ಮಹಿಳೆ ಸಬಲೆ

ಕೂದಲು ಆರೈಕೆಗೆ ಈರುಳ್ಳಿ ಮತ್ತು ಮೆಂತ್ಯೆ

ಬಿರುಬೇಸಿಗೆಗೆ ಕೂದಲ ಆರೈಕೆಯೆಡೆಗೆ ಗಮನಹರಿಸುವುದು ಮುಖ್ಯ. ಬೇಸಿಗೆಯ ದೂಳಿಗೆ ಸಿಕ್ಕ ಕೂದಲು ಶುಷ್ಕಗೊಳ್ಳುತ್ತದೆ. ಕೂದಲ ಆರೈಕೆಗೆ ನಿತ್ಯ ಬಳಸುವ ಈರುಳ್ಳಿ ಮತ್ತು ಮೆಂತ್ಯೆಯೇ ಸಾಕು. ಬಳಸುವ ವಿಧಾನವನ್ನು ತುಸು ತಿಳಿದುಕೊಳ್ಳೋಣ.

ದೊಡ್ಡ ಗಾತ್ರದ ಒಂದು ಈರುಳ್ಳಿ ಅಥವಾ ಎರಡು ಮಧ್ಯಮ ಗಾತ್ರದ ಈರುಳ್ಳಿಯನ್ನು ಸಣ್ಣಗೆ ಕತ್ತರಿಸಿ, ನುಣ್ಣಗೆ ರುಬ್ಬಿ ರಸ ತೆಗೆದಿಟ್ಟುಕೊಳ್ಳಬೇಕು. ತಯಾರಿಸಿಟ್ಟುಕೊಂಡ ಈರುಳ್ಳಿ ರಸಕ್ಕೆ ಎರಡು ಚಮಚದಷ್ಟು ಮೆಂತ್ಯೆ ಪೇಸ್ಟ್ ಸೇರಿಸಬೇಕು. ಕೂದಲಿಗೆ ಒಗ್ಗುವ ಎಣ್ಣೆಯನ್ನು ತುಸು ಕಾಯಿಸಿ, ಅದಕ್ಕೆ ಮಾಡಿಟ್ಟುಕೊಂಡ ಈ ಮಿಶ್ರಣವನ್ನು ಸೇರಿಸಿ, ಹದಿನೈದರಿಂದ ಇಪ್ಪತ್ತು ನಿಮಿಷಗಳವರೆಗೆ ಕುದಿಸಬೇಕು. ಎಣ್ಣೆ ಸ್ವಲ್ಪ ತಣ್ಣಗಾದ ನಂತರ, ಸೋಸಿ ಬಾಟಲಿಯಲ್ಲಿ ಶೇಖರಿಸಿಟ್ಟುಕೊಳ್ಳಬೇಕು.

ವಾರಕ್ಕೊಮ್ಮೆಯಾದರೂ ಸ್ವಲ್ಪ ಎಣ್ಣೆಯನ್ನು ತೆಗೆದುಕೊಂಡು, ನೆತ್ತಿಗೆ ಹಾಕಿ ನಿಧಾನವಾಗಿ ಮಸಾಜ್ ಮಾಡುವುದರಿಂದ ರಕ್ತ ಪರಿಚಲನೆಯನ್ನು ಉತ್ತೇಜಿಸುತ್ತದೆ. ಬೆಳಿಗ್ಗೆ ಎದ್ದು, ಕೂದಲನ್ನು ನಿಮಗೊಪ್ಪುವ ಶ್ಯಾಂಪೂವಿಂದ ತೊಳೆದುಕೊಳ್ಳುವುದರಿಂದ, ಕೂದಲ ಆರೈಕೆ ಸಾಧ್ಯ.

ಈರುಳ್ಳಿ ರಸ ಮತ್ತು ಮೆಂತ್ಯ ಬೀಜಗಳು ಹೊಸ ಕೂದಲಿನ ಬೆಳವಣಿಗೆಗೆ ಸಹಾಯ ಮಾಡುವ ಪೋಷಕಾಂಶಗಳನ್ನು ನೀಡುತ್ತದೆ. ಈರುಳ್ಳಿಯಲ್ಲಿರುವ ಸಲ್ಛರ್ ಕೂದಲನ್ನು ಬಲಪಡಿಸುತ್ತದೆ. ಕೂದಲು
ಟಿಸಿಲೊಡೆಯುವುದನ್ನು ಕಡಿಮೆ ಮಾಡುತ್ತದೆ. ಮೆಂತ್ಯದ ಹೆಚ್ಚಿನ ಪ್ರೋಟೀನ್ ಅಂಶವು ಕೂದಲು
ತೆಳುವಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ. ಕೂದಲಿಗೆ ಹೊಳಪು ನೀಡುತ್ತದೆ.

 

ಆಂದೋಲನ ಡೆಸ್ಕ್

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

2 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago