ಮಹಿಳೆ ಸಬಲೆ

ಬೇಸಿಗೆ ರಜೆ: ಅಮ್ಮಂದಿರಿಗಿದು ನಿಜವಾದ ಪರೀಕ್ಷಾ ಸಮಯ

– ಗಿರೀಶ್ ಹುಣಸೂರು

ಶೈಕ್ಷಣಿಕ ವರ್ಷದ ವಾರ್ಷಿಕ ಪರೀಕ್ಷೆ ಮುಗಿಸಿ ಮನೆಗೆ ಬಂದ ಮಕ್ಕಳು ಸ್ಕೂಲ್ ಬ್ಯಾಗ್ ಎಸೆದು ಅಮ್ಮ ಸ್ಕೂಲ್ ಮುಗೀತು, ನಾಳೆಯಿಂದ ರಜಾ-ಮಜಾ ಎಂದು ಜೋರು ದನಿಯಲ್ಲಿ ಸಂಭ್ರಮಾಚರಣೆ ಮಾಡತೊಡಗಿದಾಲೇ ತಲೆ ಮೇಲೆ ಕೈ ಹೊತ್ತ ಅಮ್ಮ, ಇನ್ನು ನಾಳೆಯಿಂದ ನನಗೆ ಇವರನ್ನು ಸಂಭಾಳಿಸುವ ಪರೀಕ್ಷೆ ಶುರು ಎಂದು ಮನಸ್ಸಲ್ಲೇ ಗೊಣಗಿಕೊಳ್ಳುತ್ತಾ ಅಡುಗೆ ಮನೆಗೆ ಹೋದವಳು ಮಕ್ಕಳಿಗೆ ಏನಾದರೂ ತಿನ್ನಲು ತಿಂಡಿ ತರುವ ಮುಂಚೆಯೇ ಭಾಯ್ ಅಮ್ಮ, ಫ್ರೆಂಡ್ಸ್‌ ಕಾಯ್ತಿದ್ದಾರೆ. ಆಟ ಆಡಲು ಹೋಗ್ತಿದ್ದೇನೆ ಎಂದು ಮನೆಯಿಂದ ಪೇರಿಕಿತ್ತ ಮಕ್ಕಳನ್ನು ಕಂಡು ನಗುವುದೋ-ಅಳುವುದೋ ನೀವೇ ಹೇಳಿ ಎನ್ನುವ ಸ್ಥಿತಿ ಅಮ್ಮನದು.

ಅದರಲ್ಲೂ ನಗರದ ಒತ್ತಡದಲ್ಲಿ ಬದುಕು ಸಾಗಿಸುತ್ತಿರುವ ವಿದ್ಯಾವಂತ, ಉದ್ಯೋಗಸ್ಥ ದಂಪತಿಗೆ ಏಪ್ರಿಲ್-ಮೇ ಎರಡು ತಿಂಗಳು ಹೇಗಪ್ಪಾ ಮಕ್ಕಳನ್ನು ಸಂಭಾಳಿಸುವುದು ಎಂಬ ಚಿಂತೆ ಅತಿಯಾಗಿ ಕಾಡದೆ ಇರದು. ನಾವು ಚಿಕ್ಕವರಿರುವಾಗ ದಸರಾ ರಜೆ, ಬೇಸಿಗೆ ರಜೆ ಬಂತೆಂದರೆ ಸಾಕು ಅಜ್ಜಿ ಮನೆಗೆ ಓಡುತ್ತಿದ್ದ ದಿನಗಳು ಈಗೆಲ್ಲಿ? ಅಮ್ಮನಿಗೆ ಹೇಳ್ಬೇಡ, ಅಪ್ಪನಿಗೆ ಕೊಡ್ಬೇಡ, ಏನಾದ್ರು ತಗೋ, ಏನಾದ್ರು ತಗೊಂಡು ತಿನ್ನು…!

ಅಜ್ಜ-ಅಜ್ಜಿ ಕೈಯನ್ನು ಗಟ್ಟಿಯಾಗಿ ಹಿಡಿದುಕೊಂಡು ಕೊಡುತ್ತಿದ್ದ ಹಣಕ್ಕೆ ಮೌಲ್ಯಕಟ್ಟಲಾದೀತೆ? ಉದ್ಯೋಗ ಅರಸಿ ನಗರ ಸೇರಿಕೊಂಡಿರುವ ಮಕ್ಕಳಿಂದಾಗಿ ಹಳ್ಳಿಗಳೀಗ ವೃದ್ಧಾಶ್ರಮಗಳಾಗುತ್ತಿರುವಾಗ, ನಾವಿರುವಲ್ಲಿಗೆ ಕರೆಸಿಕೊಳ್ಳೋಣವೆಂದರೆ ನಗರದ ಜಂಜಾಟದ ಬದುಕು ನಮಗೆ ಒಗ್ಗಲಾರದು ಎಂದು ಅವರು ಬರಲು ಒಪ್ಪರು. ನಗರದ ಹೈ- ಕಾನ್ವೆಂಟ್ಗಳಲ್ಲಿ ಓದಿಸಿರುವ ಮಕ್ಕಳನ್ನು ಪುನಃ ಹಳ್ಳಿಗೆ ಹೇಗೆ ಕಳಿಸುವುದು? ಅಲ್ಲಿ ಹೋದರೆ ಮಕ್ಕಳು ಒಗ್ಗಿ
ಕೊಳ್ತಾವ ಎಂಬ ಚಿಂತೆ ಹೆತ್ತವರದು. ಜೊತೆಗೆ ಮಕ್ಕಳನ್ನು ಮೊಬೈಲ್‌ನಿಂದ ದೂರವಿಡುವುದು ಹೇಗೆ ಎಂಬ ಚಿಂತೆ ಬೇರೆ. ಹೀಗೆ ಸಾಲು ಸಾಲು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವಲ್ಲಿ ಅಮ್ಮ ಹೈರಾಣಾಗಿ ಹೋಗಿಬಿಡುತ್ತಾಳೆ.

ಹೀಗಾಗಿ ಎರಡು ತಿಂಗಳು ಮಕ್ಕಳನ್ನು ಸಂಭಾಳಿಸುವ ಸಲುವಾಗಿಯೇ ಉದ್ಯೋಗಸ್ಥ ದಂಪತಿ ಕಂಡುಕೊಂಡ ಸುಲಭೋಪಾಯ ಬೇಸಿಗೆ ಶಿಬಿರಗಳು. ಹೀಗಾಗಿಯೇ ಇತ್ತೀಚಿನ ವರ್ಷಗಳಲ್ಲಿ ಬೇಸಿಗೆ ರಜೆ ಬಂತೆಂದರೆ ಸಾಕು ಎಲ್ಲೆಡೆ ಬೇಸಿಗೆ ಶಿಬಿರಗಳು ನಡೆಯುತ್ತವೆ. ಮಕ್ಕಳು ಓದಿಗೆ ಗುಡ್‌ಬೈ ಹೇಳಿ ಬೇಸಿಗೆ ಶಿಬಿರದಲ್ಲಿ ಪಾಲ್ಗೊಳ್ಳುತ್ತಾರೆ. ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಸಂಭ್ರಮಿಸುತ್ತಾರೆ. ಇದರಿಂದ ಮಕ್ಕಳಿಗೆ ಸಂತೋಷವಾದರೆ, ಉದ್ಯೋಗಸ್ಥ ದಂಪತಿಗೆ ನಾವು ದುಡಿದು ಮನೆಗೆ ಹಿಂತಿರುಗುವವರೆಗೆ ಮಕ್ಕಳು ಒಂದೆಡೆ ಕ್ಷೇಮವಾಗಿರುತ್ತಾರೆ ಎಂಬ ವಿಶ್ವಾಸ. ಇದಕ್ಕಾಗಿಯೇ ಗಲ್ಲಿಗೊಂದು ಬೇಸಿಗೆ ಶಿಬಿರಗಳು ಆಯೋಜನೆಯಾಗುತ್ತಿವೆ. ಅದರಲ್ಲೂ ಪ್ರತಿಷ್ಠಿತ ಸಂಸ್ಥೆಗಳು ಆಯೋಜಿಸುವ ಬೇಸಿಗೆ ಶಿಬಿರಗಳಿಗೆ ಬಹು ಬೇಡಿಕೆ. ದುಡ್ಡು ಎಷ್ಟು ಖರ್ಚಾದರೂ
ಪರವಾಗಿಲ್ಲ ನಮ್ಮ ಮಕ್ಕಳನ್ನು ಆ ಶಿಬಿರಗಳಿಗೆ ಕಳುಹಿಸಿದರೆ ಅವರ ವ್ಯಕ್ತಿತ್ವ ವಿಕಸನದ ಜತೆಗೆ ನಮ್ಮ ಕೆಲಸಕ್ಕೂ ಅಡ್ಡಿಯಾಗದು ಎಂಬ ನಂಬಿಕೆ ಉದ್ಯೋಗಸ್ಥ ದಂಪತಿಯದು.

ಮಕ್ಕಳನ್ನು ಬೇಸಿಗೆ ಶಿಬಿರಕ್ಕೆ ಕಳುಹಿಸಿದ ಮಾತ್ರಕ್ಕೆ ಅಮ್ಮನ ಧಾವಂತ ಮುಗಿಯದು. ಮಗುವನ್ನು ಮತ್ತೆ ಶಾಲೆಗೆ ಕಳಿಸುವಂತೆಯೇ ಮನೆಯಿಂದ ಶಿಬಿರ ನಡೆಯುವ ಸ್ಥಳಕ್ಕೆ, ಶಿಬಿರ ಮುಗಿದ ಬಳಿಕ ಮತ್ತೆ ಮನೆಗೆ ಕರೆತರಲು ವಾಹನ ವ್ಯವಸ್ಥೆ ಮಾಡಬೇಕು. ಮಕ್ಕಳು ಶಿಬಿರ ಮುಗಿಸಿ ಮನೆ ತಲುಪುವಷ್ಟರಲ್ಲಿ ತಾನು ಮನೆ ಸೇರಿಕೊಳ್ಳಬೇಕು. ಶಿಬಿರ ಮುಗಿಸಿ ಮನೆಗೆ ಬರುವ ಮಕ್ಕಳಿಗೆ ತಿನ್ನಲು ಕೊಟ್ಟು, ಅವರನ್ನು ಸಂಭಾಳಿಸುವಷ್ಟರಲ್ಲಿ ಸಾಕು ಸಾಕಾಗಿ
ಹೋಗಿರುತ್ತಾಳೆ.  ಶಿಬಿರಗಳಾದರೋ ಮಕ್ಕಳ ಬೇಸಿಗೆ ರಜೆ ಮುಗಿಯುವವರೆಗೆ ನಡೆಯುವುದಿಲ್ಲ. 20 ದಿನ ಅಥವಾ ಹೆಚ್ಚೆಂದರೆ ಒಂದು ತಿಂಗಳು ನಡೆಯುತ್ತವೆ.

ಇನ್ನೊಂದು ತಿಂಗಳು ಸಂಭಾಳಿಸಲು ದಂಪತಿ ತಾವೂ ಕೆಲಸಕ್ಕೆ ರಜೆ ಹಾಕಿಕೊಂಡು ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದು ದಿನದೂಡುವ ಮೂಲಕ ಬೇಸಿಗೆ ರಜೆ ಪೂರ್ಣಗೊಳಿಸಿದ ಶಾಸ್ತ್ರ ಮುಗಿಸಿ, ಕಳೆಯಿತು ಆ ಬೇಸಿಗೆ ಹೋಗೋಣ ಮತ್ತೆ ಶಾಲೆಗೆ ಎಂದು ಮಕ್ಕಳು ಶಾಲೆಗೆ ಹೊರಟು ನಿಂತಾಗಲೇ ಅಮ್ಮನಿಗೆ ಸಿಗುವುದು ಎರಡು ತಿಂಗಳ ಪರೀಕ್ಷೆ ಮುಗಿಸಿದ ತಾತ್ಕಾಲಿಕ ವಿರಾಮ.

 

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

2 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

2 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

15 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

16 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

16 hours ago