ಸಾಲ ನೀಡುವ ಕಾರ್ಯಕ್ರಮ ರೂಪಿಸಿದೆ.

ಈ ಹಣಕಾಸು ಸಂಸ್ಥೆಗಳು ಮಂಜೂರು ಮಾಡುವ ಸಾಲದ ಮೊತ್ತಕ್ಕೆ ನಿಗಮದಿಂದ ಸಹಾಯಧನ ಮಂಜೂರು ಮಾಡಲು ಅವಕಾಶವಿದೆ. ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿ ಸಲ್ಲಿಸಬೇಕು. ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. ೨೦ರಷ್ಟು ಅಥವಾ ಗರಿಷ್ಟ ಏಳೂವರೆ ಸಾವಿರ ರೂಪಾಯಿಗಳು ಮೀರದಂತೆ ಮತ್ತು ವಿಶೇಷ ವರ್ಗದವರಿಗೆ (ಅಂಗವಿಕಲರು/ವಿಧವೆ/ಸಂಕಷ್ಟಕ್ಕೊಳಗಾದ ಮಹಿಳೆಯರಿಗೆ) ಶೇ. ೩೦ರಷ್ಟು ಅಥವಾ ಗರಿಷ್ಟ ಹತ್ತು ಸಾವಿರ ರೂಪಾಯಿಗಳಂತೆ ಹಾಗೂ (ಪ. ಜಾತಿ/ಪ. ಪಂ)ದವರಿಗೆ ಶೇ. ೫೦ರಷ್ಟು ಅಥವಾ ಗರಿಷ್ಟ ರೂ. ೫೦,೦೦೦ಗಳಷ್ಟು ಸಹಾಯಧನವನ್ನು ಈ ಯೋಜನೆಯಿಂದ ಪಡೆಯಬಹುದಾಗಿದೆ.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago