ಮಹಿಳೆ ಸಬಲೆ

ಕರೆದೊಡನೆ ಠಾಣೆಗೆ ಹೋಗಬೇಕಾಗಿಲ್ಲ

ಅಂಜಲಿ ರಾಮಣ್ಣ

ಕುಟುಂಬಗಳ ಒಪ್ಪಿಗೆಯಿಲ್ಲದೆ ಮದುವೆಯಾಗಿದ್ದ ಪೂಜಾಳಿಗೆ ಸಿಕ್ಕಿದ್ದು ಸೋಮಾರಿ ಗಂಡ. ಪೂಜಾಳ ವಿದ್ಯೆಯೂ ಪಿಯುಸಿಯಷ್ಟೇ. ಸಾಲ ತಂದು ಬಾಡಿಗೆ ಮನೆಯ ಕೋಣೆಯಲ್ಲಿಯೇ ಬ್ಯೂಟಿಪಾರ್ಲರ್ ನಡೆಸುತ್ತಾ ಸಂಸಾರ ನಡೆಸುತ್ತಿದ್ದಳು. ಇನ್ನು ಮೂರು ದಿನಗಳಲ್ಲಿ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಬರಬೇಕು ಎನ್ನುವ ಕರೆ ಬಂದಾಗ, ವಿವರ ಕೇಳಿದರೂ ಸಿಗದಿದ್ದಾಗ ಆಕೆ ಕಂಗಾಲಾಗಿ ಹೋದಳು.

ಶ್ರೀಮತಿ ಮನೆಯಲ್ಲಿಯೇ ಸೀರೆ ವ್ಯಾಪಾರ ಮಾಡುತ್ತಿದ್ದಳು. ಸೀರೆ ಸಪ್ಲೆ  ಮಾಡುತ್ತಿದ್ದವರ ಜೊತೆ ಹಣಕಾಸಿನ ವಿಷಯಕ್ಕೆ ವಾಗ್ವಾದವಾಗಿತ್ತು. ಅದಾದ ಒಂದೇ ವಾರದಲ್ಲಿ ಆತನ ಊರಿನ ಪೊಲೀಸ್ ಠಾಣೆಯಿಂದ ‘ನಿಮ್ಮ ಮೇಲೆ ಎಫ್‌ಐಆರ್ ಆಗಿದೆ ಠಾಣೆಗೆ ಹಾಜರಾಗಬೇಕು’ ಎಂದಿದ್ದ ಪತ್ರವೊಂದು ಕೈಸೇರಿದಾಗ ಮನೆಯವರು ಇವಳನ್ನೇ ನಿಂದಿಸಿ ಆತಂಕ ಒಡ್ಡಿದ್ದರು.

ಅವರು ವ್ಯಾಪಾರ ಮಾಡಿಕೊಂಡಿರಬಹುದು, ಯಾರಿಗೋ ಜಾಮೀನಾಗಿ ನಿಂತಿರಬಹುದು, ಬ್ಯಾಂಕ್ ಸಾಲಕ್ಕೆ ಶ್ಯೂರಿಟಿ ಹಾಕಿರಬಹುದು, ಜಗಳ ಬಿಡಿಸಲು, ರಾಜಿ ನ್ಯಾಯ ಮಾಡಲು ಹೋಗಿದ್ದಿರಬಹುದು, ಆಸ್ತಿ ಕೊಳ್ಳುವಿಕೆ, ಕುಟುಂಬದ ಆಸ್ತಿ ಪಾಲುದಾರಿಕೆ ವಿಷಯಗಳು, ಚೆಕ್ ಬೌನ್ಸ್ ಆಗಿರುವಾಗ, ಸಾಲವನ್ನು ಹಿಂದಿರುಗಿ ಕೇಳಿರುವಾಗ, ಸಾಲ ತೀರಿಸಲು ಆಗದೆಯಿದ್ದಾಗ, ಉದ್ಯೋಗಸ್ಥ ಸ್ಥಳದಲ್ಲಿಯೋ, ಮನೆ ಮಾಲೀಕರ ಜೊತೆಯಲ್ಲಿಯೋ ನಡೆದ ಜಗಳ, ಗಾಡಿ ಓಡಿಸುತ್ತಿರುವಾಗ ರಸ್ತೆಯಲ್ಲಿ ಅಡ್ಡ ಬಂದವರ ಜೊತೆಗಾದ ವಾದವೂ ಇರಬಹುದು, ಯಾವುದೇ ವಿಷಯದಲ್ಲಿ ವ್ಯಕ್ತಿಯ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದಾಗ ಆ ವ್ಯಕ್ತಿಯನ್ನು ಆರೋಪಿ ಎಂದು ಪರಿಗಣಿಸಿ ಅಥವಾ ಪರಿಗಣಿಸುವ ಮುನ್ನ ಅಥವಾ ಯಾವುದೇ ಪ್ರಕರಣದಲ್ಲಿ ವ್ಯಕ್ತಿಯೊಬ್ಬ ಸಾಕ್ಷಿ ಆಗಬಹುದೆಂದು ಪೊಲೀಸರಿಗೆ ಮನವರಿಕೆ ಆದಾಗ ಅಂತಹ ವ್ಯಕ್ತಿಯನ್ನು ವಿಚಾರಣೆ ನಡೆಸುವ, ವಿವರ ಪಡೆದುಕೊಳ್ಳುವ ಅಧಿಕಾರವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ೨೦೨೩ ಸೆಕ್ಷನ್ ೩೫ರ ಅಡಿಯಲ್ಲಿ ಪೊಲೀಸರಿಗೆ ನೀಡಲಾಗಿದೆ. ರಿಟ್ ದಾವೆ ೧೫೧೨೫/೨೦೨೪ ಇದರ ವಿಚಾರಣೆಯಲ್ಲಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯವು ನೀಡಿರುವ ಆದೇಶದನ್ವಯ ಪೊಲೀಸರು ವ್ಯಕ್ತಿಯನ್ನು ವಿಚಾರಣೆಗೆ ಕರೆಯುವಾಗ ಯಾವ ಕಾರಣಕ್ಕಾಗಿ, ಯಾವ ಆರೋಪದ ಮೇರೆಗೆ ಅಥವಾ ಸಾಕ್ಷಿದಾರರಾಗಿ ಕರೆಯಲಾಗುತ್ತಿದೆ, ಆ ಘಟನೆ ಎಂದು, ಎಲ್ಲಿ ನಡೆದಿದೆ, ದೂರುದಾರರು ಯಾರು, ಎಫ್‌ಐಆರ್ ಸಂಖ್ಯೆ ಮತ್ತು ದಿನಾಂಕ ಯಾವುದು, ಯಾವ ವ್ಯಾಪ್ತಿ ಪ್ರದೇಶದ ಠಾಣೆಯಲ್ಲಿ ದೂರು ದಾಖಲಾಗಿದೆ. ಅದರವಿಳಾಸ ಯಾವುದು ಎನ್ನುವ ವಿವರಗಳನ್ನು ಮತ್ತು ಎಫ್‌ಐಆರ್ ಪ್ರತಿಯನ್ನೂ ರಿಜಿಸ್ಟರ್ಡ್ ಅಂಚೆಯ ಮೂಲಕವೇ ನೀಡಬೇಕು. ವ್ಯಕ್ತಿಯನ್ನು ಫೋನ್ ಕರೆ, ವಾಟ್ಸಾಪ್ ಸಂದೇಶ, ಇ-ಮೇಲ್, ಪತ್ರ ಮೂಲಕ ವಿಚಾರಣೆಗಾಗಿ ಬರಬೇಕು ಎಂದು ಹೇಳುವಾಗ ವಿವರಣೆ ನೀಡದಿದ್ದರೆ ಕರೆ ಬಂದ ವ್ಯಕ್ತಿಯು ಠಾಣೆಗೆ ಹೋಗುವುದನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಬಹುದು. ವಿವರಗಳು ಇದ್ದಾಗ್ಯೂ ನೋಟಿಸನ್ನು ಕಡೆಗಣಿಸಿದರೆ ಆಗ ಪೊಲೀಸರು ಆ ವ್ಯಕ್ತಿಯನ್ನು ಬಂಽಸಬಹುದಾಗಿರುತ್ತದೆ. (ಲೇಖಕರು ಮಹಿಳೆ ಮತ್ತು ಮಕ್ಕಳ ಹಕ್ಕುಗಳ ವಕೀಲರು)

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

2 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

5 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

9 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

11 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

12 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

14 hours ago