ಇನ್‌ಸ್ಟಾಗ್ರಾಂನ ರೀಲ್ಸ್ ಒಂದರಲ್ಲಿ ಹೆಣ್ಣು ಮಕ್ಕಳಿಗೆ ಪಿಎಂಎಸ್ ಕಾಣಿಸಿಕೊಂಡರೆ ಏನು ಮಾಡಬೇಕು ಎಂಬ ಪ್ರಶ್ನೆಗೆ ಅನೇಕ ಹುಡುಗರು ಮಾತುಗಳಲ್ಲಿ, ಅವರನ್ನು ನಾವು ಕಾಳಜಿ ಯಿಂದ ನೋಡಿಕೊಳ್ಳಬೇಕು’, ‘ಒಂದಷ್ಟು ಸ್ಪೇಸ್ ಕೊಡಬೇಕು’ ಹೀಗೆ ಇತ್ಯಾದಿ ಉತ್ತರಗಳಿದ್ದವು.

ಕೆಲ ಹೆಣ್ಣುಮಕ್ಕಳಿಗೆ ಮುಟ್ಟಾಗುವ ಮುನ್ಸೂಚನೆಯಾಗಿ ಮೊಡವೆಯಾದರೆ ಇನ್ನೂ ಕೆಲವರಿಗೆ ಬೆನ್ನು, ಸೊಂಟ, ಕಿಬ್ಬೊಟ್ಟೆ, ಕಾಲುಗಳಲ್ಲಿ ಜಗಿತ ಕಾಣಿಸಿಕೊಳ್ಳುತ್ತದೆ. ಅದರ ಜೊತೆಗೆ ಭಾವದಲ್ಲಿ ಸ್ಥಿಮಿತ ಇರುವುದಿಲ್ಲ. ಕಾರಣವಿಲ್ಲದೆ ಅಳು ಬರುವುದು, ಸಣ್ಣ ಪುಟ್ಟ ವಿಷಯಗಳಿಗೆ ಕೋಪ ಮಾಡಿಕೊಳ್ಳುವುದು, ತಾನು ಒಂಟಿ ಎಂದೆನಿಸಿ ನನಗೆಂದು ಯಾರೂ ಇಲ್ಲ ಇಂತಹ ಹಲವು ಲಕ್ಷಣಗಳು ಪಿಎಂಎಸ್ ಭಾಗವಾಗಿ ಕಾಣಿಸಿ ಕೊಳ್ಳುತ್ತದೆ. ಬಹುತೇಕರಿಗೆ ಕಾರಣಗಳ ಅರಿವೇ ಇಲ್ಲ. ಹಾರ್ಮೋನ್ ಬಿಡುಗಡೆ ಯಾಗುತ್ತಿದ್ದಂತೆ ಹೆಣ್ಣು ಮಕ್ಕಳ ಮೂಡ್ ಕೂಡ ಬದಲಾಗುತ್ತಿರುತ್ತದೆ. ತಾನೇಕೆ ಹೀಗೆ ವರ್ತಿಸುತ್ತಿದ್ದೇನೆಂದು ಯೋಚಿಸಲಾರದಷ್ಟು ಮಾನಸಿಕವಾಗಿ ಕುಗ್ಗಿಸುತ್ತದೆ. ಧ್ಯಾನ, ಯೋಗದಿಂದ ಸರಿಪಡಿಸಬಹುದು. ಡಾರ್ಕ್ ಚಾಕೊಲೇಟ್ ತಿಂದರೆ, ದೇಹಕ್ಕೆ ವಿಶ್ರಾಂತಿ ನೀಡಿದರೆ ಒಳಿತೆಂದರೂ ಈ ಸಮಯದಲ್ಲಿ ಸುತ್ತಲಿನವರ ಭಾವನಾತ್ಮಕ ಸಹಕಾರ ಬಹಳ ಮುಖ್ಯ.

ಆಂದೋಲನ ಡೆಸ್ಕ್

Recent Posts

ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…

56 mins ago

ಕಾಸರಗೋಡು| ಹಳಿ ದಾಟುವಾಗ ರೈಲು ರಿಕ್ಕಿ: ಕೊಡಗು ಮೂಲದ ಯುವಕ ಸಾವು

ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…

1 hour ago

ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್‌ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದ…

1 hour ago

ಮೈಸೂರು | ಹೀಲಿಯಂ ಸ್ಫೋಟ ಪ್ರಕರಣ: ಶವಗಾರದಲ್ಲಿ ಮೃತ ಲಕ್ಷ್ಮಿಯ ಕುಟುಂಬಸ್ಥರ ಆಕ್ರಂದನ

ಮೈಸೂರು: ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಸ್ಫೋಟ ದುರಂತದಲ್ಲಿ ಮೃತಪಟ್ಟ ಬೆಂಗಳೂರಿನ ಲಕ್ಷ್ಮಿ ಅವರ ಮೃತದೇಹವನ್ನು ಶವಗಾರದಲ್ಲಿ ಇರಿಸಲಾಗಿದೆ. ಸುದ್ದಿ…

1 hour ago

ಮಂಡ್ಯ| ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್‌ ರಸ್ತೆಯಲ್ಲಿ…

2 hours ago

ಕಥೆಗಾರ್ತಿ, ಖ್ಯಾತ ಅನುವಾದಕಿ ಸರಿತಾ ಜ್ಞಾನಾನಂದ ನಿಧನ

ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್‌.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು…

2 hours ago