ಅಂಜಲಿ ರಾಮಣ್ಣ
ಕುಟುಂಬಗಳ ಒಪ್ಪಿಗೆಯಿಲ್ಲದೆ ಮದುವೆಯಾಗಿದ್ದ ಪೂಜಾಳಿಗೆ ಸಿಕ್ಕಿದ್ದು ಸೋಮಾರಿ ಗಂಡ. ಪೂಜಾಳ ವಿದ್ಯೆಯೂ ಪಿಯುಸಿಯಷ್ಟೇ. ಸಾಲ ತಂದು ಬಾಡಿಗೆ ಮನೆಯ ಕೋಣೆಯಲ್ಲಿಯೇ ಬ್ಯೂಟಿಪಾರ್ಲರ್ ನಡೆಸುತ್ತಾ ಸಂಸಾರ ನಡೆಸುತ್ತಿದ್ದಳು. ಇನ್ನು ಮೂರು ದಿನಗಳಲ್ಲಿ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಬರಬೇಕು ಎನ್ನುವ ಕರೆ ಬಂದಾಗ, ವಿವರ ಕೇಳಿದರೂ ಸಿಗದಿದ್ದಾಗ ಆಕೆ ಕಂಗಾಲಾಗಿ ಹೋದಳು.
ಶ್ರೀಮತಿ ಮನೆಯಲ್ಲಿಯೇ ಸೀರೆ ವ್ಯಾಪಾರ ಮಾಡುತ್ತಿದ್ದಳು. ಸೀರೆ ಸಪ್ಲೆ ಮಾಡುತ್ತಿದ್ದವರ ಜೊತೆ ಹಣಕಾಸಿನ ವಿಷಯಕ್ಕೆ ವಾಗ್ವಾದವಾಗಿತ್ತು. ಅದಾದ ಒಂದೇ ವಾರದಲ್ಲಿ ಆತನ ಊರಿನ ಪೊಲೀಸ್ ಠಾಣೆಯಿಂದ ‘ನಿಮ್ಮ ಮೇಲೆ ಎಫ್ಐಆರ್ ಆಗಿದೆ ಠಾಣೆಗೆ ಹಾಜರಾಗಬೇಕು’ ಎಂದಿದ್ದ ಪತ್ರವೊಂದು ಕೈಸೇರಿದಾಗ ಮನೆಯವರು ಇವಳನ್ನೇ ನಿಂದಿಸಿ ಆತಂಕ ಒಡ್ಡಿದ್ದರು.
ಅವರು ವ್ಯಾಪಾರ ಮಾಡಿಕೊಂಡಿರಬಹುದು, ಯಾರಿಗೋ ಜಾಮೀನಾಗಿ ನಿಂತಿರಬಹುದು, ಬ್ಯಾಂಕ್ ಸಾಲಕ್ಕೆ ಶ್ಯೂರಿಟಿ ಹಾಕಿರಬಹುದು, ಜಗಳ ಬಿಡಿಸಲು, ರಾಜಿ ನ್ಯಾಯ ಮಾಡಲು ಹೋಗಿದ್ದಿರಬಹುದು, ಆಸ್ತಿ ಕೊಳ್ಳುವಿಕೆ, ಕುಟುಂಬದ ಆಸ್ತಿ ಪಾಲುದಾರಿಕೆ ವಿಷಯಗಳು, ಚೆಕ್ ಬೌನ್ಸ್ ಆಗಿರುವಾಗ, ಸಾಲವನ್ನು ಹಿಂದಿರುಗಿ ಕೇಳಿರುವಾಗ, ಸಾಲ ತೀರಿಸಲು ಆಗದೆಯಿದ್ದಾಗ, ಉದ್ಯೋಗಸ್ಥ ಸ್ಥಳದಲ್ಲಿಯೋ, ಮನೆ ಮಾಲೀಕರ ಜೊತೆಯಲ್ಲಿಯೋ ನಡೆದ ಜಗಳ, ಗಾಡಿ ಓಡಿಸುತ್ತಿರುವಾಗ ರಸ್ತೆಯಲ್ಲಿ ಅಡ್ಡ ಬಂದವರ ಜೊತೆಗಾದ ವಾದವೂ ಇರಬಹುದು, ಯಾವುದೇ ವಿಷಯದಲ್ಲಿ ವ್ಯಕ್ತಿಯ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದಾಗ ಆ ವ್ಯಕ್ತಿಯನ್ನು ಆರೋಪಿ ಎಂದು ಪರಿಗಣಿಸಿ ಅಥವಾ ಪರಿಗಣಿಸುವ ಮುನ್ನ ಅಥವಾ ಯಾವುದೇ ಪ್ರಕರಣದಲ್ಲಿ ವ್ಯಕ್ತಿಯೊಬ್ಬ ಸಾಕ್ಷಿ ಆಗಬಹುದೆಂದು ಪೊಲೀಸರಿಗೆ ಮನವರಿಕೆ ಆದಾಗ ಅಂತಹ ವ್ಯಕ್ತಿಯನ್ನು ವಿಚಾರಣೆ ನಡೆಸುವ, ವಿವರ ಪಡೆದುಕೊಳ್ಳುವ ಅಧಿಕಾರವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ೨೦೨೩ ಸೆಕ್ಷನ್ ೩೫ರ ಅಡಿಯಲ್ಲಿ ಪೊಲೀಸರಿಗೆ ನೀಡಲಾಗಿದೆ. ರಿಟ್ ದಾವೆ ೧೫೧೨೫/೨೦೨೪ ಇದರ ವಿಚಾರಣೆಯಲ್ಲಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯವು ನೀಡಿರುವ ಆದೇಶದನ್ವಯ ಪೊಲೀಸರು ವ್ಯಕ್ತಿಯನ್ನು ವಿಚಾರಣೆಗೆ ಕರೆಯುವಾಗ ಯಾವ ಕಾರಣಕ್ಕಾಗಿ, ಯಾವ ಆರೋಪದ ಮೇರೆಗೆ ಅಥವಾ ಸಾಕ್ಷಿದಾರರಾಗಿ ಕರೆಯಲಾಗುತ್ತಿದೆ, ಆ ಘಟನೆ ಎಂದು, ಎಲ್ಲಿ ನಡೆದಿದೆ, ದೂರುದಾರರು ಯಾರು, ಎಫ್ಐಆರ್ ಸಂಖ್ಯೆ ಮತ್ತು ದಿನಾಂಕ ಯಾವುದು, ಯಾವ ವ್ಯಾಪ್ತಿ ಪ್ರದೇಶದ ಠಾಣೆಯಲ್ಲಿ ದೂರು ದಾಖಲಾಗಿದೆ. ಅದರವಿಳಾಸ ಯಾವುದು ಎನ್ನುವ ವಿವರಗಳನ್ನು ಮತ್ತು ಎಫ್ಐಆರ್ ಪ್ರತಿಯನ್ನೂ ರಿಜಿಸ್ಟರ್ಡ್ ಅಂಚೆಯ ಮೂಲಕವೇ ನೀಡಬೇಕು. ವ್ಯಕ್ತಿಯನ್ನು ಫೋನ್ ಕರೆ, ವಾಟ್ಸಾಪ್ ಸಂದೇಶ, ಇ-ಮೇಲ್, ಪತ್ರ ಮೂಲಕ ವಿಚಾರಣೆಗಾಗಿ ಬರಬೇಕು ಎಂದು ಹೇಳುವಾಗ ವಿವರಣೆ ನೀಡದಿದ್ದರೆ ಕರೆ ಬಂದ ವ್ಯಕ್ತಿಯು ಠಾಣೆಗೆ ಹೋಗುವುದನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಬಹುದು. ವಿವರಗಳು ಇದ್ದಾಗ್ಯೂ ನೋಟಿಸನ್ನು ಕಡೆಗಣಿಸಿದರೆ ಆಗ ಪೊಲೀಸರು ಆ ವ್ಯಕ್ತಿಯನ್ನು ಬಂಽಸಬಹುದಾಗಿರುತ್ತದೆ. (ಲೇಖಕರು ಮಹಿಳೆ ಮತ್ತು ಮಕ್ಕಳ ಹಕ್ಕುಗಳ ವಕೀಲರು)
ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…
ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು…
ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ…
ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್ಗಳು ಇವೆ. ಈ…
ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…
ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…