ಮಹಿಳೆ ಸಬಲೆ

ಆತ್ಮಹತ್ಯೆಯ ಬೆದರಿಕೆಗಳಿಗೆ ಹೆದರಬೇಕಿಲ್ಲ

-ಅಂಜಲಿ ರಾಮಣ್ಣ

ಅತುಲ್ ಸುಭಾಷ್ ಎನ್ನುವ ವ್ಯಕ್ತಿ ತನ್ನ ಹೆಂಡತಿ ಮತ್ತು ಆಕೆಯ ತಂದೆ-ತಾಯಿ ಕೊಡುತ್ತಿರುವ ಕಾಟವನ್ನು ತಾಳಲಾರದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎನ್ನುತ್ತಾ ನೂರಕ್ಕೂ ಹೆಚ್ಚು ಪುಟಗಳ ವಿವರವಾದ ಡೆಟ್‌ನೋಟ್ ಬರೆದಿಟ್ಟು, ಅದರ ವೀಡಿಯೋ ಕೂಡ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಆತ್ಮಹತ್ಯೆ ಮಾಡಿಕೊಂಡ. ಈ ವಿಷಯ ಇನ್ನೂ ಜನಮಾನಸದಲ್ಲಿ ಉಳಿದಿದೆ. ಮೇಲ್ನೋಟಕ್ಕೆ ಆತನ ಪತ್ನಿ ಅಪರಾಧಿಯಂತೆ ಕಾಣುತ್ತಿದ್ದಾಳೆ. ಹಾಗಾಗಿ ತನಿಖೆ ಆಗಬೇಕು ಎಂದು ಉಚ್ಚ ನ್ಯಾಯಾಲವೂ ಹೇಳಿತ್ತು. ಈಗ ಆಕೆಗೆ ಜಾಮೀನು ಸಿಕ್ಕಿದೆ.

ಈ ಘಟನೆಯ ನಂತರ ನೊಂದ ಗಂಡ ಎಂದು ಹೇಳಿಕೊಂಡು ಮತ್ತೊಬ್ಬ ವ್ಯಕ್ತಿಯೂ ಆತ್ಮಹತ್ಯೆ ಮಾಡಿಕೊಂಡ. ವಿಷಾದವೆಂದರೆ ನಿನ್ನ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೆಂಡತಿಯರನ್ನು ಬೆದರಿಸಲು ಗಂಡಂದಿರು ಇದನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುವ ಸಾಧ್ಯತೆ ಇಲ್ಲದಿಲ್ಲ.

ರೇವಮ್ಮನ ಅಣ್ಣನ ಮಗ ಜೈಲಿನಲ್ಲಿದ್ದಾನೆ. ಅವನ ಹೆಂಡತಿ ಜಾಮೀನು ಕೊಡಿಸಲು ಇವಳ ಬೆನ್ನು ಬಿದ್ದಿದ್ದಾಳೆ. ಆಗುವುದಿಲ್ಲ ಎಂದವಳಿಗೆ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎನ್ನುವ ಒತ್ತಡ ಹಾಕುತ್ತಿದ್ದಾಳೆ. ಇದರಿಂದ ಹೆದರಿದ ರೇವಮ್ಮ ಆಳುತ್ತಾ ಆಫೀಸಿಗೆ ಬಂದಿದ್ದಳು.

ನೀನೀಗ ನನ್ನ ಜೊತೆ ಓಡಿ ಬರದಿದ್ದರೆ, ಮದುವೆ ಆಗದಿದ್ದರೆ, ಮಲಗದಿದ್ದರೆ, ದುಡ್ಡು ಕೊಡದಿದ್ದರೆ, ಸಾಲ ಹಿಂದಿರುಗಿಸು ಅಂತ ಕೇಳಿದರೆ, ಬಾಡಿಗೆ ಮನೆ ಬಿಡಿಸಿದರೆ, ಕೆಲಸ ಕೊಡದಿದ್ದರೆ ಹೀಗೆ ಯಾವುದೇ ಕಾರಣಗಳನ್ನು ಕೊಟ್ಟು ‘ನಾನು ನಿನ್ನ ಹೆಸರನ್ನು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎನ್ನುವ ಬೆದರಿಕೆಗೆ ಬಗ್ಗುವ, ಹೆದರುವ ಅವಶ್ಯಕತೆ ಇಲ್ಲ.

ಕರ್ನಾಟಕ ಉಚ್ಚ ನ್ಯಾಯಾಲಯವು, ಕ್ರಿಮಿನಲ್ ಪಿಟಿಷನ್ ಸಂಖ್ಯೆ:7001/2019 ನೌಷಾದ್ ಅಹಮದ್ v/s ಕರ್ನಾಟಕ ರಾಜ್ಯ ಕಂಟೋನ್ಮೆಂಟ್ ಪೊಲೀಸ್ ಠಾಣೆ ಈ ಪ್ರಕರಣದಲ್ಲಿ, ಆತ್ಮಹತ್ಯೆ ಮಾಡಿಕೊಂಡವನು, ಹೆಸರು ಬರೆದಿದ್ದಾನೆ ಎನ್ನುವ ಕಾರಣಕ್ಕೆ ಆ ವ್ಯಕ್ತಿ ತಪ್ಪಿತಸ್ಥ ಎಂದಲ್ಲ. ಹಾಗೆಯೇ ಅವನನ್ನು ಅರೆಸ್ಟ್ ಮಾಡುವ ಅಗತ್ಯವೂ ಇಲ್ಲ ಆದರೆ ತನಿಖೆ ಮಾಡಬಹುದು ಅಷ್ಟೇ ಎನ್ನುವ ತೀರ್ಪು ಕೊಟ್ಟಿದೆ. ಸರಿಸುಮಾರು ಇದೆ ಅಭಿಪ್ರಾಯವನ್ನು ಸರ್ವೋಚ್ಚ ನ್ಯಾಯಾಲಯವು ಕ್ರಿಮಿನಲ್ ಅಪೀಲ್ ಸಂಖ್ಯೆ : 1388/2014 ಪಟೇಲ್ ಬಾಬುಬಾಯ್ ಮನೋಹರದಾಸ್ v/s ಗುಜರಾತ್ ಪ್ರಕರಣದಲ್ಲಿ ವ್ಯಕ್ತಪಡಿಸಿದೆ. ಹಾಗಾಗಿ ತಪ್ಪು ಮಾಡದೆ
ಇದ್ದಾಗ, ಪ್ರಚೋದನೆಯನ್ನೂ ನೀಡದಿದ್ದಾಗ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎನ್ನುವ ಬೆದರಿಕೆಗೆ ಹೆದರುವ ಅವಶ್ಯಕತೆ ಇಲ್ಲ ಮತ್ತು ಹಾಗೆ ಒತ್ತಡ ಹೇರುವವರ ಮೇಲೆ ಭಾರತೀಯ ನ್ಯಾಯ ಸಂಹಿತೆ 2023 ಇದರ ಸೆಕ್ಷನ್ 351ರ ಅಡಿಯಲ್ಲಿ FIR ಹಾಕಬಹುದಿರುತ್ತದೆ. ಈ ಅಪರಾಧಕ್ಕೆ 2ರಿಂದ 7 ವರ್ಷಗಳ ಜೈಲು ಶಿಕ್ಷೆ ಇರುತ್ತದೆ.

(ಲೇಖಕರು ಮಹಿಳಾ ಮತ್ತು ಮಕ್ಕಳ ಹಕ್ಕುಗಳ ವಕೀಲರಾಗಿದ್ದಾರೆ)

 

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

1 hour ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

3 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

4 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

9 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

9 hours ago