ಮಹಿಳೆ ಸಬಲೆ

ಮುಟ್ಟಿನ ಅರಿವು ಹೆಣ್ಣಿಗೆ ಮುಖ್ಯ

ಹೆಣ್ಣು ಮಕ್ಕಳು ನಿರ್ದಿಷ್ಟ ವಯಸ್ಸಿಗೂ ಮುನ್ನ ಮುಟ್ಟಾಗುವುದು ಪ್ರಸ್ತುತ ದಿನಗಳಲ್ಲಿ ಸಾಮಾನ್ಯ ಸಂಗತಿಯಾಗಿದೆ.

ಇದಕ್ಕೆ ಆಹಾರ, ಜೀವನಶೈಲಿಯೂ ಕಾರಣವೆಂಬುದು ಅನೇಕರ ಅಭಿಪ್ರಾಯ. ದುರಂತವೆಂದರೆ ೨೬ ಮಿಲಿಯನ್‌ನಷ್ಟು ಹೆಣ್ಣು ಮಕ್ಕಳು ಮುಟ್ಟಾಗುತ್ತಿದ್ದಂತೆಯೇ ತಮ್ಮ ಶಿಕ್ಷಣದಿಂದಲೂ ವಂಚಿತರಾಗುತ್ತಿದ್ದಾರೆ.

‘ಮುಟ್ಟು’ ಎನ್ನುವ ಪದ ಬಳಕೆಯನ್ನು ಎಲ್ಲರೆದುರು ಮಾತನಾಡದ ಕಾಲವೊಂದಿತ್ತು. ವರ್ಷ ಕಳೆದಂತೆ ಹೆಣ್ಣು ಮಕ್ಕಳಿಗೆ ಮನೆಯಿಂದಲೂ ಶಾಲೆಯಿಂದಲೂ ಈ ಕುರಿತು ಅರಿವು ದೊರಕುತ್ತಿದೆ. ಹೆಣ್ಣು ಮಕ್ಕಳು ಬಹುಬೇಗ ಮುಟ್ಟಾಗುತ್ತಿರುವ ಸನ್ನಿವೇಶವನ್ನು ಆಧರಿಸಿದ ಸ್ಯಾನಿಟರಿ ನ್ಯಾಪ್‌ಕಿನ್ ಜಾಹೀರಾತು ಜಾಲತಾಣದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಆ ಜಾಹೀರಾತಿನಲ್ಲಿ ಸ್ನೇಹಿತೆಯ ಯೂನಿಫಾರಂನಲ್ಲಿ ರಕ್ತದ ಕಲೆಯನ್ನು ಕಂಡ ಇಬ್ಬರು ಹೆಣ್ಣು ಮಕ್ಕಳು ಅದನ್ನು ಕಂಡದ್ದೇ ಮೊದಲು ಸಮಾಧಾನದಿಂದ ‘ರಕ್ತ ಒಸರುವುದು ನಿಂತ ಮೇಲೆ ಮತ್ತೆ ಶಾಲೆಗೆ ಬಾ’ ಎನ್ನುತ್ತಾರೆ. ಈಕೆ ಮತ್ತೆ ತೋರಿದಾಗ, ‘ಹಾಗಾದ್ರೆ ನೀನು ಶಾಲೆಗೆ ಬರೋ ಹಾಗೇ ಇಲ್ವಾ? ನಿಂಗೇನಾದ್ರೂ ಕಾಯಿಲೆ ಬಂದಿದ್ಯಾ?’ ಎಂದು ಒಬ್ಬಳು ಮುಗ್ಧವಾಗಿ ಕೇಳುತ್ತಾಳೆ. ಕಂಗಾಲಾದ ಹುಡುಗಿ ಶಾಲಾ ಶಿಕ್ಷಕಿ ಎದುರಾದಾಗ ಅತ್ತುಬಿಡುತ್ತಾಳೆ. ವಿಷಯ ಅರ್ಥವಾದ ಹೊತ್ತಿಗೆ ಶಿಕ್ಷಕಿ ತರಗತಿಗೆ ಹೊರಟು ನಿಂತಾಗ, ‘ಈ ವಿಷಯ ವನ್ನು ಮಕ್ಕಳಿಗೆ ಮೊದಲೇ ಹೇಳಬಹುದೇ?’

ಮತ್ತೊಬ್ಬ ಶಿಕ್ಷಕಿ ಕೇಳಿದ ಮಾತಿಗೆ ಮೊದಲೆ ‘ಮುಟ್ಟು ಆಗುವಾಗ, ಅದಕ್ಕೆ ಪೂರ್ವ ತಯಾರಿಯನ್ನು ಮೊದಲೇ ಮಾಡಿಕೊಳ್ಳಬೇಕು’ ಎನ್ನುತ್ತಾ ಮುಂದೆ ಸಾಗುತ್ತಾಳೆ. ಇಂಥ ಸನ್ನಿವೇಶ ಧುತ್ತೆಂದು ಎದುರಾದಾಗ ಗಾಬರಿ ಯಾಗಿ, ದಿನವಿಡೀ ಯೋಚಿಸುವುದಕ್ಕಿಂತ ಮಗಳು ಚಿಕ್ಕವಳಿದ್ದಾಗಲೇ ಮೊದಲ ಮುಟ್ಟಿನ ಕುರಿತು ತಾಯಿಯು ಅರಿವು ಮೂಡಿಸುವುದು ಸೂಕ್ತ.

ಆಂದೋಲನ ಡೆಸ್ಕ್

Recent Posts

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

14 mins ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

3 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

4 hours ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

7 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

7 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

13 hours ago