ಮಹಿಳೆ ಸಬಲೆ

ಬದುಕಿನ ಸವಾಲು ಮೆಟ್ಟಿನಿಂತ ಎಳನೀರು ನಾಗರತ್ನಮ್ಮ

ಎನ್.ಪಿ.ಪರಶಿವಮೂರ್ತಿ, ನಂಜೀಪುರ

ಬದುಕಿನಲ್ಲಿ ಎದುರಾಗುವ ನೂರಾರು ಸವಾಲುಗಳು ಬದುಕನ್ನು ನರಕವಾಗಿಸಿಬಿಡುತ್ತವೆ. ಇಂತಹ ಸವಾಲುಗಳನ್ನು ದಿಟ್ಟತನದಿಂದ ಎದುರಿಸಿದಾಗ ಮಾತ್ರ ಸಮಸ್ಯೆಗಳ ಬದುಕಿನಲ್ಲಿ ಈಸಿ ಜಯಿಸಲು ಸಾಧ್ಯ. ಹೀಗೆ ಬದುಕಿನುದ್ದಕ್ಕೂ ಸವಾಲುಗಳನ್ನು ಮೆಟ್ಟಿನಿಂತು, ಎಂದಿಗೂ ತನ್ನ ಸ್ವಾಭಿಮಾನವನ್ನು ಬಿಟ್ಟುಕೊಡದೆ ದುಡಿದು ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ ಮೈಸೂರಿನ ನಾಗರತ್ನಮ್ಮ.

ನಾಗರತ್ನಮ್ಮ ಎಳನೀರು ವ್ಯಾಪಾರಿ. ತಮ್ಮ ಬದುಕಿನಲ್ಲಿ ಎದುರಾದ ಸಂಕಷ್ಟಗಳ ನಿವಾರಣೆಗಾಗಿ ಬೇರೆ ದಾರಿ ಇಲ್ಲದೆ ಎಳನೀರು ವ್ಯಾಪಾರಕ್ಕೆ ಇಳಿದರು. ಕುವೆಂಪುನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿರುವ ೫೦ ವರ್ಷ ಪ್ರಾಯದ ನಾಗರತ್ನಮ್ಮ ಅವರನ್ನು ಛಲಗಾತಿ ಎಂದೇ ಹೇಳಬೇಕು. ಮೂಲತಃ ಕೆ.ಆರ್.ಪೇಟೆಯವರಾದ ನಾಗರತ್ನಮ್ಮರಿಗೆ ೨೦ನೇ ವಯಸ್ಸಿನಲ್ಲಿ ಶ್ರೀನಿವಾಸ ಎಂಬುವರೊಂದಿಗೆ ವಿವಾಹವಾಗಿ ಮೈಸೂರಿಗೆಬಂದು ನೆಲೆಸಿದರು. ದಂಪತಿಗೆ ಇಬ್ಬರು ಹೆಣ್ಣುಮಕ್ಕಳು.

ಆರಂಭದಲ್ಲಿ ಸುಖವಾಗಿದ್ದ ಪುಟ್ಟ ಸಂಸಾರಕ್ಕೆ ಬರಸಿಡಿಲು ಬಡಿದಂತೆ ಕುಡಿತದ ಚಟಕ್ಕೆ ಬಲಿಯಾಗಿದ್ದ ನಾಗರತ್ನಮ್ಮಳ ಪತಿ ಶ್ರೀನಿವಾಸ್ ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದಾಗ ಅವರ ಚಿಕಿತ್ಸೆಗೆ ನಾಗರತ್ನಮ್ಮ ಸಾಲ ಮಾಡಿ ೩೫ ಲಕ್ಷ ರೂ.ಗಳನ್ನು ಖರ್ಚು ಮಾಡಿದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಇದರಿಂದಾಗಿ ಸಾಲದ ಸುಳಿಗೆ ಸಿಲುಕಿದ ನಾಗರತ್ನಮ್ಮ ಸಾಲದ ಭಾರ ಹೊರುವ ಜತೆಗೆ ಇಬ್ಬರು ಹೆಣ್ಣುಮಕ್ಕಳ ಜವಾಬ್ದಾರಿಯನ್ನೂ ಹೊರಬೇಕಾಯಿತು. ಇದಕ್ಕಾಗಿ ಅವರು ಎಳನೀರು ವ್ಯಾಪಾರ ಆರಂಭಿಸಿದರು. ಮೈಸೂರಿನ ಕುವೆಂಪುನಗರದ ಆದಿಚುಂಚನಗಿರಿ ರಸ್ತೆಯ ದಕ್ಷಿಣ ಇಎಸ್‌ಐಸಿ ಚಿಕಿತ್ಸಾಲಯದ ಮುಂಭಾಗದಲ್ಲಿ ಇವರು ಕಳೆದ ಇಪ್ಪತ್ತೈದು ವರ್ಷಗಳಿಂದ ಎಳೆನೀರು ವ್ಯಾಪಾರ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಸಾಲ ತೀರಿಸುವ ಜತೆಗೆ ಇಬ್ಬರು ಹೆಣ್ಣುಮಕ್ಕಳ ಪೋಷಣೆ ಮತ್ತು ಅವರ ವಿವಾಹ ಮಾಡುವ ಜವಾಬ್ದಾರಿಯೂ ಇವರ ಹೆಗಲ ಮೇಲೆ ಬಿತ್ತು. ಇಂತಹ ಸಂಕಷ್ಟದಲ್ಲಿ ಎದೆಗುಂದದೆ ಬದುಕನ್ನು ಸವಾಲಾಗಿ ಸ್ವೀಕರಿಸಿ ಎಳನೀರು ಮಾರುತ್ತಾ ಜೀವನ ಸಾಗಿಸುತ್ತಿದ್ದಾರೆ.

ಆರಂಭದಲ್ಲಿ ಮಹಿಳೆಯಾಗಿ ಮಚ್ಚು ಹಿಡಿದು ಎಳನೀರು ಕೊಚ್ಚುವುದು ಹೇಗೆ ಸಾಧ್ಯ? ಎಂದು ಎಲ್ಲರೂ ಟೀಕೆ ಮಾಡಿ ಹೀಯಾಳಿಸಿದರು. ಅದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ನಾಗರತ್ನಮ್ಮ ತಮ್ಮ ವೃತ್ತಿಯನ್ನು ಮುಂದುವರಿಸಿದ್ದಾರೆ.

ಸದ್ಯ ಗಂಡನ ಚಿಕಿತ್ಸೆಗಾಗಿ ಮಾಡಿದ ಸಾಲವನ್ನು ಹಂತಹಂತವಾಗಿ ತೀರಿಸಿದ್ದಾರೆ. ತಮ್ಮ ಕಷ್ಟದ ದಿನಗಳಲ್ಲಿ ತಮ್ಮ ಕುಟುಂಬಸ್ಥರ‍್ಯಾರು ಸ್ಪಂದಿಸಲಿಲ್ಲ ಎಂಬ ಕೊರಗು ಇವರನ್ನು ಸದಾ ಕಾಡುತ್ತಿದೆ. ಕಷ್ಟದಲ್ಲಿಯೇ ಜೀವನ ಆರಂಭಿಸಿದ ನಾಗರತ್ನಮ್ಮ ಎಳನೀರು ಮಾರಿಯೇ ತಮ್ಮ ಇಬ್ಬರು ಹೆಣ್ಣುಮಕ್ಕಳ ವಿವಾಹ ಮಾಡಿ, ಅವರ ಬದುಕನ್ನೂ ರೂಪಿಸಿದ್ದಾರೆ. ಬಂದ ಲಾಭದಲ್ಲಿ ಅಲ್ಪ ಹಣವನ್ನು ಉಳಿತಾಯ ಮಾಡಿ ಆಟೋ ರಿಕ್ಷಾವೊಂದನ್ನೂ ಖರೀದಿಸಿದ್ದಾರೆ. ರೈತರ ಜಮೀನಿಗೆ ಹೋಗಿ ತಾವೇ ಎಳನೀರು ಖರೀದಿ ಮಾಡಿ ಸಾಗಾಣಿಕೆ ಮಾಡಲು ಇದನ್ನು ಬಳಕೆ ಮಾಡುತ್ತಿದ್ದಾರೆ.

‘ಸುಖ ಮತ್ತು ಹಣ ಇದ್ದಾಗ ಊರೆಲ್ಲಾ ನೆಂಟರು, ಕಷ್ಟದಲ್ಲಿ ಯಾರೂ ಬರುವುದಿಲ್ಲ‘ ಎಂಬುದು ಇವರ ಬದುಕಿನ ಅನುಭವದ ಮಾತು. ಸುಖವಾಗಿ ದಾಂಪತ್ಯ ಜೀವನ ನಡೆಸಬೇಕಾದವರು ವಿವಾಹವಾದ ಕೇವಲ ೫ ವರ್ಷಗಳಲ್ಲಿಯೇ ಗಂಡನನ್ನು ಕಳೆದುಕೊಂಡು ಒಬ್ಬಂಟಿ ಮಹಿಳೆಯಾಗಿ ಕಣ್ಣೀರಿನಲ್ಲಿ ಕೈ ತೊಳೆದ ನಾಗರತ್ನಮ್ಮ ಅವರ ಹೋರಾಟದ ಬದುಕು ಇತರರಿಗೆ ಮಾದರಿಯಾಗಿದೆ.

ಆಂದೋಲನ ಡೆಸ್ಕ್

Recent Posts

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

40 mins ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

3 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

3 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

6 hours ago