ಬಿರುಬೇಸಿಗೆಗೆ ಕೂದಲ ಆರೈಕೆಯೆಡೆಗೆ ಗಮನಹರಿಸುವುದು ಮುಖ್ಯ. ಬೇಸಿಗೆಯ ದೂಳಿಗೆ ಸಿಕ್ಕ ಕೂದಲು ಶುಷ್ಕಗೊಳ್ಳುತ್ತದೆ. ಕೂದಲ ಆರೈಕೆಗೆ ನಿತ್ಯ ಬಳಸುವ ಈರುಳ್ಳಿ ಮತ್ತು ಮೆಂತ್ಯೆಯೇ ಸಾಕು. ಬಳಸುವ ವಿಧಾನವನ್ನು ತುಸು ತಿಳಿದುಕೊಳ್ಳೋಣ.
ದೊಡ್ಡ ಗಾತ್ರದ ಒಂದು ಈರುಳ್ಳಿ ಅಥವಾ ಎರಡು ಮಧ್ಯಮ ಗಾತ್ರದ ಈರುಳ್ಳಿಯನ್ನು ಸಣ್ಣಗೆ ಕತ್ತರಿಸಿ, ನುಣ್ಣಗೆ ರುಬ್ಬಿ ರಸ ತೆಗೆದಿಟ್ಟುಕೊಳ್ಳಬೇಕು. ತಯಾರಿಸಿಟ್ಟುಕೊಂಡ ಈರುಳ್ಳಿ ರಸಕ್ಕೆ ಎರಡು ಚಮಚದಷ್ಟು ಮೆಂತ್ಯೆ ಪೇಸ್ಟ್ ಸೇರಿಸಬೇಕು. ಕೂದಲಿಗೆ ಒಗ್ಗುವ ಎಣ್ಣೆಯನ್ನು ತುಸು ಕಾಯಿಸಿ, ಅದಕ್ಕೆ ಮಾಡಿಟ್ಟುಕೊಂಡ ಈ ಮಿಶ್ರಣವನ್ನು ಸೇರಿಸಿ, ಹದಿನೈದರಿಂದ ಇಪ್ಪತ್ತು ನಿಮಿಷಗಳವರೆಗೆ ಕುದಿಸಬೇಕು. ಎಣ್ಣೆ ಸ್ವಲ್ಪ ತಣ್ಣಗಾದ ನಂತರ, ಸೋಸಿ ಬಾಟಲಿಯಲ್ಲಿ ಶೇಖರಿಸಿಟ್ಟುಕೊಳ್ಳಬೇಕು.
ವಾರಕ್ಕೊಮ್ಮೆಯಾದರೂ ಸ್ವಲ್ಪ ಎಣ್ಣೆಯನ್ನು ತೆಗೆದುಕೊಂಡು, ನೆತ್ತಿಗೆ ಹಾಕಿ ನಿಧಾನವಾಗಿ ಮಸಾಜ್ ಮಾಡುವುದರಿಂದ ರಕ್ತ ಪರಿಚಲನೆಯನ್ನು ಉತ್ತೇಜಿಸುತ್ತದೆ. ಬೆಳಿಗ್ಗೆ ಎದ್ದು, ಕೂದಲನ್ನು ನಿಮಗೊಪ್ಪುವ ಶ್ಯಾಂಪೂವಿಂದ ತೊಳೆದುಕೊಳ್ಳುವುದರಿಂದ, ಕೂದಲ ಆರೈಕೆ ಸಾಧ್ಯ.
ಈರುಳ್ಳಿ ರಸ ಮತ್ತು ಮೆಂತ್ಯ ಬೀಜಗಳು ಹೊಸ ಕೂದಲಿನ ಬೆಳವಣಿಗೆಗೆ ಸಹಾಯ ಮಾಡುವ ಪೋಷಕಾಂಶಗಳನ್ನು ನೀಡುತ್ತದೆ. ಈರುಳ್ಳಿಯಲ್ಲಿರುವ ಸಲ್ಛರ್ ಕೂದಲನ್ನು ಬಲಪಡಿಸುತ್ತದೆ. ಕೂದಲು
ಟಿಸಿಲೊಡೆಯುವುದನ್ನು ಕಡಿಮೆ ಮಾಡುತ್ತದೆ. ಮೆಂತ್ಯದ ಹೆಚ್ಚಿನ ಪ್ರೋಟೀನ್ ಅಂಶವು ಕೂದಲು
ತೆಳುವಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ. ಕೂದಲಿಗೆ ಹೊಳಪು ನೀಡುತ್ತದೆ.
ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾದ ವಿರುದ್ಧ ಅದ್ಭುತ…
ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…
ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…
ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…