ಮಹಿಳೆ ಸಬಲೆ

ಬೇಸಿಗೆ ರಜೆ: ಅಮ್ಮಂದಿರಿಗಿದು ನಿಜವಾದ ಪರೀಕ್ಷಾ ಸಮಯ

– ಗಿರೀಶ್ ಹುಣಸೂರು

ಶೈಕ್ಷಣಿಕ ವರ್ಷದ ವಾರ್ಷಿಕ ಪರೀಕ್ಷೆ ಮುಗಿಸಿ ಮನೆಗೆ ಬಂದ ಮಕ್ಕಳು ಸ್ಕೂಲ್ ಬ್ಯಾಗ್ ಎಸೆದು ಅಮ್ಮ ಸ್ಕೂಲ್ ಮುಗೀತು, ನಾಳೆಯಿಂದ ರಜಾ-ಮಜಾ ಎಂದು ಜೋರು ದನಿಯಲ್ಲಿ ಸಂಭ್ರಮಾಚರಣೆ ಮಾಡತೊಡಗಿದಾಲೇ ತಲೆ ಮೇಲೆ ಕೈ ಹೊತ್ತ ಅಮ್ಮ, ಇನ್ನು ನಾಳೆಯಿಂದ ನನಗೆ ಇವರನ್ನು ಸಂಭಾಳಿಸುವ ಪರೀಕ್ಷೆ ಶುರು ಎಂದು ಮನಸ್ಸಲ್ಲೇ ಗೊಣಗಿಕೊಳ್ಳುತ್ತಾ ಅಡುಗೆ ಮನೆಗೆ ಹೋದವಳು ಮಕ್ಕಳಿಗೆ ಏನಾದರೂ ತಿನ್ನಲು ತಿಂಡಿ ತರುವ ಮುಂಚೆಯೇ ಭಾಯ್ ಅಮ್ಮ, ಫ್ರೆಂಡ್ಸ್‌ ಕಾಯ್ತಿದ್ದಾರೆ. ಆಟ ಆಡಲು ಹೋಗ್ತಿದ್ದೇನೆ ಎಂದು ಮನೆಯಿಂದ ಪೇರಿಕಿತ್ತ ಮಕ್ಕಳನ್ನು ಕಂಡು ನಗುವುದೋ-ಅಳುವುದೋ ನೀವೇ ಹೇಳಿ ಎನ್ನುವ ಸ್ಥಿತಿ ಅಮ್ಮನದು.

ಅದರಲ್ಲೂ ನಗರದ ಒತ್ತಡದಲ್ಲಿ ಬದುಕು ಸಾಗಿಸುತ್ತಿರುವ ವಿದ್ಯಾವಂತ, ಉದ್ಯೋಗಸ್ಥ ದಂಪತಿಗೆ ಏಪ್ರಿಲ್-ಮೇ ಎರಡು ತಿಂಗಳು ಹೇಗಪ್ಪಾ ಮಕ್ಕಳನ್ನು ಸಂಭಾಳಿಸುವುದು ಎಂಬ ಚಿಂತೆ ಅತಿಯಾಗಿ ಕಾಡದೆ ಇರದು. ನಾವು ಚಿಕ್ಕವರಿರುವಾಗ ದಸರಾ ರಜೆ, ಬೇಸಿಗೆ ರಜೆ ಬಂತೆಂದರೆ ಸಾಕು ಅಜ್ಜಿ ಮನೆಗೆ ಓಡುತ್ತಿದ್ದ ದಿನಗಳು ಈಗೆಲ್ಲಿ? ಅಮ್ಮನಿಗೆ ಹೇಳ್ಬೇಡ, ಅಪ್ಪನಿಗೆ ಕೊಡ್ಬೇಡ, ಏನಾದ್ರು ತಗೋ, ಏನಾದ್ರು ತಗೊಂಡು ತಿನ್ನು…!

ಅಜ್ಜ-ಅಜ್ಜಿ ಕೈಯನ್ನು ಗಟ್ಟಿಯಾಗಿ ಹಿಡಿದುಕೊಂಡು ಕೊಡುತ್ತಿದ್ದ ಹಣಕ್ಕೆ ಮೌಲ್ಯಕಟ್ಟಲಾದೀತೆ? ಉದ್ಯೋಗ ಅರಸಿ ನಗರ ಸೇರಿಕೊಂಡಿರುವ ಮಕ್ಕಳಿಂದಾಗಿ ಹಳ್ಳಿಗಳೀಗ ವೃದ್ಧಾಶ್ರಮಗಳಾಗುತ್ತಿರುವಾಗ, ನಾವಿರುವಲ್ಲಿಗೆ ಕರೆಸಿಕೊಳ್ಳೋಣವೆಂದರೆ ನಗರದ ಜಂಜಾಟದ ಬದುಕು ನಮಗೆ ಒಗ್ಗಲಾರದು ಎಂದು ಅವರು ಬರಲು ಒಪ್ಪರು. ನಗರದ ಹೈ- ಕಾನ್ವೆಂಟ್ಗಳಲ್ಲಿ ಓದಿಸಿರುವ ಮಕ್ಕಳನ್ನು ಪುನಃ ಹಳ್ಳಿಗೆ ಹೇಗೆ ಕಳಿಸುವುದು? ಅಲ್ಲಿ ಹೋದರೆ ಮಕ್ಕಳು ಒಗ್ಗಿ
ಕೊಳ್ತಾವ ಎಂಬ ಚಿಂತೆ ಹೆತ್ತವರದು. ಜೊತೆಗೆ ಮಕ್ಕಳನ್ನು ಮೊಬೈಲ್‌ನಿಂದ ದೂರವಿಡುವುದು ಹೇಗೆ ಎಂಬ ಚಿಂತೆ ಬೇರೆ. ಹೀಗೆ ಸಾಲು ಸಾಲು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವಲ್ಲಿ ಅಮ್ಮ ಹೈರಾಣಾಗಿ ಹೋಗಿಬಿಡುತ್ತಾಳೆ.

ಹೀಗಾಗಿ ಎರಡು ತಿಂಗಳು ಮಕ್ಕಳನ್ನು ಸಂಭಾಳಿಸುವ ಸಲುವಾಗಿಯೇ ಉದ್ಯೋಗಸ್ಥ ದಂಪತಿ ಕಂಡುಕೊಂಡ ಸುಲಭೋಪಾಯ ಬೇಸಿಗೆ ಶಿಬಿರಗಳು. ಹೀಗಾಗಿಯೇ ಇತ್ತೀಚಿನ ವರ್ಷಗಳಲ್ಲಿ ಬೇಸಿಗೆ ರಜೆ ಬಂತೆಂದರೆ ಸಾಕು ಎಲ್ಲೆಡೆ ಬೇಸಿಗೆ ಶಿಬಿರಗಳು ನಡೆಯುತ್ತವೆ. ಮಕ್ಕಳು ಓದಿಗೆ ಗುಡ್‌ಬೈ ಹೇಳಿ ಬೇಸಿಗೆ ಶಿಬಿರದಲ್ಲಿ ಪಾಲ್ಗೊಳ್ಳುತ್ತಾರೆ. ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಸಂಭ್ರಮಿಸುತ್ತಾರೆ. ಇದರಿಂದ ಮಕ್ಕಳಿಗೆ ಸಂತೋಷವಾದರೆ, ಉದ್ಯೋಗಸ್ಥ ದಂಪತಿಗೆ ನಾವು ದುಡಿದು ಮನೆಗೆ ಹಿಂತಿರುಗುವವರೆಗೆ ಮಕ್ಕಳು ಒಂದೆಡೆ ಕ್ಷೇಮವಾಗಿರುತ್ತಾರೆ ಎಂಬ ವಿಶ್ವಾಸ. ಇದಕ್ಕಾಗಿಯೇ ಗಲ್ಲಿಗೊಂದು ಬೇಸಿಗೆ ಶಿಬಿರಗಳು ಆಯೋಜನೆಯಾಗುತ್ತಿವೆ. ಅದರಲ್ಲೂ ಪ್ರತಿಷ್ಠಿತ ಸಂಸ್ಥೆಗಳು ಆಯೋಜಿಸುವ ಬೇಸಿಗೆ ಶಿಬಿರಗಳಿಗೆ ಬಹು ಬೇಡಿಕೆ. ದುಡ್ಡು ಎಷ್ಟು ಖರ್ಚಾದರೂ
ಪರವಾಗಿಲ್ಲ ನಮ್ಮ ಮಕ್ಕಳನ್ನು ಆ ಶಿಬಿರಗಳಿಗೆ ಕಳುಹಿಸಿದರೆ ಅವರ ವ್ಯಕ್ತಿತ್ವ ವಿಕಸನದ ಜತೆಗೆ ನಮ್ಮ ಕೆಲಸಕ್ಕೂ ಅಡ್ಡಿಯಾಗದು ಎಂಬ ನಂಬಿಕೆ ಉದ್ಯೋಗಸ್ಥ ದಂಪತಿಯದು.

ಮಕ್ಕಳನ್ನು ಬೇಸಿಗೆ ಶಿಬಿರಕ್ಕೆ ಕಳುಹಿಸಿದ ಮಾತ್ರಕ್ಕೆ ಅಮ್ಮನ ಧಾವಂತ ಮುಗಿಯದು. ಮಗುವನ್ನು ಮತ್ತೆ ಶಾಲೆಗೆ ಕಳಿಸುವಂತೆಯೇ ಮನೆಯಿಂದ ಶಿಬಿರ ನಡೆಯುವ ಸ್ಥಳಕ್ಕೆ, ಶಿಬಿರ ಮುಗಿದ ಬಳಿಕ ಮತ್ತೆ ಮನೆಗೆ ಕರೆತರಲು ವಾಹನ ವ್ಯವಸ್ಥೆ ಮಾಡಬೇಕು. ಮಕ್ಕಳು ಶಿಬಿರ ಮುಗಿಸಿ ಮನೆ ತಲುಪುವಷ್ಟರಲ್ಲಿ ತಾನು ಮನೆ ಸೇರಿಕೊಳ್ಳಬೇಕು. ಶಿಬಿರ ಮುಗಿಸಿ ಮನೆಗೆ ಬರುವ ಮಕ್ಕಳಿಗೆ ತಿನ್ನಲು ಕೊಟ್ಟು, ಅವರನ್ನು ಸಂಭಾಳಿಸುವಷ್ಟರಲ್ಲಿ ಸಾಕು ಸಾಕಾಗಿ
ಹೋಗಿರುತ್ತಾಳೆ.  ಶಿಬಿರಗಳಾದರೋ ಮಕ್ಕಳ ಬೇಸಿಗೆ ರಜೆ ಮುಗಿಯುವವರೆಗೆ ನಡೆಯುವುದಿಲ್ಲ. 20 ದಿನ ಅಥವಾ ಹೆಚ್ಚೆಂದರೆ ಒಂದು ತಿಂಗಳು ನಡೆಯುತ್ತವೆ.

ಇನ್ನೊಂದು ತಿಂಗಳು ಸಂಭಾಳಿಸಲು ದಂಪತಿ ತಾವೂ ಕೆಲಸಕ್ಕೆ ರಜೆ ಹಾಕಿಕೊಂಡು ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದು ದಿನದೂಡುವ ಮೂಲಕ ಬೇಸಿಗೆ ರಜೆ ಪೂರ್ಣಗೊಳಿಸಿದ ಶಾಸ್ತ್ರ ಮುಗಿಸಿ, ಕಳೆಯಿತು ಆ ಬೇಸಿಗೆ ಹೋಗೋಣ ಮತ್ತೆ ಶಾಲೆಗೆ ಎಂದು ಮಕ್ಕಳು ಶಾಲೆಗೆ ಹೊರಟು ನಿಂತಾಗಲೇ ಅಮ್ಮನಿಗೆ ಸಿಗುವುದು ಎರಡು ತಿಂಗಳ ಪರೀಕ್ಷೆ ಮುಗಿಸಿದ ತಾತ್ಕಾಲಿಕ ವಿರಾಮ.

 

ಆಂದೋಲನ ಡೆಸ್ಕ್

Recent Posts

ನಿಗೂಢ ವಸ್ತು ಸ್ಫೋಟ: 6 ಶಾಲಾ ಮಕ್ಕಳಿಗೆ ಗಂಭೀರ ಗಾಯ

ಬೀದರ್:‌ ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…

15 mins ago

ಮೈಸೂರು| ರಾಜ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದ ಮಾಜಿ ಸಚಿವ ಸಿ.ಟಿ.ರವಿ

ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌…

39 mins ago

ಮಹಾರಾಷ್ಟ್ರ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಆಯ್ಕೆ, ಇಂದು ಸಂಜೆ ಪ್ರಮಾಣವಚನ ಸ್ವೀಕಾರ?

ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್‌ ಪವಾರ್‌ ಪತ್ನಿ ಸುನೇಂದ್ರ ಪವಾರ್‌ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…

57 mins ago

ಉದ್ಯಮಿ ಸಿ.ಜೆ.ರಾಯ್‌ ಸಾವಿನ ಬಗ್ಗೆ ಸಚಿವ ಪರಮೇಶ್ವರ್‌ ಮಾಹಿತಿ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ…

2 hours ago

ನಾಳೆ ಕೇಂದ್ರ ಬಜೆಟ್‌ ಮಂಡನೆ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆ 9ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಮೂಲಕ…

2 hours ago

ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ಇಂದು ಸಂಜೆ ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ

ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್‌ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…

3 hours ago