ಮಹಿಳೆ ಸಬಲೆ

ಕರೆದೊಡನೆ ಠಾಣೆಗೆ ಹೋಗಬೇಕಾಗಿಲ್ಲ

ಅಂಜಲಿ ರಾಮಣ್ಣ

ಕುಟುಂಬಗಳ ಒಪ್ಪಿಗೆಯಿಲ್ಲದೆ ಮದುವೆಯಾಗಿದ್ದ ಪೂಜಾಳಿಗೆ ಸಿಕ್ಕಿದ್ದು ಸೋಮಾರಿ ಗಂಡ. ಪೂಜಾಳ ವಿದ್ಯೆಯೂ ಪಿಯುಸಿಯಷ್ಟೇ. ಸಾಲ ತಂದು ಬಾಡಿಗೆ ಮನೆಯ ಕೋಣೆಯಲ್ಲಿಯೇ ಬ್ಯೂಟಿಪಾರ್ಲರ್ ನಡೆಸುತ್ತಾ ಸಂಸಾರ ನಡೆಸುತ್ತಿದ್ದಳು. ಇನ್ನು ಮೂರು ದಿನಗಳಲ್ಲಿ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಬರಬೇಕು ಎನ್ನುವ ಕರೆ ಬಂದಾಗ, ವಿವರ ಕೇಳಿದರೂ ಸಿಗದಿದ್ದಾಗ ಆಕೆ ಕಂಗಾಲಾಗಿ ಹೋದಳು.

ಶ್ರೀಮತಿ ಮನೆಯಲ್ಲಿಯೇ ಸೀರೆ ವ್ಯಾಪಾರ ಮಾಡುತ್ತಿದ್ದಳು. ಸೀರೆ ಸಪ್ಲೆ  ಮಾಡುತ್ತಿದ್ದವರ ಜೊತೆ ಹಣಕಾಸಿನ ವಿಷಯಕ್ಕೆ ವಾಗ್ವಾದವಾಗಿತ್ತು. ಅದಾದ ಒಂದೇ ವಾರದಲ್ಲಿ ಆತನ ಊರಿನ ಪೊಲೀಸ್ ಠಾಣೆಯಿಂದ ‘ನಿಮ್ಮ ಮೇಲೆ ಎಫ್‌ಐಆರ್ ಆಗಿದೆ ಠಾಣೆಗೆ ಹಾಜರಾಗಬೇಕು’ ಎಂದಿದ್ದ ಪತ್ರವೊಂದು ಕೈಸೇರಿದಾಗ ಮನೆಯವರು ಇವಳನ್ನೇ ನಿಂದಿಸಿ ಆತಂಕ ಒಡ್ಡಿದ್ದರು.

ಅವರು ವ್ಯಾಪಾರ ಮಾಡಿಕೊಂಡಿರಬಹುದು, ಯಾರಿಗೋ ಜಾಮೀನಾಗಿ ನಿಂತಿರಬಹುದು, ಬ್ಯಾಂಕ್ ಸಾಲಕ್ಕೆ ಶ್ಯೂರಿಟಿ ಹಾಕಿರಬಹುದು, ಜಗಳ ಬಿಡಿಸಲು, ರಾಜಿ ನ್ಯಾಯ ಮಾಡಲು ಹೋಗಿದ್ದಿರಬಹುದು, ಆಸ್ತಿ ಕೊಳ್ಳುವಿಕೆ, ಕುಟುಂಬದ ಆಸ್ತಿ ಪಾಲುದಾರಿಕೆ ವಿಷಯಗಳು, ಚೆಕ್ ಬೌನ್ಸ್ ಆಗಿರುವಾಗ, ಸಾಲವನ್ನು ಹಿಂದಿರುಗಿ ಕೇಳಿರುವಾಗ, ಸಾಲ ತೀರಿಸಲು ಆಗದೆಯಿದ್ದಾಗ, ಉದ್ಯೋಗಸ್ಥ ಸ್ಥಳದಲ್ಲಿಯೋ, ಮನೆ ಮಾಲೀಕರ ಜೊತೆಯಲ್ಲಿಯೋ ನಡೆದ ಜಗಳ, ಗಾಡಿ ಓಡಿಸುತ್ತಿರುವಾಗ ರಸ್ತೆಯಲ್ಲಿ ಅಡ್ಡ ಬಂದವರ ಜೊತೆಗಾದ ವಾದವೂ ಇರಬಹುದು, ಯಾವುದೇ ವಿಷಯದಲ್ಲಿ ವ್ಯಕ್ತಿಯ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದಾಗ ಆ ವ್ಯಕ್ತಿಯನ್ನು ಆರೋಪಿ ಎಂದು ಪರಿಗಣಿಸಿ ಅಥವಾ ಪರಿಗಣಿಸುವ ಮುನ್ನ ಅಥವಾ ಯಾವುದೇ ಪ್ರಕರಣದಲ್ಲಿ ವ್ಯಕ್ತಿಯೊಬ್ಬ ಸಾಕ್ಷಿ ಆಗಬಹುದೆಂದು ಪೊಲೀಸರಿಗೆ ಮನವರಿಕೆ ಆದಾಗ ಅಂತಹ ವ್ಯಕ್ತಿಯನ್ನು ವಿಚಾರಣೆ ನಡೆಸುವ, ವಿವರ ಪಡೆದುಕೊಳ್ಳುವ ಅಧಿಕಾರವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ೨೦೨೩ ಸೆಕ್ಷನ್ ೩೫ರ ಅಡಿಯಲ್ಲಿ ಪೊಲೀಸರಿಗೆ ನೀಡಲಾಗಿದೆ. ರಿಟ್ ದಾವೆ ೧೫೧೨೫/೨೦೨೪ ಇದರ ವಿಚಾರಣೆಯಲ್ಲಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯವು ನೀಡಿರುವ ಆದೇಶದನ್ವಯ ಪೊಲೀಸರು ವ್ಯಕ್ತಿಯನ್ನು ವಿಚಾರಣೆಗೆ ಕರೆಯುವಾಗ ಯಾವ ಕಾರಣಕ್ಕಾಗಿ, ಯಾವ ಆರೋಪದ ಮೇರೆಗೆ ಅಥವಾ ಸಾಕ್ಷಿದಾರರಾಗಿ ಕರೆಯಲಾಗುತ್ತಿದೆ, ಆ ಘಟನೆ ಎಂದು, ಎಲ್ಲಿ ನಡೆದಿದೆ, ದೂರುದಾರರು ಯಾರು, ಎಫ್‌ಐಆರ್ ಸಂಖ್ಯೆ ಮತ್ತು ದಿನಾಂಕ ಯಾವುದು, ಯಾವ ವ್ಯಾಪ್ತಿ ಪ್ರದೇಶದ ಠಾಣೆಯಲ್ಲಿ ದೂರು ದಾಖಲಾಗಿದೆ. ಅದರವಿಳಾಸ ಯಾವುದು ಎನ್ನುವ ವಿವರಗಳನ್ನು ಮತ್ತು ಎಫ್‌ಐಆರ್ ಪ್ರತಿಯನ್ನೂ ರಿಜಿಸ್ಟರ್ಡ್ ಅಂಚೆಯ ಮೂಲಕವೇ ನೀಡಬೇಕು. ವ್ಯಕ್ತಿಯನ್ನು ಫೋನ್ ಕರೆ, ವಾಟ್ಸಾಪ್ ಸಂದೇಶ, ಇ-ಮೇಲ್, ಪತ್ರ ಮೂಲಕ ವಿಚಾರಣೆಗಾಗಿ ಬರಬೇಕು ಎಂದು ಹೇಳುವಾಗ ವಿವರಣೆ ನೀಡದಿದ್ದರೆ ಕರೆ ಬಂದ ವ್ಯಕ್ತಿಯು ಠಾಣೆಗೆ ಹೋಗುವುದನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಬಹುದು. ವಿವರಗಳು ಇದ್ದಾಗ್ಯೂ ನೋಟಿಸನ್ನು ಕಡೆಗಣಿಸಿದರೆ ಆಗ ಪೊಲೀಸರು ಆ ವ್ಯಕ್ತಿಯನ್ನು ಬಂಽಸಬಹುದಾಗಿರುತ್ತದೆ. (ಲೇಖಕರು ಮಹಿಳೆ ಮತ್ತು ಮಕ್ಕಳ ಹಕ್ಕುಗಳ ವಕೀಲರು)

ಆಂದೋಲನ ಡೆಸ್ಕ್

Recent Posts

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

44 mins ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

3 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

3 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

5 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

5 hours ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

5 hours ago