ಹೆಣ್ಣು ಮಕ್ಕಳು ನಿರ್ದಿಷ್ಟ ವಯಸ್ಸಿಗೂ ಮುನ್ನ ಮುಟ್ಟಾಗುವುದು ಪ್ರಸ್ತುತ ದಿನಗಳಲ್ಲಿ ಸಾಮಾನ್ಯ ಸಂಗತಿಯಾಗಿದೆ.
ಇದಕ್ಕೆ ಆಹಾರ, ಜೀವನಶೈಲಿಯೂ ಕಾರಣವೆಂಬುದು ಅನೇಕರ ಅಭಿಪ್ರಾಯ. ದುರಂತವೆಂದರೆ ೨೬ ಮಿಲಿಯನ್ನಷ್ಟು ಹೆಣ್ಣು ಮಕ್ಕಳು ಮುಟ್ಟಾಗುತ್ತಿದ್ದಂತೆಯೇ ತಮ್ಮ ಶಿಕ್ಷಣದಿಂದಲೂ ವಂಚಿತರಾಗುತ್ತಿದ್ದಾರೆ.
‘ಮುಟ್ಟು’ ಎನ್ನುವ ಪದ ಬಳಕೆಯನ್ನು ಎಲ್ಲರೆದುರು ಮಾತನಾಡದ ಕಾಲವೊಂದಿತ್ತು. ವರ್ಷ ಕಳೆದಂತೆ ಹೆಣ್ಣು ಮಕ್ಕಳಿಗೆ ಮನೆಯಿಂದಲೂ ಶಾಲೆಯಿಂದಲೂ ಈ ಕುರಿತು ಅರಿವು ದೊರಕುತ್ತಿದೆ. ಹೆಣ್ಣು ಮಕ್ಕಳು ಬಹುಬೇಗ ಮುಟ್ಟಾಗುತ್ತಿರುವ ಸನ್ನಿವೇಶವನ್ನು ಆಧರಿಸಿದ ಸ್ಯಾನಿಟರಿ ನ್ಯಾಪ್ಕಿನ್ ಜಾಹೀರಾತು ಜಾಲತಾಣದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಆ ಜಾಹೀರಾತಿನಲ್ಲಿ ಸ್ನೇಹಿತೆಯ ಯೂನಿಫಾರಂನಲ್ಲಿ ರಕ್ತದ ಕಲೆಯನ್ನು ಕಂಡ ಇಬ್ಬರು ಹೆಣ್ಣು ಮಕ್ಕಳು ಅದನ್ನು ಕಂಡದ್ದೇ ಮೊದಲು ಸಮಾಧಾನದಿಂದ ‘ರಕ್ತ ಒಸರುವುದು ನಿಂತ ಮೇಲೆ ಮತ್ತೆ ಶಾಲೆಗೆ ಬಾ’ ಎನ್ನುತ್ತಾರೆ. ಈಕೆ ಮತ್ತೆ ತೋರಿದಾಗ, ‘ಹಾಗಾದ್ರೆ ನೀನು ಶಾಲೆಗೆ ಬರೋ ಹಾಗೇ ಇಲ್ವಾ? ನಿಂಗೇನಾದ್ರೂ ಕಾಯಿಲೆ ಬಂದಿದ್ಯಾ?’ ಎಂದು ಒಬ್ಬಳು ಮುಗ್ಧವಾಗಿ ಕೇಳುತ್ತಾಳೆ. ಕಂಗಾಲಾದ ಹುಡುಗಿ ಶಾಲಾ ಶಿಕ್ಷಕಿ ಎದುರಾದಾಗ ಅತ್ತುಬಿಡುತ್ತಾಳೆ. ವಿಷಯ ಅರ್ಥವಾದ ಹೊತ್ತಿಗೆ ಶಿಕ್ಷಕಿ ತರಗತಿಗೆ ಹೊರಟು ನಿಂತಾಗ, ‘ಈ ವಿಷಯ ವನ್ನು ಮಕ್ಕಳಿಗೆ ಮೊದಲೇ ಹೇಳಬಹುದೇ?’
ಮತ್ತೊಬ್ಬ ಶಿಕ್ಷಕಿ ಕೇಳಿದ ಮಾತಿಗೆ ಮೊದಲೆ ‘ಮುಟ್ಟು ಆಗುವಾಗ, ಅದಕ್ಕೆ ಪೂರ್ವ ತಯಾರಿಯನ್ನು ಮೊದಲೇ ಮಾಡಿಕೊಳ್ಳಬೇಕು’ ಎನ್ನುತ್ತಾ ಮುಂದೆ ಸಾಗುತ್ತಾಳೆ. ಇಂಥ ಸನ್ನಿವೇಶ ಧುತ್ತೆಂದು ಎದುರಾದಾಗ ಗಾಬರಿ ಯಾಗಿ, ದಿನವಿಡೀ ಯೋಚಿಸುವುದಕ್ಕಿಂತ ಮಗಳು ಚಿಕ್ಕವಳಿದ್ದಾಗಲೇ ಮೊದಲ ಮುಟ್ಟಿನ ಕುರಿತು ತಾಯಿಯು ಅರಿವು ಮೂಡಿಸುವುದು ಸೂಕ್ತ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…