ಮಹಿಳೆ ಸಬಲೆ

ಟಿಕೆಟ್ ಇಲ್ಲದ ಮಹಿಳಾ ಪ್ರಯಾಣಿಕರನ್ನು ರೈಲಿನಿಂದ ಹೊರದಬ್ಬಲಾಗದು

ಅಂಜಲಿ ರಾಮಣ್ಣ

ಒಂದು ಧರ್ಮಕ್ಕೆ ಸೀಮಿತವಾದ ಬಟ್ಟೆಯನ್ನು ಹಾಕಿಕೊಂಡು ಒಬ್ಬಾಕೆ ರೈಲಿನಲ್ಲಿ ಸಾಮಾನ್ಯಬೋಗಿಯಲ್ಲಿ ಪ್ರಯಾಣ ಮಾಡುತ್ತಿರುತ್ತಾಳೆ. ಟಿಕೆಟ್ ಪರೀಕ್ಷಣಾ ಅಧಿಕಾರಿ ಆಕೆಯ ಟಿಕೆಟ್ ತೋರಿಸಲು ಕೇಳಿದಾಗ ಆಕೆ ತನ್ನ ಬಳಿ ಟಿಕೆಟ್ ಇಲ್ಲವೆಂದು, ತಾನು ಟಿಕೆಟ್‌ಅನ್ನು ತೆಗೆದುಕೊಳ್ಳುವ ಅವಶ್ಯಕತೆಯೇ ಇಲ್ಲವೆಂದು ಹೇಳುತ್ತಾಳೆ.

ಯಾಕೆ ಎಂದು ಪ್ರಶ್ನಿಸಿದಾಗ ಆಕೆ ನಮ್ಮ ಧರ್ಮದವರು ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಸಂವಿಧಾನದಲ್ಲೇ ಹೇಳಲಾಗಿದೆ, ಅದಕ್ಕೇ ತಾನು ಟಿಕೆಟ್ ತೆಗೆದುಕೊಳ್ಳುವುದಿಲ್ಲ ಎನ್ನುವ ವಿತಂಡ ವಾದ ಮಾಡುತ್ತಾಳೆ. ಅಲ್ಲಿದ್ದ ಇತರೆ ಪ್ರಯಾಣಿಕರು ಆಕೆಯನ್ನು ಸುತ್ತುವರಿದು ರೈಲಿನಿಂದ ಹೊರಹೋಗಲು ಒತ್ತಾಯಿಸುತ್ತಾರೆ. ಉತ್ತರದ ಒಂದು ರಾಜ್ಯದಲ್ಲಿ ನಡೆದ ಈ ಘಟನೆಯ ವಿಡಿಯೋ ತುಣುಕೊಂದು ಕಳೆದ ವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು.

ಇದನ್ನು ನೋಡಿದ ಕೂಡಲೇ ಈ ದೇಶದ ಯಾವುದೇ ಪ್ರಜೆಗೂ ಆ ಮಹಿಳೆ ಹೇಳಿದ್ದು ಮತ್ತು ಟಿಕೆಟ್ ಇಲ್ಲದೆ ಪ್ರಯಾಣ ಮಾಡಿದ್ದು ಎರಡೂ ತಪ್ಪು ಮತ್ತು ದಂಡನೆಗೆ ಅರ್ಹವಾದ ಅಪರಾಧ ಎನ್ನುವುದು ಗೊತ್ತಾಗುತ್ತದೆ. ಆದರೆ ಆಕೆಯನ್ನು ಘೇರಾವ್ ಮಾಡಿ ಏಕಾಏಕಿ ರೈಲಿನಿಂದ ಇಳಿಯುವಂತೆ ಒತ್ತಾಯ ಮಾಡುತ್ತಿದ್ದ ಜನರದ್ದು ಕೂಡ ಕಾನೂನು ರೀತ್ಯ ಶಿಕ್ಷಾರ್ಹ ಅಪರಾಧವೇ ಹೌದು. ಧರ್ಮ, ಜಾತಿ, ಅಂತಸ್ತುಗಳ ಭೇದವಿಲ್ಲದೆ ಪ್ರತಿಯೊಬ್ಬ ಪ್ರಯಾಣಿಕನೂ ರೈಲಿನಲ್ಲಿ ಟಿಕೆಟ್ ಪಡೆದುಕೊಂಡು ಅಥವಾ ವಿಶೇಷ ಪಾಸ್ ಹೊಂದಿದ್ದರೆ ಮಾತ್ರ ಪ್ರಯಾಣಿಸಲು ಸಾಧ್ಯ. ಟಿಕೆಟ್ ರಹಿತ ಪ್ರಯಾಣಿಕರಿಗೆ ದಂಡ ವಿಧಿಸಲಾಗುತ್ತದೆ. ದಂಡ ನೀಡಲು ಆಗದವರನ್ನು ಕೂಡಲೇ ರೈಲಿನಿಂದ ಇಳಿಸಲಾಗುತ್ತದೆ.

ರೈಲ್ವೇ ಪೊಲೀಸರ ಬಳಿ ದೂರು ದಾಖಲಿಸಿ ನಂತರ ನ್ಯಾಯಾಲಯದ ಮೆಟ್ಟಿಲು ಹತ್ತಿದ ಪ್ರಕರಣಗಳು ಸಹ ಇವೆ. ಆದರೆ ಜೊತೆಗಾರರಿಲ್ಲದೆ ಮಹಿಳೆಯೊಬ್ಬಳು ಅಥವಾ ೧೮ ವರ್ಷ ಗಳು ತುಂಬದ ವ್ಯಕ್ತಿ ಗಳು ರೈಲಿನಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡುತ್ತಿದ್ದರೆ ಅವರುಗಳನ್ನು ರೈಲಿನಿಂದ ಕೆಳಗಿಳಿಸುವ ಹಾಗಿಲ್ಲ.

೧೯೮೯ರಲ್ಲಿ ಜಾರಿಗೆ ಬಂದಿರುವ ಭಾರತೀಯ ರೈಲ್ವೆ ಕಾಯಿದೆಯ ಸೆಕ್ಷನ್ ೧೩೯ರ ಪ್ರಕಾರ ಗಂಡಸರ ಜೊತೆಯಿಲ್ಲದೇ ಒಬ್ಬಳೇ ಹೆಂಗಸು ಟಿಕೆಟ್ ಇಲ್ಲದೆ ಪ್ರಯಾಣ ಮಾಡುತ್ತಿದ್ದರೆ ಆಕೆಗೆ ದಂಡ ವಿಧಿಸಿ ಪ್ರಯಾಣ ಮುಂದುವರಿಸಲು ಅವಕಾಶ ನೀಡಬೇಕು ಅಥವಾ ಆಕೆಯು ಹತ್ತಿದ ನಿಲ್ದಾಣದಲ್ಲಿ ಮಾತ್ರವೇ ತಕ್ಷಣ ಇಳಿಸ ಬಹುದೇ ಹೊರತು ನಂತರದ ಯಾವುದೇ ನಿಲ್ದಾಣದಲ್ಲಿ ಆಕೆಯನ್ನು ರೈಲಿನಿಂದ ಕೆಳಗಿಳಿಯಲು ಬಲವಂತ ಮಾಡುವ ಹಾಗಿಲ್ಲ. ಇಳಿಸ ಬೇಕಾದಂತಹ ಸಂದರ್ಭದಲ್ಲಿ ಆಕೆಯನ್ನು ಮಹಿಳಾ ಪರಿವೀಕ್ಷಕರು ಆ ರೈಲು ಹಾದು ಹೋಗುವ ಯಾವುದಾದರೂ ರಾಜ್ಯದ ಯಾವುದೇ ಜಿಲ್ಲೆಯ ಮುಖ್ಯ ರೈಲು ನಿಲ್ದಾಣದಲ್ಲಿ ಇಳಿಸಬೇಕಿರುತ್ತದೆ. ಹಾಗೆಯೇ ರೈಲಿನಿಂದ ರಾತ್ರಿಯ ವೇಳೆ ಒಂಟಿ ಮಹಿಳೆಯನ್ನು ಟಿಕೆಟ್ ಇಲ್ಲ ಎನ್ನುವ ಕಾರಣಕ್ಕೆ ಹೊರಗಡೆ ಕಳುಹಿಸುವ ಹಾಗಿಲ್ಲ. ಮೇಲೆ ಹೇಳಿದ ಘಟನೆಯಲ್ಲಿ ಆ ಮಹಿಳೆಯ ಪರಿಸ್ಥಿತಿಯು ಯಾವ ಮಹಿಳೆಗೆ ಎದುರಾದರೂ ಆಕೆ ತಕ್ಷಣವೇ ರೈಲ್ವೇ ಸಹಾಯವಾಣಿ ೧೮೨ಕ್ಕೆ ಕರೆ ಮಾಡಿ ದೂರು ಸಲ್ಲಿಸುವ ಅವಕಾಶ ಇರುತ್ತದೆ. ಟಿಕೆಟ್ ಪರೀಕ್ಷಣಾ ಅಧಿಕಾರಿಯಾಗಲೀ, ಸಹ ಪ್ರಯಾಣಿಕರಾಗಲೀ ಒಂಟಿ ಮಹಿಳೆಯನ್ನು ರೈಲಿನಿಂದ ಹೊರಗೆ ಹೋಗಲು ಬಲವಂತ ಮಾಡಿದರೆ ಅವರುಗಳಿಗೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ ೨೯೨ರ ರೀತ್ಯ ಶಿಕ್ಷೆ ವಿಧಿಸಲಾಗುತ್ತದೆ. ಹಾಗೆಯೇ ಆ ಮಹಿಳೆಗೆ ಟಿಕೆಟ್ ರಹಿತ ಪ್ರಯಾಣಕ್ಕಾಗಿ ದಂಡ ವಿಧಿಸಲಾಗುತ್ತದೆ. ೧೨ ವರ್ಷದೊಳಗಿನ ಮಗನನ್ನು ಮಹಿಳೆಯು ತನ್ನ ಜೊತೆ ಮಹಿಳಾ ಬೋಗಿಯಲ್ಲಿ ಕರೆದುಕೊಂಡು ಹೋಗಬಹುದಾಗಿದೆ.

(ಲೇಖಕರು: ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳ ವಕೀಲರು)

ಆಂದೋಲನ ಡೆಸ್ಕ್

Recent Posts

ಮಂಡ್ಯ | ಸೆಸ್ಕಾಂ ಎಇ ಲೋಕಾ ಬಲೆಗೆ

ಮಂಡ್ಯ : ಲಂಚ ಪಡೆಯುತ್ತಿದ್ದಾಗ ಸೆಸ್ಕಾಂ ಉಪ ವಿಭಾಗದ ಸಹಾಯಕ ಇಂಜಿನಿಯರ್ (ಎಇ) ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ…

3 hours ago

ಬಲಪ್ರಯೋಗದ ಮೂಲಕ ಜನರ ಧ್ವನಿ ಅಡಗಿಸಲು ಯತ್ನ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ನೀಟ್‌ ಪರೀಕ್ಷೆ ಅಕ್ರಮ ಹಾಗೂ ಜಂತರ್‌ ಮಂತರ್‌ನಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ…

9 hours ago

ಸಂಸತ್‌ ಮುಂಗಾರು ಅಧಿವೇಶನ: ಸುಗಮ ಕಲಾಪಕ್ಕೆ ಪ್ರಧಾನಿ ಮೋದಿ ಮನವಿ

ನವದೆಹಲಿ: ಇಂದಿನಿಂದ ಸಂಸತ್‌ ಅಧಿವೇಶನ ಆರಂಭವಾಗಲಿದ್ದು, ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.…

11 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ: ಜಾಗೃತ ಕರ್ನಾಟಕ ಆತಂಕ

ಅರ್ಹರು ಮತ ಹಕ್ಕು ಕಳೆದುಕೊಳ್ಳುವ ಆತಂಕ; ಚುನಾವಣಾ ಆಯೋಗಕ್ಕೆ ‘ಜಾಗೃತ ಕರ್ನಾಟಕ’ ಸಮಯೋಚಿತ ಪ್ರಶ್ನೆ ಕರ್ನಾಟಕದಲ್ಲಿ ಮತದಾನದ ಹಕ್ಕು ಕಳೆದುಕೊಳ್ಳುವ…

12 hours ago

ವಾಂಗ್ಚುಕ್ ಹೋರಾಟ ಕುರಿತು ನಿರ್ಲಕ್ಷ್ಯ ಸಲ್ಲದು

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಸುಮಾರು ೨೦ ದಿನಗಳ ಕಾಲ…

15 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂಪುಟ ವಿಸ್ತರಣೆ ನಿರೀಕ್ಷೆ: ಸಂಕಟ ಪರೀಕ್ಷೆ?

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಈವಾರ ವಿಸ್ತರಣೆಯಾಗುವ ನಿರೀಕ್ಷೆ ಇದೆ. ಅಂದ ಹಾಗೆ ಸಂಪುಟ ವಿಸ್ತರಣೆ ಪ್ರಕ್ರಿಯೆ ಈಗಾಗಲೇ…

15 hours ago