ಮಹಿಳೆ ಸಬಲೆ

ಕರೆದೊಡನೆ ಠಾಣೆಗೆ ಹೋಗಬೇಕಾಗಿಲ್ಲ

ಅಂಜಲಿ ರಾಮಣ್ಣ

ಕುಟುಂಬಗಳ ಒಪ್ಪಿಗೆಯಿಲ್ಲದೆ ಮದುವೆಯಾಗಿದ್ದ ಪೂಜಾಳಿಗೆ ಸಿಕ್ಕಿದ್ದು ಸೋಮಾರಿ ಗಂಡ. ಪೂಜಾಳ ವಿದ್ಯೆಯೂ ಪಿಯುಸಿಯಷ್ಟೇ. ಸಾಲ ತಂದು ಬಾಡಿಗೆ ಮನೆಯ ಕೋಣೆಯಲ್ಲಿಯೇ ಬ್ಯೂಟಿಪಾರ್ಲರ್ ನಡೆಸುತ್ತಾ ಸಂಸಾರ ನಡೆಸುತ್ತಿದ್ದಳು. ಇನ್ನು ಮೂರು ದಿನಗಳಲ್ಲಿ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಬರಬೇಕು ಎನ್ನುವ ಕರೆ ಬಂದಾಗ, ವಿವರ ಕೇಳಿದರೂ ಸಿಗದಿದ್ದಾಗ ಆಕೆ ಕಂಗಾಲಾಗಿ ಹೋದಳು.

ಶ್ರೀಮತಿ ಮನೆಯಲ್ಲಿಯೇ ಸೀರೆ ವ್ಯಾಪಾರ ಮಾಡುತ್ತಿದ್ದಳು. ಸೀರೆ ಸಪ್ಲೆ  ಮಾಡುತ್ತಿದ್ದವರ ಜೊತೆ ಹಣಕಾಸಿನ ವಿಷಯಕ್ಕೆ ವಾಗ್ವಾದವಾಗಿತ್ತು. ಅದಾದ ಒಂದೇ ವಾರದಲ್ಲಿ ಆತನ ಊರಿನ ಪೊಲೀಸ್ ಠಾಣೆಯಿಂದ ‘ನಿಮ್ಮ ಮೇಲೆ ಎಫ್‌ಐಆರ್ ಆಗಿದೆ ಠಾಣೆಗೆ ಹಾಜರಾಗಬೇಕು’ ಎಂದಿದ್ದ ಪತ್ರವೊಂದು ಕೈಸೇರಿದಾಗ ಮನೆಯವರು ಇವಳನ್ನೇ ನಿಂದಿಸಿ ಆತಂಕ ಒಡ್ಡಿದ್ದರು.

ಅವರು ವ್ಯಾಪಾರ ಮಾಡಿಕೊಂಡಿರಬಹುದು, ಯಾರಿಗೋ ಜಾಮೀನಾಗಿ ನಿಂತಿರಬಹುದು, ಬ್ಯಾಂಕ್ ಸಾಲಕ್ಕೆ ಶ್ಯೂರಿಟಿ ಹಾಕಿರಬಹುದು, ಜಗಳ ಬಿಡಿಸಲು, ರಾಜಿ ನ್ಯಾಯ ಮಾಡಲು ಹೋಗಿದ್ದಿರಬಹುದು, ಆಸ್ತಿ ಕೊಳ್ಳುವಿಕೆ, ಕುಟುಂಬದ ಆಸ್ತಿ ಪಾಲುದಾರಿಕೆ ವಿಷಯಗಳು, ಚೆಕ್ ಬೌನ್ಸ್ ಆಗಿರುವಾಗ, ಸಾಲವನ್ನು ಹಿಂದಿರುಗಿ ಕೇಳಿರುವಾಗ, ಸಾಲ ತೀರಿಸಲು ಆಗದೆಯಿದ್ದಾಗ, ಉದ್ಯೋಗಸ್ಥ ಸ್ಥಳದಲ್ಲಿಯೋ, ಮನೆ ಮಾಲೀಕರ ಜೊತೆಯಲ್ಲಿಯೋ ನಡೆದ ಜಗಳ, ಗಾಡಿ ಓಡಿಸುತ್ತಿರುವಾಗ ರಸ್ತೆಯಲ್ಲಿ ಅಡ್ಡ ಬಂದವರ ಜೊತೆಗಾದ ವಾದವೂ ಇರಬಹುದು, ಯಾವುದೇ ವಿಷಯದಲ್ಲಿ ವ್ಯಕ್ತಿಯ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದಾಗ ಆ ವ್ಯಕ್ತಿಯನ್ನು ಆರೋಪಿ ಎಂದು ಪರಿಗಣಿಸಿ ಅಥವಾ ಪರಿಗಣಿಸುವ ಮುನ್ನ ಅಥವಾ ಯಾವುದೇ ಪ್ರಕರಣದಲ್ಲಿ ವ್ಯಕ್ತಿಯೊಬ್ಬ ಸಾಕ್ಷಿ ಆಗಬಹುದೆಂದು ಪೊಲೀಸರಿಗೆ ಮನವರಿಕೆ ಆದಾಗ ಅಂತಹ ವ್ಯಕ್ತಿಯನ್ನು ವಿಚಾರಣೆ ನಡೆಸುವ, ವಿವರ ಪಡೆದುಕೊಳ್ಳುವ ಅಧಿಕಾರವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ೨೦೨೩ ಸೆಕ್ಷನ್ ೩೫ರ ಅಡಿಯಲ್ಲಿ ಪೊಲೀಸರಿಗೆ ನೀಡಲಾಗಿದೆ. ರಿಟ್ ದಾವೆ ೧೫೧೨೫/೨೦೨೪ ಇದರ ವಿಚಾರಣೆಯಲ್ಲಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯವು ನೀಡಿರುವ ಆದೇಶದನ್ವಯ ಪೊಲೀಸರು ವ್ಯಕ್ತಿಯನ್ನು ವಿಚಾರಣೆಗೆ ಕರೆಯುವಾಗ ಯಾವ ಕಾರಣಕ್ಕಾಗಿ, ಯಾವ ಆರೋಪದ ಮೇರೆಗೆ ಅಥವಾ ಸಾಕ್ಷಿದಾರರಾಗಿ ಕರೆಯಲಾಗುತ್ತಿದೆ, ಆ ಘಟನೆ ಎಂದು, ಎಲ್ಲಿ ನಡೆದಿದೆ, ದೂರುದಾರರು ಯಾರು, ಎಫ್‌ಐಆರ್ ಸಂಖ್ಯೆ ಮತ್ತು ದಿನಾಂಕ ಯಾವುದು, ಯಾವ ವ್ಯಾಪ್ತಿ ಪ್ರದೇಶದ ಠಾಣೆಯಲ್ಲಿ ದೂರು ದಾಖಲಾಗಿದೆ. ಅದರವಿಳಾಸ ಯಾವುದು ಎನ್ನುವ ವಿವರಗಳನ್ನು ಮತ್ತು ಎಫ್‌ಐಆರ್ ಪ್ರತಿಯನ್ನೂ ರಿಜಿಸ್ಟರ್ಡ್ ಅಂಚೆಯ ಮೂಲಕವೇ ನೀಡಬೇಕು. ವ್ಯಕ್ತಿಯನ್ನು ಫೋನ್ ಕರೆ, ವಾಟ್ಸಾಪ್ ಸಂದೇಶ, ಇ-ಮೇಲ್, ಪತ್ರ ಮೂಲಕ ವಿಚಾರಣೆಗಾಗಿ ಬರಬೇಕು ಎಂದು ಹೇಳುವಾಗ ವಿವರಣೆ ನೀಡದಿದ್ದರೆ ಕರೆ ಬಂದ ವ್ಯಕ್ತಿಯು ಠಾಣೆಗೆ ಹೋಗುವುದನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಬಹುದು. ವಿವರಗಳು ಇದ್ದಾಗ್ಯೂ ನೋಟಿಸನ್ನು ಕಡೆಗಣಿಸಿದರೆ ಆಗ ಪೊಲೀಸರು ಆ ವ್ಯಕ್ತಿಯನ್ನು ಬಂಽಸಬಹುದಾಗಿರುತ್ತದೆ. (ಲೇಖಕರು ಮಹಿಳೆ ಮತ್ತು ಮಕ್ಕಳ ಹಕ್ಕುಗಳ ವಕೀಲರು)

ಆಂದೋಲನ ಡೆಸ್ಕ್

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

10 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

11 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

12 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

12 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

12 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

13 hours ago