ಮಹಿಳೆ ಸಬಲೆ

ಹೆಣ್ಣೆಂದು ಮೂಗು ಮುರಿಯುವ ಕಾಲ ಮುಗಿಯಿತು.

• ಮಹೇಂದ್ರ ಹಸಗೂಲಿ

ಹೆಣ್ಣು ಈ ಜಗದ ಕಣ್ಣು ಮಾತ್ರವಲ್ಲ ಕುಟುಂಬದ ಕಣ್ಣು. ಜಗತ್ತಿನಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸುವಂತಾಗಿದ್ದರೂ ಹೆಣ್ಣಿನ ಬಗೆಗಿನ ಕೀಳರಿಮೆ ಎಲ್ಲೋ ಒಂದು ಕಡೆ ಜೀವಂತ ಇದೆ ಅನಿಸುತ್ತದೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಇಂತಹ ಮನಸ್ಥಿತಿ ಕಡಿಮೆಯಾಗಬೇಕಿದೆ.

ಸರ್ಕಾರ ಭ್ರೂಣ ಹತ್ಯೆ ತಡೆ ಕಾಯ್ದೆ ಜಾರಿಗೊಳಿಸದಿದ್ದರೆ ಇಂದು ಹೆಣ್ಣುಮಕ್ಕಳ ಪ್ರಮಾಣ ಕುಸಿದು ಪ್ರತಿ ಸಾವಿರ ಪುರುಷರಿಗೆ ಕೇವಲ 400 ಮಹಿಳೆಯರ ಸರಾಸರಿಯೂ ಸಿಗುತ್ತಿರಲಿಲ್ಲ. ಇಂದಿಗೂ ಹೆಣ್ಣು ಮಗು ಹುಟ್ಟಿದರೆ ಮೂಗು ಮುರಿಯುವ ಜನರೇ ಹೆಚ್ಚು ಹೆಣ್ಣಿಗೆ ಹೆಣ್ಣೆ ಶತ್ರು ಎಂಬಂತೆ ಮಹಿಳೆಯರಿಗೇ ಈ ಕುರಿತಂತೆ ಹೆಚ್ಚು ತಾತ್ಸಾರ ಮನೋಭಾವನೆ ಇರುವುದು ವಿಪರ್ಯಾಸವೇ ಸರಿ.

ಮಹಿಳೆ ಪುರುಷರಿಗಿಂತ ಯಾವುದರಲ್ಲಿಯೂ ಕಡಿಮೆ ಇಲ್ಲ. ರಾಜಕೀಯ, ಕ್ರೀಡೆ, ಶಿಕ್ಷಣ ಕ್ಷೇತ್ರ, ಆರೋಗ್ಯ ಕ್ಷೇತ್ರ, ರಕ್ಷಣಾ ಕ್ಷೇತ್ರ, ಬಸ್, ಲಾರಿ, ಕಾರು, ಆಟೋ ಚಾಲಕರಾಗಿಯೂ ಮಹಿಳೆಯ ಪಾತ್ರ ಹೆಚ್ಚಾಗಿದೆ. ಸಂಕಷ್ಟ ಬಂದಾಗ ಹೆಣ್ಣು ದೇವತೆಗಳ ಮೊರೆ ಹೋಗುವ ನಾವು ಹೆಣ್ಣು ಹುಟ್ಟಿದಾಗ ದೇವತೆ ಹುಟ್ಟಿದ್ದಾಳೆ ಎಂದು ಸಂತಸ ಪಡುವುದಿಲ್ಲ. ಸಮಾಜದಲ್ಲಿ ಗಂಡಿನಷ್ಟೇ ಸಮಾನವಾದ ಹಕ್ಕು ಹೆಣ್ಣಿಗೂ ಇದೆ. ಹೆಣ್ಣು ಪ್ರತಿಯೊಬ್ಬರ ಬದುಕಿನಲ್ಲಿ ತಾಯಿ, ಅಕ್ಕ, ತಂಗಿ, ಮಡದಿ ಹೀಗೆ ನಾನಾ ಪಾತ್ರಗಳನ್ನು ನಿಭಾಯಿಸುತ್ತಾಳೆ. ಕಿತ್ತೂರು ರಾಣಿ ಚೆನ್ನಮ್ಮ, ಒನಕೆ ಓಬವ್ವ, ಝಾನ್ಸಿರಾಣಿ ಲಕ್ಷ್ಮಿ ಭಾಯಿ, ಮದರ್ ತೆರೆಸಾ, ಕಲ್ಪನಾ ಚಾವ್ಹಾ, ಕಿರಣ್ ಬೇಡಿ, ಕರ್ಣ೦ ಮಲ್ಲೇಶ್ವರಿ, ಪಿ.ಟಿ.ಉಷಾ, ಪಿ.ವಿ.ಸಿಂಧು ಮುಂತಾದ ಮಹಿಳೆಯರು ಸಾಧನೆ ಮಾಡಿದ್ದಾರೆ. ಮೊದಲ ಮಹಿಳಾ ರಾಷ್ಟ್ರಪತಿ ಪ್ರತಿಭಾ ದೇವಿ ಸಿಂಗ್ ಪಾಟೀಲ್, ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ, ಮುಖ್ಯಮಂತ್ರಿ ಜಯಲಲಿತಾ, ಮೊದಲ ಮಹಿಳಾ ಸ್ಪೀಕರ್, ಸಚಿವೆಯಾಗಿದ್ದ ಗುಂಡ್ಲುಪೇಟೆ ತಾಲ್ಲೂಕಿನ ಕೆ.ಎಸ್.ನಾಗರತ್ನಮ್ಮ ಅವರ ಸಾಧನೆ ಇಂದಿಗೂ ಅನನ್ಯ.

ಹೀಗೆ ಮಹಿಳೆ ಕಾಲಿಡದ ಕ್ಷೇತ್ರವಿಲ್ಲ ಎಂಬಂತೆ ಸಾಕಷ್ಟು ಸಾಧನೆಗಳನ್ನು ಮಹಿಳೆ ಮಾಡಿದ್ದಾಳೆ. ಗಂಡಿಗಿಂತ ತಾನೇನೂ ಕಡಿಮೆಯಿಲ್ಲ ಎಂಬುದನ್ನು ಪುರುಷ ಪ್ರಧಾನ ಸಮಾಜದಲ್ಲಿ ನಿರೂಪಿಸಿದ್ದಾಳೆ. ವಾಯುಪಡೆಯ ಪೈಲೆಟ್ ಲಿಫ್ಟಿನೆಂಟ್ ಅವನಿ ಚತುರ್ವೇಧಿ, ಭಾರತೀಯ ವಿದೇಶಾಂಗ ಸೇವಾ ಅಧಿಕಾರಿ ಸ್ನೇಹ ದುಬೆ, ಮುಖ್ಯ ಸಂರಕ್ಷಣಾ ವಿಜ್ಞಾನಿ ಬೆಂಗಳೂರು ವನ್ಯಜೀವಿ ಅಧ್ಯಯನ ಕೇಂದ್ರದ ಕೃತಿ ಕಾರಂತ್, ನಿರ್ದೇಶಕಿ, ಪರಿಸರ ಸಂರಕ್ಷಣೆಗಾಗಿ ಶ್ರಮಿಸುತ್ತಿರುವ ತುಳಸಿಗೌಡ, ಅಗ್ನಿ 4 ಮತ್ತು 5 ಯೋಜನಾ ನಿರ್ದೇಶಕಿಯಾಗಿದ್ದ ಟೆಸ್ಸಿ ಥಾಮಸ್. ಭಾರತೀಯ ಸಾಹಸೋದ್ಯಮ ಬಂಡವಾಳರಾಗಿ ಕಲಾರಿ ಕ್ಯಾಪಿಟಲ್ ಸಂಸ್ಥಾಪಕಿ, ವ್ಯವಸ್ಥಾಪಕ ನಿರ್ದೇಶಕಿ ವಾಣಿಕೋಲ ಅವರು ಸಾಹಸಿ ಮತ್ತು ದಿಟ್ಟ ಮಹಿಳೆಯರಾಗಿದ್ದಾರೆ.

ಸಮಾಜ ಮಹಿಳೆಯರ ಶಕ್ತಿಯನ್ನು ಅರಿಯಬೇಕಿದೆ. ಭವ್ಯ ಭಾರತದಲ್ಲಿ ಪುರುಷನಷ್ಟೇ ಹೆಣ್ಣಿಗೂ ಬದುಕುವ, ಸಾಧಿಸುವ ಛಲ ಇದೆ, ಹಕ್ಕೂ ಇದೆ.
mahendrahasaguli60@gmail.com

andolanait

Recent Posts

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

2 hours ago

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…

2 hours ago

ಮತ್ತೆರಡು ಸಮಾವೇಶ ಮಾಡಲು ಸಜ್ಜಾದ ಜೆಡಿಎಸ್‌: ಚುನಾವಣೆ ಗೆಲ್ಲಲು ರಣತಂತ್ರ

ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…

2 hours ago

ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ: ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ

ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…

2 hours ago

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ

ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…

3 hours ago

ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಹೇಳಿಕೆಗೆ ಕಿಚ್ಚ ಸುದೀಪ್‌ ಕೆಂಡಾಮಂಡಲ

ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…

4 hours ago